Facebook Twitter Instagram
    Monday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS: ‘ಕುಡುಕ ಪ್ರಯಾಣಿಕ’ನೆಂದು ಹಲ್ಲೆ ಮಾಡಿ ಹೊರ ತಳ್ಳಿದ ‘KSRTC ಕಂಡಕ್ಟರ್’ ಅಮಾನತು
    ಇತ್ತೀಚಿನ ಸುದ್ದಿ

    BREAKING NEWS: ‘ಕುಡುಕ ಪ್ರಯಾಣಿಕ’ನೆಂದು ಹಲ್ಲೆ ಮಾಡಿ ಹೊರ ತಳ್ಳಿದ ‘KSRTC ಕಂಡಕ್ಟರ್’ ಅಮಾನತು

    September 8, 2022
    Share

    ಪುತ್ತೂರು: ಪಾನಮತ್ತನಾಗಿದ್ದಂತ ಪ್ರಯಾಣಿಕನೊಬ್ಬ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ( KSRTC Bus ) ತನ್ನೂರಿಗೆ ತೆರಳೋದಕ್ಕೆ ಹೋದಂತ ಸಂದರ್ಭದಲ್ಲಿ, ಆತನ ಮೇಲೆ ಹಲ್ಲೆ ನಡೆಸಿ, ಹೊರಗೆ ಕಾಲಿನಿಂದ ಒದ್ದು ನಿರ್ವಾಹಕ ತಳ್ಳಿದ್ದರು. ಇದರಿಂದಾಗಿ ಅಂಗಾತವಾಗಿ ಬಸ್ ಡೋರಿನಿಂದ ಹೊರಗೆ ಬಿದ್ದಂತ ಪ್ರಯಾಣಿಕ ಗಾಯಗೊಂಡಿದ್ದನು. ಈ ಘಟನೆಯ ಹಿನ್ನಲೆಯಲ್ಲಿ ನಿರ್ವಾಹಕನನ್ನು ಅಮಾನತುಗೊಳಿಸಿ, ಸಾರಿಗೆ ನಿಗಮ ಆದೇಶಿಸಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಈಶ್ವರಮಂಗಲ ಮಾರ್ಗವಾಗಿ ಸುಳ್ಯಪದವು ಕಡೆಗೆ ಸಂಜೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ ಗೆ ಪಾನಮತ್ತನಾಗಿದ್ದಂತ ಪ್ರಯಾಣಿಕನೊಬ್ಬ ಏರಿದ್ದಾನೆ. ಹೀಗೆ ಬಸ್ಸನ್ನು ಏರಿದಂತ ಪ್ರಯಾಣಿಕನನ್ನು ಹತ್ತಿಸಿಕೊಳ್ಳದೇ ನಿರ್ವಾಹಕ ಕೆಳಗೆ ಇಳಿಯುವಂತೆ ಸೂಚಿಸಿದ್ದನು.

    ಕಂಡಕ್ಟರ್ ಮಾತಿಗೆ ಒಪ್ಪದಂತ ಪಾನಮತ್ತ ಪ್ರಯಾಣಿಕ ಮಾತ್ರ ಬಸ್ಸಿನಿಂದ ಇಳಿದಿಲ್ಲ. ಈ ವೇಳೆಗೆ ಸಿಟ್ಟುಗೊಂಡಂತ ನಿರ್ವಾಹಕ ಆತನ ಮೇಲೆ ಹಲ್ಲೆ ಮಾಡಿದ್ದಲ್ಲದೇ, ಬಸ್ಸಿನ ಡೋರಿನಿಂದ ಕಾಲಿನಿಂದ ಒದ್ದಿದ್ದಾನೆ. ಆಗ ಪಾನಮತ್ತ ಪ್ರಯಾಣಿಕ ರಸ್ತೆಗೆ ಅಂಗಾತ ಬಿದ್ದು ಪೆಟ್ಟುಗೊಂಡಿರೋ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

    ಈ ವಿಷಯ ತಿಳಿದಂತ ರೈತ ಸಂಘದ ಜಿಲ್ಲಾಧ್ಯಕ್ಷ ಅಮರನಾಥ ಆಳ್ವ, ಸಾರಿಗೆ ಬಸ್ ನಿರ್ವಾಹಕನ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಸಂಬಂಧ ಪಟ್ಟಂತ ಅಧಿಕಾರಿಗಳು ಈ ನಡೆ ತೋರಿದಂತ ನಿರ್ವಾಹಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.

    ಈ ಬೆನ್ನಲ್ಲೇ ಕೆ ಎಸ್ ಆರ್ ಟಿಸಿಯಿಂದ ಚಾಲಕ ಕಂ ನಿರ್ವಾಹಕ ಸುಖರಾಜ ರೈ ಎಂ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಅಲ್ಲದೇ ನಿಗಮದ ಚಾಲನಾ ಸಿಬ್ಬಂದಿಗಳಿಗೆ ಸಾರ್ವಜನಿಕ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ನಿರಂತರ ತರಬೇತಿ ಹಾಗೂ ತಿಳುವಳಿಕೆ ನೀಡಿದ್ದಾಗ್ಯೂ ಸಹ ಈ ರೀತಿಯ ಘಟನೆ ನಡೆದಿರುವುದು ದುಃಖದ ಸಂಗತಿಯಾಗಿದೆ ಎಂದಿದೆ.

    ನಿಗಮದ ಸಿಬ್ಬಂದಿಗಳಿಗೆ‌ ಇನ್ನೂ‌ ಹೆಚ್ಛಿನ ತರಬೇತಿ ನೀಡಿ ಪ್ರಯಾಣಿಕರೊಡನೆ ಸೌಜನ್ಯವಾಗಿ ವರ್ತಿಸುವ ಸಂಬಂಧ ಕ್ರಮಕೈಗೊಳ್ಳಲಾಗುವುದು ಹಾಗೂ ಈ ರೀತಿಯ ಘಟನೆಗಳಿಗೆ ಕಾರಣರಾಗುವ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಲಾಗಿದೆ. ಸದರಿ‌ ಪ್ರಯಾಣಿಕರ ವೈದ್ಯಕೀಯ ವೆಚ್ಚವನ್ನು ನಿಗಮವು ಭರಿಸಲಿದೆ ಎಂದು ಹೇಳಿದೆ.

    Post Views: 138

    Related Posts

    ಬಜ್ಪೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಕೇಂದ್ರ ಸರ್ಕಾರ ಎನ್‌ಐಎ ತನಿಖೆಗೆ ವಹಿಸುವ ಆದೇಶ

    June 9, 2025

    ಪುತ್ತೂರು: ತಮ್ಮನಿಂದ ಬೆಂಕಿ ದಾಳಿ — ಗಂಭೀರ ಗಾಯಗೊಂಡ ಅಣ್ಣ ಆಸ್ಪತ್ರೆಗೆ ದಾಖಲು

    June 9, 2025

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.