Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಸಮುದ್ರಪಾಲಾಗಿದ್ದ ಯುವಕನ ಮೃತದೇಹ ತ್ರಿಶೂರ್‌ನಲ್ಲಿ ಪತ್ತೆ
    ಇತ್ತೀಚಿನ ಸುದ್ದಿ

    ಕಾಸರಗೋಡು: ಸಮುದ್ರಪಾಲಾಗಿದ್ದ ಯುವಕನ ಮೃತದೇಹ ತ್ರಿಶೂರ್‌ನಲ್ಲಿ ಪತ್ತೆ

    September 11, 2024
    Share

    ಮಂಗಳೂರು:ಹತ್ತು ದಿನಗಳ ಹಿಂದೆ ಗಡಿ ಭಾಗದ ಕಾಸರಗೋಡು ಜಿಲ್ಲೆಯ ಕಿಯೂರು ಅಳಿವೆಬಾಗಿಲಿನಲ್ಲಿ ಸಮುದ್ರ ಪಾಲಾಗಿದ್ದ ಚೆಮ್ನಾಡ್ ನಿವಾಸಿಯ ಮೃತದೇಹ ತ್ರಿಶೂರು ಸಮೀಪದ ಅಝಿಕ್ಕೋಡ್ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ. ಚೆಮ್ನಾಡ್ ಕಲ್ಲುವಳಪ್ಪುವಿನ ಮುಹಮ್ಮದ್ ರಿಯಾಝ್(37) ಮೃತಪಟ್ಟವರು. ಆ.31ರಂದು ಮುಂಜಾನೆ 5:30ರ ಸುಮಾರಿಗೆ ಘಟನೆ ನಡೆದಿತ್ತು. ಕಿಯೂರು ಅಳಿವೆಬಾಗಿಲಿನಲ್ಲಿ ಗಾಳ ಹಾಕಿ ಮೀನು ಹಿಡಿಯಲು ತೆರಳಿದ್ದ ರಿಯಾಝ್ ನಾಪತ್ತೆಯಾಗಿದ್ದರು. ಬೆಳಗ್ಗೆ 9 ಗಂಟೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಮೊಬೈಲ್‌ಗೆ ಕರೆ ಮಾಡಿದರೂ ಕರೆ ಸ್ವೀಕರಿಸುತ್ತಿರಲಿಲ್ಲ. ಈ ಮಧ್ಯೆ ಕಿಯೂರು ಅಳಿವೆಬಾಗಿಲಿನಲ್ಲಿ ರಿಯಾಝ್ ನ ಸ್ಕೂಟರ್ ಹಾಗೂ ಗಾಳ ಹಾಕುವ ವಸ್ತುಗಳನ್ನು ಒಳಗೊಂಡ ಬ್ಯಾಗ್ ಪತ್ತೆಯಾಗಿತ್ತು. ಬಳಿಕ ಕುಟುಂಬಸ್ಥರು ಮೇಲ್ಪರಂಬ ಪೊಲೀಸರಿಗೆ ಮಾಹಿತಿ ನೀಡಿದ್ದು, ಅದರಂತೆ ಪೊಲೀಸರು, ಅಗ್ನಿ ಪೊಲೀಸ್, ಮೀನುಗಾರಿಕಾ ಇಲಾಖೆ ಹಾಗೂ ಮೀನುಗಾರರರು ರಿಯಾಝ್ ಅವರಿಗಾಗಿ ಶೋಧ ನಡೆಸಿದ್ದರು. ಆದರೆ ಅವರು ಪತ್ತೆಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮುಳುಗುತಜ್ಞ ಈಶ್ವರ್ ಮಲ್ಪೆಯವರನ್ನು ಕರೆಸಿ ಗಂಟೆಗಳ ಕಾಲ ಶೋಧ ನಡೆಸಿದರೂ ಪ್ರಯೋಜವಾಗಲಿಲ್ಲ. ಬಳಿಕ ಎರಡು ದಿನಗಳ ಕಾಲ ನೌಕಾ ಪಡೆ ಸಿಬ್ಬಂದಿ ಹುಡುಕಾಟ ನಡೆಸಿದರೂ ವಿಫಲಗೊಂಡಿತ್ತು. ಈ ನಡುವೆ ಸೋಮವಾರ ಮಧ್ಯಾಹ್ನ ತ್ರಿಶೂರು ಅಝಿಕ್ಕೋಡ್ ಕಡಲ ಕಿನಾರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಪ್ಯಾಂಟ್ ಕಿಸೆಯಿಂದ ಲಭಿಸಿದ ಮೊಬೈಲ್‌ ನಲ್ಲಿದ್ದ ಸಿಮ್ ಹಾಗೂ ಧರಿಸಿದ್ದ ಜಾಕೆಟ್ ನಿಂದ ರಿಯಾಝ್ ನ ಮೃತದೇಹ ಎಂದು ಗುರುತಿಸಲಾಗಿ ಮೃತದೇಹವನ್ನು ಕೊಡಂಗಲ್ಲೂರು ಸರಕಾರಿ ಆಸ್ಪತ್ರೆ ಶವಾಗಾರದಲ್ಲಿರಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಚೆಮ್ನಾಡ್ ಗೆ ತರಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

    Post Views: 177

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.