Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನದ 93ನೆ ಅಧಿವೇಶನ – ಮಾನವ ಸೇವೆಯೇ ಶ್ರೇಷ್ಠ ಧರ್ಮ: ಸಚಿವ ಡಾ. ಎಂ.ಬಿ. ಪಾಟೀಲ್
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನದ 93ನೆ ಅಧಿವೇಶನ – ಮಾನವ ಸೇವೆಯೇ ಶ್ರೇಷ್ಠ ಧರ್ಮ: ಸಚಿವ ಡಾ. ಎಂ.ಬಿ. ಪಾಟೀಲ್

    November 19, 2025
    Share

    ಉಜಿರೆ: ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿರುವ ಭಾರತದ ಸರ್ವಧರ್ಮಗಳೂ ಸತ್ಯ, ಅಹಿಂಸೆ, ಪರೋಪಕಾರ, ಸೇವೆ, ಅನುಕಂಪ ಮೊದಲಾದ ಮಾನವೀಯ ಮೌಲ್ಯಗಳಿಗೆ ಒತ್ತು ನೀಡಿ ವಿಶ್ವವೇ ಒಂದು ಕುಟುಂಬ ಎಂದು ಭಾವಿಸುವ ವಿಶಾಲ ಮನೋಭಾವ ನಮ್ಮದಾಗಿದೆ. ನಮ್ಮ ಧರ್ಮವನ್ನು ಪ್ರೀತಿಸಿ ಅನುಷ್ಠಾನಗೊಳಿಸುವದರೊಂದಿಗೆ ಇತರರ ಧರ್ಮವನ್ನೂ ಗೌರವಿಸುವುದು ನಮ್ಮ ಸನಾತನ ಧರ್ಮ ಮತ್ತು ಸಂಸ್ಕೃತಿಯ ಜೀವಾಳವಾಗಿದೆ. ಮಾನವ ಸೇವೆಯೇ ಶ್ರೇಷ್ಠ ಧರ್ಮ ಎಂದು ಸಚಿವ ಡಾ. ಎಂ.ಬಿ. ಪಾಟೀಲ್ ಹೇಳಿದರು.

    ಅವರು ಮಂಗಳವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಸರ್ವಧರ್ಮ ಸಮ್ಮೇಳನದ ತೊಂಭತ್ತಮೂರನೆ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು.

    ಸರ್ವಧರ್ಮ ಸಮನ್ವಯ ಕೇಂದ್ರವಾಗಿ ಸರ್ವಧರ್ಮೀಯರಿಗೂ ಸೇವೆ ನೀಡುವ ಧರ್ಮಸ್ಥಳ ಅನುಪಮ ಶ್ರದ್ಧಾ-ಭಕ್ತಿಯ ಕೇಂದ್ರವಾಗಿದೆ. ಇಲ್ಲಿನ ಧರ್ಮಸಹಿಷ್ಣುತೆ, ಚತುರ್ವಿದ ದಾನ ಪರಂಪರೆ, ಮಾನವೀಯ ಸೇವೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಮಾನವ ಸೇವೆಯೇ ಶ್ರೇಷ್ಠ ಧರ್ಮವಾಗಿದ್ದು ಲಕ್ಷದೀಪೋತ್ಸವ ಪ್ರತಿ ಮನೆಯಲ್ಲಿಯೂ, ಪ್ರತಿಯೊಬ್ಬರ ಮನದಲ್ಲಿಯೂ ವಿಶ್ವಸಾಮರಸ್ಯದ ಬೆಸುಗೆಯನ್ನು ಬೆಸೆಯಲಿ. ಪರಸ್ಪರ ಪ್ರೀತಿ-ವಿಶ್ವಾಸದೊಂದಿಗೆ ಶಾಂತಿ, ಸಾಮರಸ್ಯದ ಸೌಹಾರ್ದಯುತ ಬದುಕಿಗೆ ಲಕ್ಷದೀಪೋತ್ಸವ ನಾಂದಿಯಾಗಲಿ. ಲಕ್ಷದೀಪೋತ್ಸವದ ಹೊಂಬೆಳಕಿನಲ್ಲಿ ನೈತಿಕತೆ, ಸೇವೆ ಜೀವನ ಮೌಲ್ಯಗಳು ನಿರಂತರ ನಂದಾದೀಪವಾಗಿ ಸರ್ವರ ಸಾರ್ಥಕ ಬದುಕಿಗೆ ದಾರಿದೀಪವಾಗಲಿ ಎಂದು ಅವರು ಹಾರೈಸಿದರು.

    Post Views: 105

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.