ಸುಳ್ಯ:ಸುಳ್ಯದ ಗೂನಡ್ಕ, ಪೆರಾಜೆ, ಕಲ್ಲುಗುಂಡಿ, ಅರಂತೋಡು, ಜಾಲ್ಸೂರು ಭಾಗದಲ್ಲಿ ಮತ್ತೆ ಭೂ ಕಂಪನದ ಅನುಭವವಾಗಿದೆ. ಇದರಿಂದಾಗಿ ಮತ್ತೆ ಜನರಲ್ಲಿ ಆತಂಕ ಶುರುವಾಗಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಎರಡು ದಿನಗಳ ಹಿಂದೆಯಷ್ಟೆ ಕೊಡಗು ದಕ್ಷಿಣ ಕನ್ನಡ ಗಡಿ ಪ್ರದೇಶ ಸೇರಿ ಇದೇ ಭಾಗದಲ್ಲಿ ಭೂ ಕಂಪನ ಸಂಭವಿಸಿತ್ತು. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 2.7ರಷ್ಟು ದಾಖಲಾಗಿತ್ತು.
ಇಂದು ಬೆಳಿಗ್ಗೆ 7.45 ರ ವೇಳೆಗೆ ಮತ್ತೆ ಭೂಮಿ ಕಂಪಿಸಿದೆ.ತಾಲೂಕಿನ ಬಹುತೇಕ ಕಡೆ ಶಬ್ದದೊಂದಿಗೆ ಎರಡು ಮೂರು ಸೆಕೆಂಡುಗಳಷ್ಟು ಕಂಪಿಸಿದೆ. ಯಾವುದೇ ಅಪಾಯದ ಬಗ್ಗೆ ತಿಳಿದು ಬಂದಿಲ್ಲ.