Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಪರಿಸರ ಸ್ನೇಹಿ ಗಣೇಶ ಚತುರ್ಥಿ ಹಬ್ಬ ಆಚರಿಸಿ: ಪರಿಸರ ಇಲಾಖೆ ಮನವಿ
    ಇತ್ತೀಚಿನ ಸುದ್ದಿ

    ಉಡುಪಿ: ಪರಿಸರ ಸ್ನೇಹಿ ಗಣೇಶ ಚತುರ್ಥಿ ಹಬ್ಬ ಆಚರಿಸಿ: ಪರಿಸರ ಇಲಾಖೆ ಮನವಿ

    August 27, 2022
    Share

    ಉಡುಪಿ: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬಣ್ಣದಿಂದ ತಯಾರಿಸಿರುವ ಗೌರಿ ಹಾಗು ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ, ಬಾವಿ ಹಾಗೂ ಇತರೆ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ನೀರು ಕಲುಷಿತಗೊಂಡು ಜಲಚರಗಳಿಗೆ ಹಾನಿಯುಂಟಾಗುತ್ತದೆ. ಇದನ್ನು ತಪ್ಪಿಸಲು ಜೇಡಿಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಗೌರಿ ಗಣೇಶ ಚತುರ್ಥಿ ಆಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    ವಿಷಕಾರಿ ರಾಸಾಯನಿಕ, ಲೋಹಲೇಪದ ಪ್ಲಾಸ್ಟರ್ ಆಫ್ ಪ್ಯಾರಿಸ್‌ನ ಗಣೇಶನ ಮೂರ್ತಿ ಬಳಕೆ ಮಾಡದೆ, ಸಾದಾ ಜೇಡಿಮಣ್ಣಿನಿಂದ ತಯಾರಿಸಿದ, ಎಲೆ, ಹೂವುಗಳಿಂದ ಮಾಡಿದ ನೈಸರ್ಗಿಕ ಬಣ್ಣದಿಂದ ತಯಾರಿಸಿದ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಬಹುದಾಗಿದೆ. ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದೇ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು. ಬಾವಿ, ಕೆರೆ ಹಾಗೂ ಹೊಳೆಗಳಲ್ಲಿ ಗಣಪತಿ ವಿಗ್ರಹಗಳನ್ನು ವಿಸರ್ಜನೆ ಮಾಡುವುದರಿಂದ ಅಂತರ್ಜಲ, ಕುಡಿಯುವ ನೀರಿನ ಸೆಲೆಗಳು ಹಾಳಾಗುತ್ತದೆ.

    ಆದ್ದರಿಂದ ಬಕೆಟ್‌ನಲ್ಲಿ ಮೂರ್ತಿಯನ್ನು ವಿಸರ್ಜಿಸಬೇಕು ಅಥವಾ ಸೂಚಿತ ಕೆರೆಗಳಲ್ಲಿ ವಿಸರ್ಜಿಸುವ ಮುನ್ನ ಹೂವು, ವಸ್ತ್ರ, ಪ್ಲಾಸ್ಟಿಕ್ ಹಾರ ಎಲ್ಲವನ್ನೂ ತೆಗೆದು ನಂತರ ಮೂರ್ತಿಯನ್ನು ವಿಸರ್ಜನೆ ಮಾಡಬೇಕು. ಗಣಪತಿ ಹಬ್ಬದ ಸಂದರ್ಭದಲ್ಲಿ ಪಟಾಕಿಯನ್ನು ಸಿಡಿಸುವುದರಿಂದ ವಾಯು ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ಉಂಟಾಗಿ, ಪರಿಸರಕ್ಕೆ ಹಾನಿಯಾಗುತ್ತದೆ. ಗಣೇಶ ಹಬ್ಬದಲ್ಲಿ ರಸ್ತೆ, ಚರಂಡಿಯಲ್ಲಿ ಕಸಗಳನ್ನು ಎಸೆಯದೇ ಕಸದ ಡಬ್ಬಿಗಳಿಗೆ ಹಾಕುವಂತೆ ಪರಿಸರ ಇಲಾಖೆಯ ಪ್ರಕಟಣೆ ತಿಳಿಸಿದೆ.

    Post Views: 212

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.