Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ- ಪೊಲೀಸ್‌ ಕಮಿಷನರ್‌
    ಇತ್ತೀಚಿನ ಸುದ್ದಿ

    ಮಂಗಳೂರು: ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ- ಪೊಲೀಸ್‌ ಕಮಿಷನರ್‌

    March 21, 2025
    Share

    ಮಂಗಳೂರು: ಪತ್ರಕರ್ತರ ನಕಲಿ ಐಡಿ ಕಾರ್ಡ್‌ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್‌ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್‌ ಕಮಿಷನರ್‌ ಅನುಪಮ್‌ ಆಗರ್ವಾಲ್ ಸೂಚಿಸಿದ್ದಾರೆ.
    ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ, ಮೀಡಿಯಾ, ಪ್ರೆಸ್ ಸ್ಟಿಕರ್ ದುರ್ಬಳಕೆ ಗೆ ಕಡಿವಾಣ ಹಾಕುವಂತೆ ಹಾಗು ಕರ್ತವ್ಯ ನಿರ್ವಹಿಸುವ ಸಂದರ್ಭ ಪತ್ರಕರ್ತರಿಗೆ ಭದ್ರತೆ ಖಾತ್ರಿ ಪಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿಗೆ ಸ್ಪಂದಿಸಿ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
    ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಮಾಧ್ಯಮ ಐಡಿ ಕಾರ್ಡ್ ದುರ್ಬಳಕೆ ಪ್ರಕರಣಗಳು ಕಂಡು ಬರುತ್ತಿವೆ. ಗುರುವಾರ ರಾತ್ರಿ ಕೊಡಿಯಾಲ್ ಬೈಲ್ ಬಳಿ ನಡೆದ ಸರಣಿ ಅಪಘಾತದಲ್ಲಿ ಕಾರು ಒಂದರಲ್ಲಿ ಮಾಧ್ಯಮ ಹೆಸರು ದುರ್ಬಳಕೆ ಮಾಡಿ ಸ್ಥಳದಲ್ಲಿ ನಕಲಿ ಐ ಡಿ ಕಾರ್ಡ್ ಪತ್ತೆ ಯಾಗಿದೆ. ಮಾಧ್ಯಮ ಕಾರ್ಡ್ ಗಳ ದುರ್ಬಳಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಹಲವಾರು ವಾಹನಗಳಲ್ಲಿ ಮೀಡಿಯಾ ಹಾಗೂ ಪ್ರೆಸ್ ಸ್ಟಿಕರ್ ಬಳಕೆ ಕಂಡು ಬರುತ್ತಿದೆ. ಇಂತಹ ಮಾಧ್ಯಮ ಸ್ಟಿಕರ್ ಬಳಕೆ ಮಾಡಿ ಕಾನೂನು ಬಾಹಿರ ಕೃತ್ಯ ಗಳು ನಡೆಯುವ ಸಾಧ್ಯತೆ ಇದೆ. ಇಂತಹ ವಾಹನಗಳ ತಪಾಸಣೆ ನಡೆಸಬೇಕು. ಪತ್ರಕರ್ತರು ನಿರ್ಭೀತಿಯಿಂದ, ಸುಲಲಿತವಾಗಿ ಕರ್ತವ್ಯ ನಿರ್ವಹಿಸಲು ಭದ್ರತೆ ಖಾತ್ರಿಪಡಿಸಬೇಕು ಎಂದು ಸಂಘ ಮನವಿ ಮಾಡಿತ್ತು.
    ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರೆಸ್‌ ಕ್ಲಬ್‌ ಅಧ್ಯಕ್ಷ ಪಿ.ಬಿ. ಹರೀಶ್‌ ರೈ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಪ್ರೆಸ್‌ ಕ್ಲಬ್‌ ಉಪಾಧ್ಯಕ್ಷ ಮುಹಮ್ಮದ್‌ ಆರೀಫ್‌ ಪಡುಬಿದ್ರಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಸುಖಪಾಲ್‌ ಪೊಳಲಿ, ರಾಜೇಶ್‌ ದಡ್ಡಂಗಡಿ, ಸದಸ್ಯರಾದ ಪ್ರಸನ್ನ ಪೂಜಾರಿ, ಶಶಿಕಾಂತ್‌ ಜೆ., ಸಂದೀಪ್‌ ಕುಮಾರ್‌ ಇದ್ದರು.

    Post Views: 197

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.