Facebook Twitter Instagram
    Tuesday, August 4
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುಂದಿನ ತಲೆಮಾರಿಗೆ ಪ್ರಕೃತಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಡಾ| ಜಿ. ಸಂತೋಷ್
    ಇತ್ತೀಚಿನ ಸುದ್ದಿ

    ಮುಂದಿನ ತಲೆಮಾರಿಗೆ ಪ್ರಕೃತಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಡಾ| ಜಿ. ಸಂತೋಷ್

    August 4, 2026
    Share

    ಮಂಗಳೂರು: ನಮ್ಮ ಸುತ್ತಲಿನ ಪರಿಸರ ನಾವೇ ಹಾಳು ಮಾಡುತ್ತಿದ್ದೇವೆ. 2019ರಲ್ಲಿ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ನಡೆದ ಭೀಕರ ಪ್ರಕೃತಿ ದುರಂತಕ್ಕೆ ನಮ್ಮ ಸ್ವಾರ್ಥ ಮತ್ತು ಬೇಜವಾಬ್ದಾರಿತನವೇ ಮೂಲ ಕಾರಣ ಎಂದು ಜಿಲ್ಲಾ ನಗರಾಭಿವೃದ್ಧಿ ಸೆಲ್‌ನ ಯೋಜನಾ ನಿರ್ದೇಶಕ ಡಾ| ಜಿ. ಸಂತೋಷ್ ಕುಮಾರ್‌ ಹೇಳಿದರು.

    ಮಂಗಳೂರು ಕಥೋಲಿಕ್ ಧರ್ಮಪ್ರಾಂತ್ಯದ ಪರಿಸರ ಆಯೋಗದ ನೇತೃತ್ವದಲ್ಲಿ ನಗರದ ಬೆಂದೂರ್ ಚರ್ಚ್‌ನ ಸಭಾಂಗಣದಲ್ಲಿ ಪರಿಸರ ಆಯೋಗದ ಸಂಚಾಲಕರು ಹಾಗೂ ಕಾರ್ಯದರ್ಶಿಗಳಿಗಾಗಿ ಆಯೋಜಿಸಲಾಗಿದ್ದ ವಿಶೇಷ ಪರಿಸರ ಮಾಹಿತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

    ನಮ್ಮ ದೇಶದಲ್ಲಿ ಪರಿಸರವನ್ನು ಉಳಿಸಿ, ಸಂರಕ್ಷಿಸುವ ಕಾರ್ಯ ಯುದ್ಧೋಪಾದಿಯಲ್ಲಿ ಆಗಬೇಕು. ಪ್ರಕೃತಿಯನ್ನು ಹಾಳು ಮಾಡಿದ್ದರಿಂದಲೇ ಇಂದು ನಾವು ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಪರಿಸರವನ್ನು ಕಾಪಾಡಿ, ಅದನ್ನು ನಮ್ಮ ಮುಂದಿನ ತಲೆಮಾರಿಗೆ ಸುರಕ್ಷಿತವಾಗಿ ನೀಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

    ದಕ್ಷಿಣ ಕನ್ನಡ ಜಿಲ್ಲಾ ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ| ರಾಜೇಂದ್ರ ಕಲ್ಬಾವಿ ಹಾಗೂ ಹಸಿರು ದಳದ ಪ್ರಾಜೆಕ್ಟ್ ಮ್ಯಾನೇಜರ್ ನಾಗರಾಜ್ ಬಜಾಲ್ ಅವರು ಪರಿಸರ ಸಂರಕ್ಷಣೆಯ ಪ್ರಾಯೋಗಿಕ ಮಾರ್ಗಗಳ ಕುರಿತು ಮಾಹಿತಿ ನೀಡಿದರು.

    ಕಾರ್ಯಕ್ರಮದಲ್ಲಿ ಮಂಗಳೂರು ಧರ್ಮಕ್ಷೇತ್ರದ ಪರಿಸರ ಆಯೋಗದ ಕಾರ್ಯದರ್ಶಿ ಲುವಿಸ್ ಜೆ. ಪಿಂಟೊ, ಪರಿಸರ ಆಯೋಗದ ಕಾರ್ಯಕಾರಿ ಸಮಿತಿ ಸದಸ್ಯ ವಂ| ಡಾ| ಮೈಕಲ್ ಸಾಂತುಮಾಯೋರ್, ಫಾದರ್ ಮುಲ್ಲರ್‌ ಸಂಸ್ಥೆಗಳ ನಿರ್ದೇಶಕ ವಂ| ಫಾ| ಫಾವುಸ್ಟಿನ್ ಲೋಬೊ, ಭ| ಪ್ಲಾವಿಯ ವಿಲ್ಮಾ, ಸೆಲೆಸ್ತಿನ್ ಡಿಸೋಜ, ಕ್ಲೇಮಂಟ್ ಪಿಂಟೊ, ಫ್ರಾನ್ಸಿಸ್ ಮಿನೇಜಸ್ ಬಾಲ್ಕುಟಜೆ, ಜೀತ್ ಮಿಲನ್ ರೋಚ್, ಚಾರ್ಲ್ಸ್ ಪಾಯ್ಸ್ ಉಪಸ್ಥಿತರಿದ್ದರು.

    Post Views: 7

    Related Posts

    ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಕ್ರಮ

    August 4, 2026

    ಉಳ್ಳಾಲ: ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಆಘಾತ- ಲೈನ್‌ಮ್ಯಾನ್ ದುರ್ಮರಣ

    August 3, 2026

    ಬಂಟ್ವಾಳ: ಭಾರೀ ಮಳೆಯಿಂದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

    August 3, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಕ್ರಮ

    August 4, 2026

    ಮುಂದಿನ ತಲೆಮಾರಿಗೆ ಪ್ರಕೃತಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಡಾ| ಜಿ. ಸಂತೋಷ್

    August 4, 2026

    ಉಳ್ಳಾಲ: ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಆಘಾತ- ಲೈನ್‌ಮ್ಯಾನ್ ದುರ್ಮರಣ

    August 3, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.