Facebook Twitter Instagram
    Sunday, March 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಮಾರ್ಚ್ 31ರೊಳಗೆ ಇ-ಆಟೋಗಳ ಪರವಾನಿಗೆಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ದರ್ಶನ್
    ಇತ್ತೀಚಿನ ಸುದ್ದಿ

    ಕಡಬ: ಮಾರ್ಚ್ 31ರೊಳಗೆ ಇ-ಆಟೋಗಳ ಪರವಾನಿಗೆಗೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ದರ್ಶನ್

    March 15, 2026
    Share

    ಕಡಬ: ಪರವಾನಿಗೆ ಪಡೆಯಲು ಇಚ್ಚಿಸುವ ಎಲ್ಲಾ ಇಲೆಕ್ಟಿಕ್ ಆಟೋ (ಇ- ಅಟೋ) ರಿಕ್ಷಾ ಚಾಲಕ, ಮಾಲಕರು ಮಾರ್ಚ್ 31ರೊಳಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಎ ತಿಳಿಸಿದ್ದಾರೆ. ಪಡೀಲ್‌ ನ ಪ್ರಜಾಸೌಧದಲ್ಲಿ ಶುಕ್ರವಾರ ಆಟೋ ರಿಕ್ಷಾ ಸಂಘದ ಬೇಡಿಕೆಗಳು, ಇ-ಆಟೋ ರಿಕ್ಷಾಗಳಿಗೆ ಪರವಾನಿಗೆ ಕುರಿತಂತೆ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಆರ್‌ಟಿಒ ಅಂಕಿ ಅಂಶಗಳ ಪ್ರಕಾರ ಇ ಆಟೋ ರಿಕ್ಷಾಗಳಿಂದ ಈವರೆಗೆ ಕೇವಲ 250 ಅರ್ಜಿಗಳು ಮಾತ್ರವೇ ಬಂದಿವೆ. ಸುಮಾರು 3000ದಷ್ಟು ಇ ಆಟೋಗಳು ಸಂಚರಿಸುತ್ತಿದ್ದು, ರಾಜ್ಯ ಸರಕಾರ ಈಗಾಗಲೇ ವಾಣಿಜ್ಯ ಬಳಕೆಯ ಇ-ಆಟೋ ರಿಕ್ಷಾಗಳಿಗೆ ಪರವಾನಿಗೆಯನ್ನು ಕಡ್ಡಾಯಗೊಳಿಸಿದೆ. 2025ರ ಮೊದಲು ನೋಂದಣಿ ಆಗಿರುವ ಎಲ್ಲಾ ಇ ಆಟೋ ರಿಕ್ಷಾಗಳು ಪರವಾನಿಗೆಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ಹೇಳಿದರು.

    ಸಭೆಯಲ್ಲಿ ವಿವಿಧ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಪ್ರತಿನಿಧಿಗಳು ಮಾತನಾಡಿ, ಪರವಾನಿಗೆಗೆ ಅರ್ಜಿ ಸಲ್ಲಿಕೆ ವೇಳೆ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕನಿಷ್ಠ ಐದು ವರ್ಷಗಳ ವಾಸ್ತವ್ಯವನ್ನು ತೋರಿಸುವ ನಿವಾಸ ಪ್ರಮಾಣಪತ್ರವನ್ನು ಸಲ್ಲಿಸಬೇಕೆಂಬ ನಿಯಮವನ್ನು ಜಿಲ್ಲಾಡಳಿತ ಕಡ್ಡಾಯಗೊಳಿಸಿದೆ. ಆದರೆ ಬಹುತೇಕ ಆಟೋ ಚಾಲಕರು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಮನೆ ಮಾಲೀಕರು ಐದು ವರ್ಷಗಳ ಕಾಲ ನಿವಾಸ ಪ್ರಮಾಣಪತ್ರಗಳನ್ನು ನೀಡುವುದಿಲ್ಲ. ಇದರಿಂದ ತೊಂದರೆಯಾಗುತ್ತಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಮನೆ ಮಾಲೀಕರಿಂದ ನಿವಾಸ ಪ್ರಮಾಣಪತ್ರವನ್ನು ಪಡೆಯಬೇಕಾಗಿಲ್ಲ. ಅರ್ಜಿದಾರರು ಮಂಗಳೂರು ನಗರ ವ್ಯಾಪ್ತಿಯಲ್ಲಿ ಕನಿಷ್ಠ ಐದು ವರ್ಷಗಳಿಂದ ವಾಸ್ತವ್ಯವನ್ನು ಸಾಬೀತುಪಡಿಸಲು ಎಲ್‌ಪಿಜಿ ಸಿಲಿಂಡರ್ ಖರೀದಿ ಅಥವಾ ವಿದ್ಯುತ್ ಬಿಲ್‌ಗಳಂತಹ ದಾಖಲೆಗಳನ್ನು ಸಹ ಸಲ್ಲಿಸಬಹುದು ಎಂದರು.

    Post Views: 15

    Related Posts

    ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಸಾವು

    March 15, 2026

    ರಾಜ್ಯದ ಎಲ್ಲ ಜೈಲುಗಳಲ್ಲಿ ಮಾದಕ ವಸ್ತು ಪತ್ತೆ ಪರೀಕ್ಷೆ : ಡ್ರಗ್ಸ್ ನೆಟ್ವರ್ಕ್ ಬ್ರೇಕ್ ಹಾಕಲು ಮುಂದಾದ ಅಲೋಕ್ ಕುಮಾರ್

    March 14, 2026

    ಉಡುಪಿ ಅಬಕಾರಿ ಡಿಸಿ ಮನೆ ಸೇರಿದಂತೆ 15 ಕಡೆ ಲೋಕಾಯುಕ್ತ ದಾಳಿ !!

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.