Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಕೇಸ್: ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಕೇಸ್: ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು

    August 1, 2025
    Share

    ಬೆಂಗಳೂರು: ಧರ್ಮಸ್ಥಳದಲ್ಲಿನ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣ ಸಂಬಂಧ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ರದ್ದುಗೊಳಿಸಿ ಆದೇಶಿಸಿದೆ.

    ಧರ್ಮಸ್ಥಳದಲ್ಲಿ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್.ಡಿ ಅವರು ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ ತಂದಿದ್ದರು.

    ಇಂದು ಈ ಪ್ರತಿಬಂಧಕಾದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ದಕ್ಷಿಣ ಕನ್ನಡದ ಕುಡ್ಲ ರ್ಯಾಂಪೇಜ್ ಪ್ರಧಾನ ಸಂಪಾದಕ ಅಜಯ್ ಅವರು ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನು ಒಳದೊಂಡಂತ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು.

    ಈ ಅರ್ಜಿಯನ್ನು ಪುರಸ್ಕರಿಸಿದಂತ ಹೈಕೋರ್ಟ್ ನ್ಯಾಯಪೀಠವು ದಿನಾಂಕ 8-7-2025ರಂದು ವಿಚಾರಣಾಧೀನ ನ್ಯಾಯಾಲಯವು ಮಾಡಿರುವ ಆಕ್ಷೇಪಾರ್ಹವಾದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ರದ್ದುಪಡಿಸಿದೆ. ಇದಲ್ಲದೇ ಮಧ್ಯಂತರ ಅರ್ಜಿಯನ್ನು ಹೊಸದಾಗಿ ಪರಿಗಣಿಸಲು ಪ್ರಕರಣವನ್ನು ಸಕ್ಷಮ ನ್ಯಾಯಾಲಯಕ್ಕೆ ವಾಪಾಸ್ ಕಳುಹಿಸಿದೆ.

    ಇನ್ನೂ ವಿಚಾರಣಾಧೀನ ನ್ಯಾಯಾಲಯವು ಈ ಆದೇಶವನ್ನು ಮಾಡಿರುವ ಅಂಶಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ಸಕ್ಷಮ ನ್ಯಾಯಾಲಯವು ಮಧ್ಯಂತರ ಅರ್ಜಿಯನ್ನು ತುರ್ತಾಗಿ ನಿರ್ಧರಿಸಬೇಕು ಎಂಬುದಾಗಿ ತೀರ್ಪಿನಲ್ಲಿ ಉಲ್ಲೇಖಿಸಿ ಆದೇಶಿಸಿದೆ.

    ಇದೇ ಸಂದರ್ಭದಲ್ಲಿ ಸಿವಿಲ್ ದಾವೆ, ಕ್ರಿಮಿನಲ್ ಪ್ರಕ್ರಿಯೆ, ಆರೋಪ, ಪ್ರತ್ಯಾರೋಪದ ಮೇಲೆ ಈ ನ್ಯಾಯಲಯವು ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ. ಆದೇಶದಲ್ಲಿ ಪರಿಗಣಿಸಿರುವ ಒಂದು ಅಂಶವನ್ನು ಹೊರತುಪಡಿಸಿ ಪಕ್ಷಕಾರರ ನಡುವೆ ಎಲ್ಲಾ ವಾದಗಳನ್ನು ಮುಕ್ತವಾಗಿ ಇರಿಸಲಾಗಿದೆ ಎಂಬುದಾಗಿ ಹೈಕೋರ್ಟ್ ತಿಳಿಸಿದೆ.

    Post Views: 178

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.