Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬ್ರಹ್ಮಾವರ: ವರದಕ್ಷಿಣೆ ಕಿರುಕುಳ- 8 ಮಂದಿ ವಿರುದ್ಧ ದೂರು ದಾಖಲು
    ಇತ್ತೀಚಿನ ಸುದ್ದಿ

    ಬ್ರಹ್ಮಾವರ: ವರದಕ್ಷಿಣೆ ಕಿರುಕುಳ- 8 ಮಂದಿ ವಿರುದ್ಧ ದೂರು ದಾಖಲು

    September 5, 2022
    Share

    ಬ್ರಹ್ಮಾವರ: ಹಣ ನೀಡುವಂತೆ ಪೀಡಿಸಿ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿರುವುದಾಗಿ ಬ್ರಹ್ಮಾವರದ ಪ್ರಜ್ಞಾ ಎಂಬವರು ತಮ್ಮಗಂಡ ಭರತ್ ರಾಜ್ ಸೇರಿದಂತೆ ಆತನ ಮನೆಯ 8 ಮಂದಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಬೆಳುವಾಯಿಯ ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡಿಕೊಂಡಿರುವ ಪ್ರಜ್ಞಾ.ಜೆ ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಬ್ರಹ್ಮಾವರದ ಪೇತ್ರಿಯ ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಗುಮಾಸ್ತನಾಗಿದ್ದ ಕೊಕ್ಕರ್ಣೆಯ ಭರತ್ ರಾಜ್‌ನೊಂದಿಗೆ ಪೆರ್ಡೂರಿನಲ್ಲಿ ಮದುವೆ ಆಗಿದ್ದರು. ಮದುವೆಯ ಸಮಯ ಪ್ರಜ್ಞಾ ಅವರ ತವರು ಮನೆಯಿಂದ 20 ಪವನ್ ಚಿನ್ನ ಹಾಗೂ 10 ಲಕ್ಷ ರೂ. ಹಣದೊಂದಿಗೆ ಮದುವೆಯ ಖರ್ಚು ವೆಚ್ಚ ನೋಡಿಕೊಂಡಿದ್ದರು. ಮಾತ್ರವಲ್ಲದೆ ಮದುವೆಗೆ ಮುಂಚಿತವಾಗಿ ಆರೋಪಿ ಪತಿ ಭರತ್ ರಾಜ್ ಒಂದು ಲಕ್ಷ ಹಣವನ್ನು ಪಡೆದುಕೊಂಡಿದ್ದ. ಮದುವೆಯ ದಿನದಿಂದಲೇ ಆರೋಪಿ ಭರತ್ ಹಾಗೂ ಆತನ ತಂದೆ ಸದಾನಂದ ಕೂಡಾ ಹಣಕ್ಕಾಗಿ ಬೇಡಿಕೆ ಇಟ್ಟು, ಹಣ ತರದೇ ಇದ್ದಲ್ಲಿ ಮಗನಿಗೆ ಬೇರೆ ಮದುವೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದರು. ಜೊತೆಗೆ ಅತ್ತೆ ಪ್ರಭಾವತಿ ಮತ್ತು ನಾದಿನಿ ಭಾರತಿ ಕೂಡಾ ಕೆಲಸ ಬಿಡು, ತವರು ಮನೆಗೆ ಹೋಗಬೇಡ. ಮನೆಯಲ್ಲಿ ನಡೆದ ವಿಷಯವನ್ನು ಅವರಿಗೆ ಹೇಳಬಾರದು ಎಂದೆಲ್ಲಾ ಬೈಯುತ್ತಿದ್ದರು. ಅಲ್ಲದೇ ಕಳೆದ 9 ತಿಂಗಳಿನಿಂದ ವಿಪರೀತ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿರುವುದಾಗಿ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಈ ಎಲ್ಲಾ ಘಟನೆಗಳಿಗೂ ಆರೋಪಿತರಾದ ಜಯಕುಮಾರ್, ನವಮಿ, ನಿಹಾಲ್, ರತ್ನಾಕರ ಇವರು ಕುಮ್ಮಕ್ಕು ನೀಡಿರುವುದಾಗಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಆರೋಪಿಗಳು ನಿರ್ಭಿಡೆಯಿಂದ ತಿರುಗಾಡುತ್ತಿದ್ದಾರೆ ಎಂದು ನೊಂದ ಯುವತಿಯ ಮನೆಯವರು ಆರೋಪಿಸಿದ್ದಾರೆ.

    Post Views: 203

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.