Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಸ್ತೆಯ ಬದಿಯ ಕಾರಿನಲ್ಲಿ ಯುವಕ-ಯುವತಿಯ ಸರಸ : ಪ್ರಶ್ನಿಸಿದ ಪೊಲೀಸ್ ಅಧಿಕಾರಿ ಮೇಲೆ ಕಾರು ಹರಿಸಿ ಪರಾರಿ
    ಇತ್ತೀಚಿನ ಸುದ್ದಿ

    ರಸ್ತೆಯ ಬದಿಯ ಕಾರಿನಲ್ಲಿ ಯುವಕ-ಯುವತಿಯ ಸರಸ : ಪ್ರಶ್ನಿಸಿದ ಪೊಲೀಸ್ ಅಧಿಕಾರಿ ಮೇಲೆ ಕಾರು ಹರಿಸಿ ಪರಾರಿ

    January 25, 2024
    Share

    ರಸ್ತೆ ಬದಿಯೇ ಕಾರಿನಲ್ಲಿ ಯುವಕ ಯುವತಿ ಸರಸ ಸಲ್ಲಾಪ ನಡೆಸುತ್ತಿದಾಗ ಈ ವೇಳೆ ಪ್ರಶ್ನೆ ಮಾಡಿದ ಪೊಲೀಸ್ ಅಧಿಕಾರಿ ಮೇಲೆ ಕಾರುಹರಿಸಲು ಯತ್ನಿಸಿ ಹಿಟ್ ಹ್ಯಾಂಡ್ ರನ್ ಮಾಡಿ ಜೋಡಿಗಳು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಹಾಡಹಗಲೇ ಸಾರ್ವಜನಿಕ ರಸ್ತೆಯ ಬದಿ ಕಾರಿನೊಳಗೆ ಬೆತ್ತಲಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಯುವಕ- ಯುವತಿಗೆ ಬುದ್ದಿ ಹೇಳಲು ಮುಂದಾದ ಪೊಲೀಸ್ ಅಧಿಕಾರಿ ಮೇಲೆಯೇ ಕಾರು ಹತ್ತಿಸಲು ಯತ್ನಿಸಿರುವ ಘಟನೆ ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜ.20ರಂದು ಮಧ್ಯಾಹ್ನ 3.30ರ ಸುಮಾರಿಗೆ ಉಪಕಾರ ಲೇಔಟ್‌ನ ಮೂರನೇ ಮುಖ್ಯ ರಸ್ತೆಯ 3ನೇ ಅಡ್ಡರಸ್ತೆಯ ಊರ್ವ ರೆಸಿಡೆನ್ಸಿ ಬಳಿ ಈ ಘಟನೆ ನಡೆದಿದೆ.

    ಘಟನೆಯಲ್ಲಿ ನಗರ ಸಶಸ್ತ್ರ ಮೀಸಲು ಪಡೆ ಪಶ್ಚಿಮ ವಿಭಾಗದ ರಿಸರ್ವ್ ಸಬ್ ಇನ್‌ಸ್ಪೆಕ್ಟರ್ ಕೆ.ಮಹೇಶ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಇವರು ನೀಡಿದ ದೂರಿನ ಮೇರೆಗೆ ಅಪರಿಚಿತ ಜೋಡಿಯ ವಿರುದ್ದ ಕೊಲೆಗೆ ಯತ್ನ ಪ್ರಕರಣ ದಾಖಲಿಸಿ ಪತ್ತೆಗೆ ಶೋಧಿಸಲಾಗುತ್ತಿದೆ.

    ಘಟನೆ ವಿವರ: ಉಪಕಾರ ಲೇಔಟ್ ನಿವಾಸಿ ಆರ್‌ಎಸ್‌ಐ ಮಹೇಶ್ ಜ.20ರಂದು ಮಧ್ಯಾಹ್ನ 3.30ರ ಸುಮಾರಿಗೆ ಊಟ ಮುಗಿಸಿ ವಾಕಿಂಗ್ ಮಾಡಲು ಮನೆ ಎದುರಿನ ರಸ್ತೆಗೆ ಬಂದಿದ್ದಾರೆ.ಈ ವೇಳೆ ರಸ್ತೆಯ ಎಡಬದಿ ಬಿಳಿ ಬಣ್ಣದ ಕಾರೊಂದು ನಿಂತಿರುವುದು ಕಂಡು ಬಂದಿದೆ. ಏಳೆಂಟು ಹೆಜ್ಜೆ ಮುಂದೆ ಹೋಗಿ ಬಳಿಕ ಹಿಂದಿರುಗಿ ನೋಡಿದಾಗ ಆ ಕಾರಿನ ಹಿಂಬದಿ ಆಸನದಲ್ಲಿ ಯುವಕ-ಯುವತಿ ವಿವಸ್ತ್ರರಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದು ಕಂಡುಬಂದಿದೆ.

    ಕಾರು ಹತ್ತಿಸಲು ಯತ್ನ: ಸಾರ್ವಜನಿಕ ರಸ್ತೆಯಲ್ಲಿ ಹಲವರು ವಾಕಿಂಗ್‌ಗೆ ಬರುವುದರಿಂದ ಸರಸ-ಸಲ್ಲಾಪದಲ್ಲಿ ತೊಡಗಿದ್ದ ಯುವ ಜೋಡಿಗೆ ತಿಳಿ ಹೇಳಲು ಮಹೇಶ್ ಕಾರಿನ ಮುಂಭಾಗಕ್ಕೆ ಬಂದು ನೋಂದಣಿ ಸಂಖ್ಯೆ ನೋಡಲು ಕೆಳಗೆ ಬರಿದ್ದಾರೆ ಆಗ ಕಾರಿನ ಹಿಂಬದಿ ಸೀಟಿನಲ್ಲಿದ್ದ ಯುವಕ ಚಾಲಕನ ಸೀಟಿಗೆ ಬಂದು ಏಕಾಏಕಿ ಕಾರು ಸ್ಟಾರ್ಟ್ ಮಾಡಿ ಮುಂದಕ್ಕೆ ಚಲಾಯಿಸಿ ಮಹೇಶ್ ಮೇಲೆ ಹತ್ತಿಸಲು ಪ್ರಯತ್ನಿಸಿದ್ದಾನೆ. ಅಷ್ಟರಲ್ಲಿ ಮಹೇಶ್ ಎಚ್ಚೆತ್ತುಕೊಂಡು ತಕ್ಷಣ ಕಾರಿನ ಬಾನೆಟ್ ಮೇಲೆ ಜಿಗಿದು ಬಿಗಿಯಾಗಿ ಹಿಡಿದುಕೊಂಡಿದ್ದಾರೆ.

    Post Views: 278

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.