Facebook Twitter Instagram
    Wednesday, July 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆಗೈದು, ಚಿನ್ನಾಭರಣ ದೋಚಿ, ಸಾಕ್ಷ್ಯನಾಶ ಪಡಿಸಿದ ಪ್ರಕರಣ- ಮೂವರಿಗೆ ಜೀವಾವಧಿ ಶಿಕ್ಷೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆಗೈದು, ಚಿನ್ನಾಭರಣ ದೋಚಿ, ಸಾಕ್ಷ್ಯನಾಶ ಪಡಿಸಿದ ಪ್ರಕರಣ- ಮೂವರಿಗೆ ಜೀವಾವಧಿ ಶಿಕ್ಷೆ

    July 29, 2026
    Share

    ಬಂಟ್ವಾಳ: ವೃದ್ಧೆಯೊಬ್ಬರನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 

    ಬಂಟ್ವಾಳ ತಾಲೂಕಿನ ಅಮ್ಮುಂಜೆ ನಿವಾಸಿ ಬೆನಡಿಕ್ಟ್ ಕಾರ್ಲೋ (73) ಅವರ ಆರೈಕೆ ನೋಡಿಕೊಳ್ಳುತ್ತಿದ್ದ ಅಮ್ಟಾಡಿ ನಿವಾಸಿ ಏಲ್ಮಾ ಪ್ರೆಶ್ಚಿತ್ ಬರೆಟ್ರೋ (23), ವೃದ್ಧೆಯ ಬಳಿಯಿದ್ದ ಚಿನ್ನಾಭರಣಗಳನ್ನು ದೋಚುವ ಉದ್ದೇಶದಿಂದ ತನ್ನ ಸ್ನೇಹಿತ ನರಿಕೊಂಬು ನಿವಾಸಿ ಸತೀಶ ನಾಯಕ್ (28)ನ ಸಹಾಯದಿಂದ ವೃದ್ಧೆ ಸೇವಿಸುವ ಆಹಾರದಲ್ಲಿ ವಿಷ ಬೆರೆಸಿ ಕೊಲೆ ಮಾಡಲು ಯತ್ನಿಸಿದ್ದಳು. ಆದರೆ, ಆ ಯತ್ನ ವಿಫಲವಾದ ಬಳಿಕ ಮತ್ತೋರ್ವ ಆರೋಪಿ ನರಿಕೊಂಬು ನಿವಾಸಿ ಚರಣ್ ಕುಮಾರ್ (31)ನ ಸಹಾಯದಿಂದ 2021ರ ಜನವರಿ 25ರಂದು ರಾತ್ರಿ ಬೆನಡಿಕ್ಟ್ ಕಾರ್ಲೋ ಅವರನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದರು.

    ಬಳಿಕ ಮೃತೆಯ ಬಳಿ ಇದ್ದ ಸುಮಾರು 61.070 ಗ್ರಾಂ ತೂಕದ ಚಿನ್ನಾಭರಣಗಳನ್ನು (ಅಂದಿನ ಅಂದಾಜು ಮೌಲ್ಯ ರೂ.3 ಲಕ್ಷ) ದೋಚಿ, ಪ್ರಕರಣದ ಸಾಕ್ಷ್ಯಗಳನ್ನು ನಾಶಪಡಿಸಲು ಯತ್ನಿಸಿದ್ದರು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 22/2021ರಡಿ ಭಾರತೀಯ ದಂಡ ಸಂಹಿತೆಯ (IPC) ಕಲಂ 302, 392, 120(B), 201 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

    ಪ್ರಕರಣದ ತನಿಖೆಯನ್ನು ಆಗಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರಂಭಿಕ ಹಂತದಲ್ಲಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಬಳಿಕ ಆಗಿನ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಸಮಗ್ರ ತನಿಖೆ ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಮೂವರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

    ಪ್ರಕರಣದ ವಿಚಾರಣೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು. ವಿಚಾರಣೆ ಪೂರ್ಣಗೊಂಡ ಬಳಿಕ, ಜುಲೈ 28, 2026ರಂದು ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಮೂವರು ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

    ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸಾರ್ವಜನಿಕ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಸಮರ್ಥವಾಗಿ ವಾದ ಮಂಡಿಸಿದ್ದರು.

    Post Views: 1

    Related Posts

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

    July 29, 2026

    ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ ಪರೀಕ್ಷೆ – ವಿದ್ಯಾರ್ಥಿಗೆ ಪಾಸಿಟಿವ್

    July 29, 2026

    ಒಮನ್ ನಲ್ಲಿ ಮೂಡಬಿದರೆಯ ಯುವಕ ಅಪಘಾತದಲ್ಲಿ ಮೃತ್ಯು

    July 29, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ವೃದ್ಧ ಮಹಿಳೆಗೆ ವಿಷವುಣಿಸಿ, ಉಸಿರುಗಟ್ಟಿಸಿ ಕೊಲೆಗೈದು, ಚಿನ್ನಾಭರಣ ದೋಚಿ, ಸಾಕ್ಷ್ಯನಾಶ ಪಡಿಸಿದ ಪ್ರಕರಣ- ಮೂವರಿಗೆ ಜೀವಾವಧಿ ಶಿಕ್ಷೆ

    July 29, 2026

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

    July 29, 2026

    ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ ಪರೀಕ್ಷೆ – ವಿದ್ಯಾರ್ಥಿಗೆ ಪಾಸಿಟಿವ್

    July 29, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.