Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಡಿನೆಲ್ಲೆಡೆ ಇಂದು ದೀಪಾವಳಿ ಹಬ್ಬದ ಸಂಭ್ರಮ
    ಇತ್ತೀಚಿನ ಸುದ್ದಿ

    ನಾಡಿನೆಲ್ಲೆಡೆ ಇಂದು ದೀಪಾವಳಿ ಹಬ್ಬದ ಸಂಭ್ರಮ

    October 24, 2022
    Share

    ಮಂಗಳೂರು: ನಾಡಿನೆಲ್ಲೆಡೆ ಇದೀಗ ದೀಪಾವಳಿ ಹಬ್ಬದ ಸಂಭ್ರಮ. ಈಗಾಗಲೇ ಜನತೆ ದೀಪಾವಳಿ ಹಬ್ಬದ ಸಡಗರದಲ್ಲಿ ಖರೀದಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇಂದು ನರಕಚತುರ್ದಶಿ ಸಂಭ್ರಮವಾಗಿದ್ದು, ನಾಡಿನ ಜನತೆ ಎಣ್ಣೆ ಹಚ್ಚಿ ಸ್ನಾನ ಮಾಡಿ, ದೇವರಿಗೆ ವಿಶೇಷ ಪೂಜೆ ಮಾಡಿದರು. ಇನ್ನು ದೀಪಾವಳಿ ಅಂದರೆ ಪಟಾಕಿ ಇರಲೇಬೇಕು. ಆದರೆ ಪಟಾಕಿ ಸಿಡಿಸುವ ಮುನ್ನ ಇರಲಿ ಎಚ್ಚರ ಎನ್ನುವುದು ಕಿವಿಮಾತು. ಕ್ಷಣ ಮಾತ್ರದ ಸಂಭ್ರಮಕ್ಕೆ ಇಡೀ ಬದುಕನ್ನು ಕತ್ತಲೆ ಮಾಡಿಕೊಳ್ಳುವವರು ಇದ್ದಾರೆ.

    ಹೀಗಾಗಿ ಪಟಾಕಿಸಿಡಿಸುವುದಿದ್ದರೂ ಅತ್ಯಂತ ಜಾಗರೂಕರಾಗಿ ಪಟಾಕಿ ಸಿಡಿಸಿರಿ ಎನ್ನುವುದು ಹಿರಿಯರ ಎಚ್ಚರಿಕೆ. ಇನ್ನು ಜನತೆ ಹಸಿರು ಪಟಾಕಿಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ಧ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ 125 ಡೆಸಿಬಲ್‌ ಅಥವಾ 145 ಡಿಸಿಬಲ್‌ ಹೆಚ್ಚು ಶಬ್ಧ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳ ಮಾರಾಟ ಮತ್ತು ಉಪಯೋಗವನ್ನು ನಿಷೇಧಿಸಲಾಗಿದೆ.

    ರಾತ್ರಿ 10ರಿಂದ ಬೆಳಿಗ್ಗೆ 6ಗಂಟೆಯವರೆಗೆ ಪಟಾಕಿ, ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶ್ಯಬ್ಧ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳ ಸುತ್ತಮುತ್ತ ಯಾವುದೇ ರೀತಿಯ ಶಬ್ಧ ಉಂಟುಮಾಡುವ ನಿಷೇಧಿತ, ಪಟಾಕಿ ಸಿಡಿಮದ್ದು ಬಳಸಬಾರದು. ಸುಪ್ರೀಂಕೋರ್ಟ್ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಬೇಕು. ಸಾರ್ವಜನಿಕರು ಪಟಾಕಿ ಹಾಗೂ ಸಿಡಿಮದ್ದುಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಸಿಡಿಸಬೇಕು. ಸಾರ್ವಜನಿಕರಲ್ಲಿ ದೀಪಾವಳಿ ಹಬ್ಬವನ್ನು ಸಿಡಿಮದ್ದು ಪಟಾಕಿಗಳನ್ನು ಉಪಯೋಗಿಸದೇ ದೀಪದ ಹಬ್ಬವನ್ನಾಗಿ ಆಚರಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ತಿಳಿಸಿದ್ದಾರೆ.

    Post Views: 187

    Related Posts

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.