Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಪ್ರಗತಿಪರ ಕೃಷಿಕನ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್..!
    ಇತ್ತೀಚಿನ ಸುದ್ದಿ

    ಕಡಬ: ಪ್ರಗತಿಪರ ಕೃಷಿಕನ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್..!

    November 10, 2024
    Share

    ಕಡಬ: ಭೂವಿವಾದಕ್ಕೆ ಸಂಬಂಧಿಸಿದಂತೆ ಕಡಬ ತಾಲೂಕಿನ ಗೋಳಿತೊಟ್ಟು, ಆಲಂತಾಯ ಗ್ರಾಮದ ಪೆರ್ಲ ನಿವಾಸಿ ಪ್ರಗತಿಪರ ಕೃಷಿಕ ರಮೇಶ ಗೌಡ ಎಂಬವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಪೆರ್ಲ ಕಲ್ಲಂಡದ ಹರೀಶ (29) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ನವೆಂಬರ್‌ 8ರಂದು ರಾತ್ರಿ ಸ್ಕೂಟರ್‌ನಲ್ಲಿ ಬರುತ್ತಿದ್ದ ರಮೇಶ ಗೌಡರನ್ನು ದಾರಿಯಲ್ಲಿ ಕಾದು ಕುಳಿತು ಅಟ್ಟಾಡಿಸಿ, ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿತ್ತು. ಈ ಬಗ್ಗೆ ಶ್ರೀಧರ ಗೌಡರ ಪತ್ನಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ಈ ಕೊಲೆ ಪ್ರಕರಣದಲ್ಲಿ ಆರೋಪಿ ಹರೀಶ ಸೇರಿದಂತೆ ಆತನ ಸಹೋದರಿಯ ಪತಿ ಸಂತೋಷ್ ಹಾಗೂ ಧರ್ಣಪ್ಪ ಅಲಿಯಾಸ್ ಬೆಳಿಯಪ್ಪ ಗೌಡ ಎಂಬವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಕೊಲೆ ಆರೋಪಿ ಹರೀಶನ ಮನೆಯವರಿಗೂ ತನ್ನ ಪತಿಗೂ ಸುಮಾರು 7-8 ತಿಂಗಳ ಹಿಂದೆ ರಸ್ತೆಗೆ ನೀರಿನ ಪೈಪ್ ಅಳವಡಿಸುವ ಮನಸ್ತಾಪವಿತ್ತು. ಈ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿತ್ತು. ಆ ಬಳಿಕ ಮರವೊಂದನ್ನು ಕಡಿಯುವ ವಿಚಾರದಲ್ಲಿ ಮತ್ತೆ ಮನಸ್ತಾಪ ಮುಂದುವರಿದಿತ್ತು. ನ.8ರಂದು ರಾತ್ರಿ ನನ್ನ ಪತಿ ದೇವಸ್ಥಾನಕ್ಕೆಂದು ದ್ವಿಚಕ್ರ ವಾಹನದಲ್ಲಿ ಹೊರಟಿದ್ದರು. ಮನೆಯಿಂದ ಸ್ವಲ್ಪ ದೂರದಲ್ಲೇ ನನ್ನ ಪತಿಯ ಬೊಬ್ಬೆ ಕೇಳಿ ನಾವು ಅಲ್ಲಿಗೆ ಓಡಿ ಹೋಗಿ ನೋಡಿದಾಗ ಆರೋಪಿಗಳಾದ ಹರೀಶ್, ಆತನ ತಂಗಿಯ ಗಂಡ ಸಂತೋಷ್ ಹಾಗೂ ಧರ್ಣಪ್ಪ ಯಾನೆ ಬೆಳಿಯಪ್ಪ ಎಂಬವರು ಸೇರಿ ಕತ್ತಿಯಿಂದ ನನ್ನ ಗಂಡನಿಗೆ ಕಡಿದಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದರು ಎಂದು ಶ್ರೀಧರ ಗೌಡರ ಪತ್ನಿ ಗೀತಾ ದೂರಿನಲ್ಲಿ ತಿಳಿಸಿದ್ದಾರೆ.

    Post Views: 203

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.