Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಂದು ಸ್ವಾತಂತ್ರ್ಯ ಸಮರ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ’
    ಇತ್ತೀಚಿನ ಸುದ್ದಿ

    ಇಂದು ಸ್ವಾತಂತ್ರ್ಯ ಸಮರ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ’

    November 19, 2022
    Share

    ಮಂಗಳೂರು: ಸ್ವಾತಂತ್ರ್ಯ ಸಮರ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಇಂದು ಮಂಗಳೂರಿನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಸಿಎಂ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದು ಸ್ವಾಮೀಜಿಗಳು, ಕೇಂದ್ರ, ರಾಜ್ಯದ ಸಚಿವರುಗಳೂ ಭಾಗಿಯಾಗಲಿದ್ದಾರೆ.

    ಭಾರತದ ಬಾವುಟವನ್ನು ಹಾರಿಸಿದ ಇಂದಿನ ಬಾವುಟಗುಡ್ಡೆಯ ಟಾಗೋರ್ ಪಾರ್ಕ್‍ಲ್ಲೇ ಪ್ರತಿಮೆ ನಿರ್ಮಿಸಲಾಗಿದ್ದು ಪಾಳು ಬಿದ್ದಿದ್ದ ಪಾರ್ಕ್‍ಗೂ ಮರು ಜೀವಬಂದಿದೆ.

    ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರಿಗೆ ಗೌರವ ಸಲ್ಲಿಸುವ ಹಿನ್ನಲೆಯಲ್ಲಿ ಸ್ವಾತಂತ್ರ್ಯದ 75 ನೇ ವರ್ಷದ ಸಂಭ್ರಮಾಚರಣೆಯಲ್ಲಿ ಅವರ ಪ್ರತಿಮೆ ಸ್ಥಾಪಿಸಲಾಗಿದೆ. ಸುಳ್ಯದಿಂದ ರೈತರ ಸೈನ್ಯ ಕಟ್ಟಿಕೊಂಡು ಮಂಗಳೂರುವರೆಗೂ ಬ್ರಿಟಿಷರನ್ನು ಹಿಮ್ಮೆಟ್ಟಿಸಿದ ರಾಮಯ್ಯಗೌಡರ ಪ್ರತಿಮೆಯನ್ನ ಇಂದು ಸಿಎಂ ಬೊಮ್ಮಾಯಿ ಅನಾವರಣ ಮಾಡಲಿದ್ದಾರೆ.

    ಮಂಗಳೂರಿನ ಹೃದಯ ಭಾಗದಲ್ಲಿರುವ ಬಾವುಟ ಗುಡ್ಡೆಯ ಟಾಗೋರ್ ಪಾರ್ಕ್ (Tagore Park) ನಲ್ಲಿ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಸ್ವಾತಂತ್ರ್ಯದ 75 ನೇ ವರ್ಷಾಚರಣೆ ಹಿನ್ನಲೆಯಲ್ಲಿ ಪ್ರತಿಮೆ ಲೋಕಾರ್ಪಣೆ ಮಾಡಲಾಗುತ್ತಿದೆ.

    ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿಯ ಡಾ.ನಿರ್ಮಲಾನಂದ ಶ್ರೀಗಳು, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಸಚಿವ ಅಶ್ವಥ್ ನಾರಾಯಣ್ ಸೇರಿದಂತೆ ಇನ್ನಿತರರು ಭಾಗಿಯಾಗಲಿದ್ದಾರೆ.

    ರಾಮಯ್ಯ ಗೌಡರು ಭಾರತದ ಬಾವುಟವನ್ನು ಹಾರಿಸಿದ ಬಾವುಟ ಗುಡ್ಡೆಯ ಟಾಗೋರ್ ಪಾರ್ಕ್ ನಿರ್ವಹಣೆ ಇಲ್ಲದೆ ಪಾಳು ಬಿದ್ದಿತ್ತು. ಇದೀಗ ಪ್ರತಿಮೆ ಅನಾವರಣ ಮಾಡುವ ಹಿನ್ನೆಲೆಯಲ್ಲಿ ಪಾರ್ಕ್ ಗೂ ಹೊಸ ಕಳೆ ಬಂದಿದೆ.

    ಜಿಲ್ಲಾಡಳಿತ ಹಾಗೂ ಪಾಲಿಕೆ ಪ್ರತಿಮೆ ಹಾಗೂ ಪಾರ್ಕ್‍ನ ನಿರ್ಮಾಣದ ಕೆಲಸ ಮಾಡಿದ್ದು, ಯಾವುದೇ ತೊಂದರೆಯಾಗದಂತೆ ನಿರ್ವಹಣೆ ಮಾಡಲು ಪಾಲಿಕೆಗೆ ಜವಾಬ್ದಾರಿ ನೀಡಲಾಗಿದೆ.

    ಒಟ್ಟಿನಲ್ಲಿ ಸ್ವಾತಂತ್ರ್ಯಕ್ಕಾಗಿ ಸಾಕಷ್ಟು ಹೋರಾಟಗಾರರು ಹೋರಾಡಿ ಬಲಿದಾನ ಮಾಡಿದ್ರೂ ಹೆಚ್ಚಿನವರಿಗೆ ತಿಳಿದಿಲ್ಲ. ಹೀಗಾಗಿ ಸರ್ಕಾರ ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಹಿನ್ನಲೆಯಲ್ಲಿ ಇಂತಹ ಅಪ್ರತಿಮ ಹೋರಾಟಗಾರರನ್ನು ನೆನಪಿಸುತ್ತಿರೋದು ಶ್ಲಾಘನೀಯ.

    Post Views: 205

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.