Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಡಿಜಿಟಲ್ ಅರೆಸ್ಟ್ ಮಾಡಿ ಬರೋಬ್ಬರಿ 41 ಲಕ್ಷಹಣವನ್ನು ವಸೂಲಿ..!!
    ಇತ್ತೀಚಿನ ಸುದ್ದಿ

    ಮಂಗಳೂರು: ಡಿಜಿಟಲ್ ಅರೆಸ್ಟ್ ಮಾಡಿ ಬರೋಬ್ಬರಿ 41 ಲಕ್ಷಹಣವನ್ನು ವಸೂಲಿ..!!

    February 26, 2026
    Share

    ಮಂಗಳೂರು : ಮುಂಬೈ ಸಿಸಿಬಿ ಪೊಲೀಸ್ ಎಂದು ಹೇಳಿ ವ್ಯಕ್ತಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ ಬರೋಬ್ಬರಿ 41 ಲಕ್ಷಹಣವನ್ನು ವಸೂಲಿ ಮಾಡಿದ ಘಟನೆ ನಡೆದಿದ್ದು, ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ದೂರಿನ ಪ್ರಕಾರ ಸಂತ್ರಸ್ತ ವ್ಯಕ್ತಿಗೆ ದಿನಾಂಕ 31-01-2026 ರಂದು ಯಾರೋ ಅಪರಿಚಿತ ವ್ಯಕ್ತಿ ದೆಹಲಿಯಿಂದ 8796142545 ಈ ನಂಬರ್ ನಿಂದ ಕರೆ ಮಾಡಿ ಮುಂಬೈ ಸಿಸಿಬಿ ಪೊಲೀಸ್ ಎಂದು ಪರಿಚಯಿಸಿಕೊಂಡಿದ್ದಾರೆ. ವೇಳೆ ವ್ಯಕ್ತಿಗೆ ನಿಮ್ಮ ಗುರುತಿನ ಚೀಟಿ ಬಳಸಿಕೊಂಡು ಮುಂಬೈನಲ್ಲಿ ಕೆನರಾ ಬ್ಯಾಂಕ್ ನಲ್ಲಿ ಖಾತೆಯನ್ನು ತೆರೆದಿದ್ದು ಅದರಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆಯುತ್ತಿದ್ದು, ಹಾಗೂ ಗುರುತಿನ ಕಾರ್ಡ್ ನಂಬರ್ ನ್ನು ಉಪಯೋಗಿಸಿಕೊಂಡು ಮೊಬೈಲ್ ನಂಬರ್ ನ್ನು ಖರೀದಿಯಾಗಿದೆ ಹಾಗೂ ಕೆನರಾ ಬ್ಯಾಂಕ್ ಖಾತೆ ತರೆದು ಅಕ್ರಮ ಹಣ ವರ್ಗಾವಣೆ ಮಾಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಈ ಹಿನ್ನಲೆ ನಿಮ್ಮನ್ನ ಅರೆಸ್ಟ್ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ.

    ಬಳಿಕ ದೂರುದಾರ ನನ್ನು ಡಿಜಿಟಲ್ ಅರೆಸ್ಟ್ ಮಾಡಿದಲ್ಲದೆ ಅರೆಸ್ಟ್ ಮಾಡಲು ಸುಪ್ರಿಂ ಕೋರ್ಟ್ ವಾರೆಂಟ್ ಆಗಿದ್ದು, ಬಂಧಿಸಲು ಅರೆಸ್ಟ್ ವಾರೆಂಟ್ ಕೂಡ ಹೊರಡಿಸಿರುವುದಾಗಿ ತಿಳಿಸಿರುತ್ತಾರೆ. ನಂತರ ವಾಟ್ಸ್ ಆ್ಯಫ್ ಮೂಲಕ ವಿಡಿಯೋ ಕಾಲ್ ನಲ್ಲಿ ಇದ್ದು ತನಿಖೆಗೆ ಸಹಕರಿಸಬೇಕಾಗಿ ತಿಳಿಸಿ ಇಲ್ಲವಾದಲ್ಲಿ ಕೂಡಲೇ ಬಂಧಿಸುವುದಾಗಿ ಅಷ್ಟೇ ಅಲ್ಲದೇ ಈ ವಿಚಾರವನ್ನು ಮಗ ಹಾಗೂ ಹಾಗೂ ಹೆಂಡತಿಗೆ ಸಹ ತಿಳಿಸಿದಂತೆ ಹೆದರಿಸಿರುತ್ತಾರೆ. ನಂತರ ಸಂತ್ರಸ್ತ ವ್ಯಕ್ತಿಯ ಎಲ್ಲಾ ವೈಯಕ್ತಿಕ ವಿವರಗಳು ಮತ್ತು ಬ್ಯಾಂಕಿನ ವಿವರಗಳನ್ನು ಪಡೆದುಕೊಂಡಿರುತ್ತಾರೆ. ಈ ರೀತಿಯಾಗಿ ಪಿರ್ಯಾದಿದಾರರಿಗೆ ಆನ್ ಲೈನ್ ಮೂಲಕ ಡಿಜಿಟಲ್ ಅರೆಸ್ಟ್ ಮಾಡಿ ನಿರಂತರವಾಗಿ ವಿವಿಧ ರೀತಿಯಾಗಿ ವಿಚಾರಣೆ ಮಾಡಿ ಬಂಧನದಿಂದ ಪಾರಾಗಬೇಕಾದರೆ ಬ್ಯಾಂಕ್ ಖಾತೆಗಳ ಪರಿಶೀಲನೆ ಮಾಡಬೇಕು ಎಂದು ತಿಳಿಸಿ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಪರಿಶೀಲನೆ ಮುಗಿಯುವವರೆಗೂ ವರ್ಗಾಯಿಸುವಂತೆ ಹಾಗೂ ಪಾವತಿಸಿದ ಎಲ್ಲಾ ಹಣವನ್ನು ವಾಪಾಸು ನೀಡುವಂತೆ ತಿಳಿಸಿರುತ್ತಾರೆ.


    ಇದರಿಂದ ಭಯಗೊಂಡ ದೂರುದಾರ ಆರೋಪಿಗಳು ತಿಳಿಸಿದ ಬ್ಯಾಂಕ್ ಖಾತೆಗಳಿಗೆ ದಿನಾಂಕ 09-02-2026 ರಿಂದ 18-02-2026 ರವರೆಗೆ ಒಟ್ಟು ರೂ 41,85,000/- ಹಣವನ್ನು RTGS & NEFT ಮುಖೇನಾ ಹಣ ವರ್ಗಾವಣೆ ಮಾಡಿರುತ್ತಾರೆ.

    ಇದೀಗ ಹಣ ಕಳೆದುಕೊಂಡ ಬಳಿಕ ಪೊಲೀಸ್ ಠಾಣೆಗೆ ಆಗಮಿಸಿ ದೂರು ದಾಖಲಿಸಿದ್ದಾರೆ.

    Post Views: 145

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.