Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ತಲ್ವಾರ್ ದಾಳಿಯಾಗಿದೆ ಎಂದು ವಾಟ್ಸಾಪ್ ನಲ್ಲಿ ಸುಳ್ಳು ಸುದ್ದಿ..! ಸ್ಪಷ್ಟನೆ ನೀಡಿದ ಪೊಲೀಸರು
    ಇತ್ತೀಚಿನ ಸುದ್ದಿ

    ಬಂಟ್ವಾಳ: ತಲ್ವಾರ್ ದಾಳಿಯಾಗಿದೆ ಎಂದು ವಾಟ್ಸಾಪ್ ನಲ್ಲಿ ಸುಳ್ಳು ಸುದ್ದಿ..! ಸ್ಪಷ್ಟನೆ ನೀಡಿದ ಪೊಲೀಸರು

    June 21, 2025
    Share

    ಬಂಟ್ವಾಳ:  ಸಜಿಪನಡು ಎಂಬಲ್ಲಿ ತಲ್ವಾರ್ ದಾಳಿಯಾಗಿದೆ ಎಂದು ವಾಟ್ಸಾಪ್ ನಲ್ಲಿ ಸುಳ್ಳು ಸುದ್ದಿ ಪ್ರಸಾರವಾದ ಬಗ್ಗೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

    ಕಳೆದ ವಾರ ಬಂಟ್ವಾಳ ಸಜಿಪನಡು ಎಂಬಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದಲ್ಲಿ, ಘಟನಾ ಸ್ಥಳದ ಸಮೀಪ ಸಿಕ್ಕಿರುವ ಸಿಸಿಟಿವಿ ದೃಶ್ಯಾವಳಿಗಳಿಗೂ ದೂರುದಾರರು ನೀಡಿರುವ ದೂರಿಗೂ ವ್ಯತ್ಯಾಸಗಳು ಕಂಡುಬಂದಿದ್ದು, ಈ ಬಗ್ಗೆ  ಪರಿಶೀಲನೆ ಮುಂದುವರಿದಿರುತ್ತದೆ.ಈ ನಡುವೆ, ಇಂದು ರಾತ್ರಿ ಸುಮಾರು 10 ಗಂಟೆ ಸಮಯದಲ್ಲಿ, ದೂರುದಾರರಾದ ಮೊಹಮ್ಮದ್ ಮುಕ್ಬುಲ್ (34) ರವರು ಸಂಬಂಧಿಯೊರ್ವರ ಸ್ಕೂಟರ್ ನಲ್ಲಿ ಸಹಪ್ರಯಾಣಿಕರಾಗಿ ಕುಳಿತು ಬೊಳ್ಯಾರ್ ಕಡೆಯಿಂದ ಮೆಲ್ಕಾರ್ ಕಡೆಗೆ ಸ್ಕೂಟರ್ ತೆರಳುತ್ತಾ, ದೇರಾಜೆ ಬಸ್ ನಿಲ್ದಾಣದ ಬಳಿ ತಲುಪಿದಾಗ,  ಅಲ್ಲಿ ಬೊಳ್ಯಾರ್ ಕಡೆಗೆ ಮುಖಮಾಡಿ ನಿಲ್ಲಿಸಿದ್ದ ಸ್ಕೂಟರ್ ನಲ್ಲಿ  ಇಬ್ಬರು ಅಪರಿಚಿತರು ಹೆಲ್ಮೆಟ್ ಧರಿಸಿ ಕುಳಿತಿದ್ದು, ಅವರ  ಪೈಕಿ ಓರ್ವ ವ್ಯಕ್ತಿ ದೂರುದಾರರು ತೆರಳುತ್ತಿದ್ದ ಸ್ಕೂಟರ್ ಕಡೆಗೆ ಓಡಿ ಬಂದಿರುತ್ತಾನೆ. ಆ ವೇಳೆ ಆತನ ಕೈಯಲ್ಲಿ ತಲವಾರು ಅಥವಾ ಯಾವುದೇ ಮಾರಕಾಯುಧವನ್ನು ದೂರುದಾರರು ನೋಡಿರುವುದಿಲ್ಲ. ವ್ಯಕ್ತಿ ಓಡಿ ಬರುತ್ತಿರುವುದನ್ನು ಗಮನಿಸಿದ ದೂರುದಾರರು ಸ್ಕೂಟರ್ ಚಾಲನೆ ಮಾಡುತ್ತಿದ್ದ ತನ್ನ ಸಂಬಂಧಿಕನಲ್ಲಿ ವೇಗವಾಗಿ ಹೋಗುವಂತೆ ತಿಳಿಸಿದ್ದು, ಆ ಬಳಿಕ ಹಿಂತಿರುಗಿ ನೋಡದೇ ನಂದಾವರದ ಮನೆಗೆ ತೆರಳಿ ತನ್ನ ತಂದೆಗೆ ಘಟನೆಯ ಬಗ್ಗೆ ತಿಳಿಸಿರುತ್ತಾರೆ. ವಾಟ್ಸಾಪ್ ಗಳಲ್ಲಿ ಪ್ರಸಾರವಾಗುತ್ತಿರುವ ತಲವಾರು ದಾಳಿ ಎಂಬ ಸುಳ್ಳುಸುದ್ದಿಗಳಿಗೂ ತನಗೂ ಯಾವುದೇ ಸಂಬಂಧ ಇರುವುದಿಲ್ಲ ಹಾಗೂ ತಾನು ಸ್ಥಳದಲ್ಲಿ ಜನರನ್ನು ಜಮಾವಣೆಗೊಳಿಸಿರುವುದಿಲ್ಲ ಎಂಬುದಾಗಿ ದೂರುದಾರು ವಿಚಾರಣೆಯ ವೇಳೆ ತಿಳಿಸಿರುತ್ತಾರೆ. ಸದ್ಯ ಮೊಹಮ್ಮದ್ ಮುಕ್ಬುಲ್ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 73/2025, u/s 125 BNS ರಂತೆ ಪ್ರಕರಣ ದಾಖಲಿಸಲಾಗುತ್ತಿದ್ದು, ತನಿಖೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನಾಸ್ಥಳಕ್ಕೆ ಪಿ.ಎಸ್.ಐ ರವರು ಧಾವಿಸಿದಾಗ, ಅಲ್ಲಿ ನೆರೆದಿದ್ದ ಕೆಲವರು ಕಳೆದ ವಾರ ಬಕ್ರೀದ್ ಸಮಯದಲ್ಲಿ ಸಜಿಪನಡುವಿನಲ್ಲಿ ಸಾಗಿಸುತ್ತಿದ್ದ ಹಸುಗಳನ್ನು ವಶಪಡಿಸಿಕೊಳ್ಳಲಾಗಿದೆ ಆದರೆ ಕಳೆದ ವಾರದಲ್ಲಿ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂಬುದಾಗಿ ಕೇಳಿರುತ್ತಾರೆ. ಕಳೆದ ವಾರದಲ್ಲಿ ನಡೆದ ಕೊಲೆ ಯತ್ನ ಪ್ರಕರಣಕ್ಕೆ ಹಾಗೂ ಬಕ್ರೀದ್ ಸಮಯದಲ್ಲಿ ಹಸುಗಳನ್ನು  ವಶಪಡಿಸಿಕೊಂಡ ಪ್ರಕರಣಕ್ಕೂ ಯಾವ ರೀತಿ ಸಂಬಂಧ ಇರುತ್ತದೆ ಎಂಬ ಆಯಾಮದಲ್ಲೂ ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ.

    Post Views: 150

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.