ತಾಯಿ ಹಾಗೂ ತನ್ನ ಇಬ್ಬರು ಮಕ್ಕಳ ಶವವಾಗಿ ಪತ್ತೆಯಾಗಿದ್ದು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಬಳಿಯ ಕೆರೆಯೊಂದರಲ್ಲಿ ಮೂವರು ಶವವಾಗಿ ಪತ್ತೆಯಾಗಿದ್ದಾರೆ. ಕೆರೆಯಲ್ಲಿ ಶವಗಳು ತೇಲಾಡುತ್ತಿದ್ದನ್ನು ಕಂಡ ಸ್ಥಳೀಯರು ಪೊಲೀಸರು ಹಾಗೂ ಆಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸದ್ಯ ತಾಯಿ ಹಾಗೂ ಇಬ್ಬರ ಮಕ್ಕಳ ಮೃತದೇಹ ಮೇಲೆತ್ತಲಾಗಿದ್ದು, ಮೃತ ತಾಯಿ ಚಿಂತಾಮಣಿ ತಾಲೂಕು ಯಗವಕೋಟೆ ನಿವಾಸಿ ರಾಧ ಎಂದು ತಿಳಿದುಬಂದಿದೆ. ಮಕ್ಕಳನ್ನು 4 ವರ್ಷದ ಮಗಳು ಪೂರ್ವಿತಾ ಎಂದು ಗುರುತಿಸಲಾಗಿದ್ದು, ಒಂದೂವರೆ ವರ್ಷದ ಮತ್ತೊಬ್ಬ ಮಗಳಿಗೆ ಇನ್ನೂ ಹೆಸರಿಟ್ಟಿಲ್ಲ.ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ನಿಖರವಾಗಿ ತಿಳಿದಿಲ್ಲ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.