Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕಾನ್‌ಸ್ಟೇಬಲ್‌ ಕೊಲೆ ಯತ್ನ ಪ್ರಕರಣ – ಇಬ್ಬರು ಅಪರಾಧಿಗಳಿಗೆ ಜೈಲು ಶಿಕ್ಷೆ, ದಂಡ
    ಇತ್ತೀಚಿನ ಸುದ್ದಿ

    ಮಂಗಳೂರು: ಕಾನ್‌ಸ್ಟೇಬಲ್‌ ಕೊಲೆ ಯತ್ನ ಪ್ರಕರಣ – ಇಬ್ಬರು ಅಪರಾಧಿಗಳಿಗೆ ಜೈಲು ಶಿಕ್ಷೆ, ದಂಡ

    September 10, 2024
    Share

    ಮಂಗಳೂರು: ಉಳ್ಳಾಲ ಠಾಣಾ ಕಾನ್‌ಸ್ಟೇಬಲ್‌ ಒಬ್ಬರನ್ನು ಕೊಲೆಗೆ ಯತ್ನಿಸಿದ್ದ ಇಬ್ಬರು ಅಪರಾಧಿಗಳಿಗೆ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10ವರ್ಷ ಜೈಲು ಶಿಕ್ಷೆ ಮತ್ತು ತಲಾ 16ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಉಳ್ಳಾಲದ ನಿವಾಸಿಗಳಾದ ಮುಸ್ತಾಕ್ (32) ಮತ್ತು ಜಾಕೀರ್ (36) ಶಿಕ್ಷೆಗೊಳಗಾದ ಅಪರಾಧಿಗಳು. ಪ್ರಕರಣದ 2ನೇ ಆರೋಪಿ ಯಾಸೀನ್ ಮತ್ತು 3ನೇ ಆರೋಪಿ ಅಶ್ರಫ್(50) ತಲೆಮರೆಸಿಕೊಂಡಿದ್ದಾರೆ. 2015ರ ಡಿ.17ರಂದು ರಾತ್ರಿ ನಾಲ್ವರು ಅಪರಾಧಿಗಳು ಉಳ್ಳಾಲದ ಸಾರ್ವಜನಿಕ ಸ್ಥಳದಲ್ಲಿ ಬಾಟಲಿಗಳನ್ನು ಎಸೆದು ಗಲಾಟೆ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಉಳ್ಳಾಲ ಠಾಣೆಯ ಆಗಿನ ಹೆಡ್‌ಕಾನ್‌ಸ್ಟೇಬಲ್ ಉಮೇಶ್‌ ಮತ್ತು ಕಾನ್‌ಸ್ಟೇಬಲ್ ರವೀಂದ್ರ ಸ್ಥಳಕ್ಕೆ ತೆರಳಿ ಗಲಾಟೆ ಮಾಡುತ್ತಿದ್ದ ಬಗ್ಗೆ ಪ್ರಶ್ನಿಸಿದ್ದಾರೆ. ಇದರಿಂದ ಕುಪಿತಗೊಂಡ ದುಷ್ಕರ್ಮಿಗಳು ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂದರ್ಭ ಮೊದಲ ಆರೋಪಿ ಮುಸ್ತಾಕ್ ನಿಮ್ಮಲ್ಲೊಬ್ಬರನ್ನು ಕೊಲೆ ಮಾಡಿದರೆ ಬುದ್ಧಿ ಬರುತ್ತದೆ ಎಂದು ತನ್ನ ಕೈಯಲ್ಲಿದ್ದ ಚಾಕುವಿನಿಂದ ರವೀಂದ್ರರಿಗೆ ಇರಿದು ಕೊಲೆಗೆ ಯತ್ನಿಸಿದ್ದ. ಈ ವೇಳೆ ಉಮೇಶ್ ತಡೆದಿದ್ದರು. ಒಂದನೇ ಆರೋಪಿ ಮತ್ತು ಇತರರು ರವೀಂದ್ರರ ಕೈಗಳನ್ನು ಹಿಡಿದು ಬಲವಾಗಿ ತಿರುಗಿಸಿದ್ದಾರೆ. ಮುಸ್ತಾಕ್ ಚೂರಿಯಿಂದ ರವೀಂದ್ರ ಅವರ ಎಡಕೈಗೆ ರಕ್ತಬರುವಂತೆ ತಿರುವಿದ್ದ. ಉಮೇಶ್‌ರಿಗೂ ಹೊಡೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಎಂದು ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ಬಗ್ಗೆ ಆಗಿನ ಉಳ್ಳಾಲ ಠಾಣೆಯ ಎಸ್‌ಐ ಗುರಪ್ಪ ಕಾಂತಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್‌.ವಿ. ಆರೋಪ ಸಾಬೀತಾಗಿದೆ ಎಂದು ಘೋಷಿಸಿದರಲ್ಲದೇ, ಒಂದನೇ ಮತ್ತು ನಾಲ್ಕನೇ ಅಪರಾಧಿಗಳಿಗೆ ಶಿಕ್ಷೆ ವಿಧಿಸಿದ್ದಾರೆ. ಐಪಿಸಿ ಕಲಂ 307ರ ಅಡಿ 10ವರ್ಷ ಜೈಲು ಮತ್ತು ತಲಾ 16 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸರಕಾರದ ಪರವಾಗಿ ಅಭಿಯೋಜಕರಾದ ಬಿ.ಶೇಖರ್ ಮತ್ತು ಚೌಧರಿ ಮೋತಿಲಾಲ್ ವಾದಿಸಿದ್ದರು.

    Post Views: 228

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.