Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರಾವಳಿಯಲ್ಲಿ ಐತಿಹಾಸಿಕ ಕ್ಷಣ: ಏಕಕಾಲಕ್ಕೆ ನಾಲ್ಕು ಭವ್ಯ ಸಭಾಭವನಗಳ ಲೋಕಾರ್ಪಣೆ
    ಇತ್ತೀಚಿನ ಸುದ್ದಿ

    ಕರಾವಳಿಯಲ್ಲಿ ಐತಿಹಾಸಿಕ ಕ್ಷಣ: ಏಕಕಾಲಕ್ಕೆ ನಾಲ್ಕು ಭವ್ಯ ಸಭಾಭವನಗಳ ಲೋಕಾರ್ಪಣೆ

    May 21, 2026
    Share

    ಮಂಗಳೂರು: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ ಗೊಳ್ಳಲಿದೆ ಎಂದು ಮಾಜಿ ಸಚಿವ ಹಾಗೂ ವಿಕಾಸ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಜೆ ಪಾಲೆಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿ ಹಾದಿಯ ಸವಿನೆನಪಿಗಾಗಿ ಕರಾವಳಿ ಜನತೆಗೆ ಸಂದ ವಿಶಿಷ್ಟ ಕೊಡುಗೆ ಮಂಗಳೂರಿನ ನಾಲ್ಕು ಕಡೆಗಳಲ್ಲಿ ನಾಲ್ಕು ಅತ್ಯಾಧುನಿಕ ಸಭಾಂಗಣಗಳು ಉದ್ಘಾಟನೆ ಗೊಳ್ಳಲಿದೆ ಎಂದು ಪಾಲೆಮಾರ್ ತಿಳಿಸಿದ್ದಾರೆ.ಕರಾವಳಿಯ ಹೆಮ್ಮೆಯ ಹಾಗೂ ಅತ್ಯಂತ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ಲ್ಯಾಂಡ್ ಲಿಂಕ್ಸ್, ಕರಾವಳಿ ಭಾಗದಲ್ಲಿ ಕಳೆದ 45 ವರ್ಷಗಳಿಂದ ತನ್ನ ಪ್ರಾಮಾಣಿಕ ಮತ್ತು ಯಶಸ್ವಿ ಉದ್ಯಮದ ಮೂಲಕ ಲಕ್ಷಾಂತರ ಜನರ ನಂಬಿಕೆಯನ್ನು ಗಳಿಸಿದೆ. ಈ ಸುದೀರ್ಘ ಯಶಸ್ವಿ ಹಾದಿಯ ಸವಿನೆನಪಿಗಾಗಿ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ಪ್ರಪ್ರಥಮ ಬಾರಿಗೆ ಅತ್ಯಾಧುನಿಕ ಸೌಲಭ್ಯಗಳನ್ನೊಳ ಗೊಂಡ, ನಾಡಿನ ಜನತೆಗೆ ಯೋಗ್ಯವಾದ ನಾಲ್ಕು ಭವ್ಯ ಸಭಾಭವನಗಳನ್ನು ಏಕಕಾಲದಲ್ಲಿ ಲೋಕಾರ್ಪಣೆ ಮಾಡುತ್ತಿದೆ.ಈ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವದ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಂಧ್ರ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಜ| ಎಸ್. ಅಬ್ದುಲ್ ನಜೀರ್ ಅವರು ಆಗಮಿಸಿ, ನಾಲ್ಕೂ ಸಭಾಂಗಣಗಳನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಿದ್ದಾರೆ. ಈ ನಾಲ್ಕು ಅದ್ದೂರಿ ಪಾಲೆಮಾರ್ ಸಭಾಂಗಣಗಳ ಮಹಾ ಲೋಕಾರ್ಪಣಾ ಸಮಾರಂಭವು ಮೇ23ರಂದು ಅತ್ಯಂತ ವೈಭವದಿಂದ ಜರುಗಲಿದೆ. ಅಂದು ಬೆಳಿಗ್ಗೆ 10ಗಂಟೆಗೆ ಮಂಗಳೂರಿನ ಮೇರಿಹಿಲ್‌ನ ಲ್ಲಿರುವ ಪಾಲೆಮಾರ್ ಕನ್ವೆನ್ಶನ್ ಸೆಂಟರ್‌ ನಲ್ಲಿ ಲೋಕಾರ್ಪಣಾ ಕಾರ್ಯಕ್ರಮ ನಡೆಯಲಿದೆ ಎಂದು ಪಾಲೆಮಾರ್ ತಿಳಿಸಿದ್ದಾರೆ.ಸಮಾರಂಭದಲ್ಲಿ ಭಾರತ ಸರ್ಕಾರದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು. ಟಿ. ಖಾದರ್, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಬ್ರಿಜೇಶ್ ಚೌಟ, ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ, ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದ ಐವನ್ ಡಿಸೋಜ ಸೇರಿದಂತೆ ಕರಾವಳಿ ಮತ್ತು ರಾಜ್ಯ ಮಟ್ಟದ ಹಲವಾರು ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ಕೃಷ್ಣಾ ಜೆ ಪಾಲೆಮಾರ್ ತಿಳಿಸಿದ್ದಾರೆ.ಪಾಲೆಮಾರ್ ಕನ್ವೆನ್ಶನ್ ಸೆಂಟರ್, ಮೇರಿಹಿಲ್, ಮಂಗಳೂರು: ಅದ್ದೂರಿತನ ಮತ್ತು ಸಾಂಪ್ರದಾಯಿಕತೆಯ ಅದ್ಭುತ ಸಮ್ಮಿಲನವೇ ಮೇರಿಹಿಲ್‌ನಲ್ಲಿರುವ ಪಾಲೆಮಾರ್ ಕನ್ವೆನ್ಶನ್ ಸೆಂಟರ್. ನೋಡುಗರ ಕಣ್ಣು ಸೆಳೆಯುವ ಮರದ ಕರಕುಶಲತೆಯಿಂದ ಕೂಡಿದ ಭವ್ಯ ಒಳಾಂಗಣ ವಿನ್ಯಾಸ ಇದರ ಪ್ರಮುಖ ಆಕರ್ಷಣೆಯಾಗಿದೆ. ಸಾಂಪ್ರದಾಯಿಕ ಮದುವೆ ಸಮಾರಂಭಗಳ ಜೊತೆಗೆ ಕಾರ್ಪೊರೇಟ್ ಶೈಲಿಯ ಹೈ-ಟೆಕ್ ಕಾರ್ಯಕ್ರಮಗಳನ್ನು ನಡೆಸಲು ಸೂಕ್ತವಾಗಿದೆ.

    2.ಪಾಲೆಮಾರ್ ಗಾರ್ಡನ್ ಮೊರ್ಗನ್ಸ್ ಗೇಟ್ :- ಸುಂದರವಾದ ಹೊರಾಂಗಣ ಈಜುಕೊಳ, ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಮತ್ತು ಬೃಹತ್ ಹಸಿರು ಮೈದಾನ.ಸುಂದರ ವಿನ್ಯಾಸದ ಪಾರಂಪರಿಕ ಕಟ್ಟಡಗಳು ಇಲ್ಲಿನ ವಿಶೇಷ ತೆಯಾಗಿದೆ.

    3. ಪಾಲೆಮಾರ್ ಫಾರ್ಮ್ಸ್, ಸುರತ್ಕಲ್: ನಗರ ಪ್ರದೇಶದ ವಾತಾವರಣದಿಂದ ದೂರವಿದ್ದು, ನಿಸರ್ಗದ ಮೌನ, ತಂಪಾದ ಗಾಳಿ, ಮರಗಳ ನೆರಳು ಹಾಗೂ ಪಕ್ಷಿಗಳ ಕಲರವದ ನಡುವೆ ಹಸಿರನ್ನು ಪ್ರೀತಿಸುವವರಿಗಾಗಿ ಸುರತ್ಕಲ್ ಸಮೀಪ 20 ಎಕರೆ ವಿಶಾಲವಾದ ಜಾಗ ದಲ್ಲಿ ಈ ಫಾರ್ಮ್ಸ್ ಸಿದ್ಧಗೊಂಡಿದೆ. ಆಪ್ತ ಒಡನಾಡಿಗಳೊಂದಿಗೆ ಆಚರಿಸುವ ಮದುವೆ, ಹೊರಾಂಗಣ ಕಾರ್ಯಕ್ರಮ ಗಳು, ಬರ್ತ್ಡೇ ಪಾರ್ಟಿಗಳು, ಮೆಹೆಂದಿ ಹಾಗೂ ಕೌಟುಂಬಿಕ ಸಮಾರಂಭಗಳಿಗೆ ಇದು ಸೂಕ್ತ ತಾಣ.

    4. ನೇತ್ರಾವತಿ ಸಭಾಭವನ, ಕಡೆಕಾರ್, ಜೆಪ್ಪಿನಮೊಗರು: ಮಂಗಳೂರಿನ ಜೀವನಾಡಿ ನೇತ್ರಾವತಿ ನದಿಯ ದಡದಲ್ಲಿರುವ ಜೆಪ್ಪಿನಮೊಗರಿನ ಕಡೆಕಾರ್ ಎಂಬ ಅತ್ಯಂತ ಪ್ರಶಾಂತ ಮತ್ತು ಪವಿತ್ರ ವಾತಾವರಣದಲ್ಲಿ ಈ ಸಭಾಂಗಣ ತಲೆಯೆತ್ತಿದೆ. ಒಂದು ಬದಿಯಲ್ಲಿ ನದಿಯ ತಣ್ಣನೆ ಗಾಳಿ, ಇನ್ನೊಂದು ಬದಿಯಲ್ಲಿ ಪುರಾತನ ದೇವಸ್ಥಾನವಿದ್ದು, ಇಡೀ ಪರಿಸರಕ್ಕೆ ದೈವಿಕ ಕಳೆಯನ್ನು ನೀಡುತ್ತದೆ. ವಿವಾಹ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮಗಳು, ಸಂಗೀತ ಕಛೇರಿಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಇದು ಅತ್ಯಂತ ಪ್ರಶಸ್ತವಾಗಿದೆ. ಕಡಿಮೆ ದರದಲ್ಲಿ ಜನಸಾಮಾನ್ಯರಿಗೂ ಅನುಕೂಲವಾಗುವಂತೆ ಇದನ್ನು ನಿರ್ಮಿಸ ಲಾಗಿದೆ. ವಾಹನ ಪಾರ್ಕಿಂಗ್. ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ನಾಲ್ಕೂ ಸಭಾಭವನಗಳಲ್ಲಿ ಅತ್ಯಂತ ವಿಶಾಲವಾದ, ವ್ಯವಸ್ಥಿತವಾದ ಪಾರ್ಕಿಂಗ್ ಸ್ಥಳಾವಕಾಶವನ್ನು ಕಲ್ಪಿಸಲಾಗಿದೆ. ನೂರಾರು ವಾಹನಗಳು ಏಕಕಾಲದಲ್ಲಿ ಯಾವುದೇ ಗೊಂದಲವಿಲ್ಲದೆ ಬಂದು ಹೋಗಲು ಇಲ್ಲಿ ಮುಕ್ತ ಅವಕಾಶವಿದೆ.ರಾಷ್ಟ್ರೀಯ ಹೆದ್ದಾರಿ ಹಾಗೂ ಮುಖ್ಯರಸ್ತೆಗಳ ಸಂಪರ್ಕಎಲ್ಲಾ ನಾಲ್ಕು ಸಭಾಭವನಗಳನ್ನು ನಗರದ ಪ್ರಮುಖ ಮುಖ್ಯ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿಯೇ ನಿರ್ಮಿಸಲಾಗಿದೆ. ಹಾಗಾಗಿ ದೂರದ ಊರುಗಳಿಂದ ಬರುವ ಅತಿಥಿಗಳು ಹೆಚ್ಚಿನ ಹುಡುಕಾಟವಿಲ್ಲದೆ, ಉತ್ತಮ ರಸ್ತೆ ಸಂಪರ್ಕದ ಮೂಲಕ ಅತ್ಯಂತ ಸುಲಭವಾಗಿ ಮತ್ತು ಸರಾಗ ವಾಗಿ ನಿಗದಿತ ಸಮಯಕ್ಕೆ ಸಭಾಭವನಗಳನ್ನು ತಲುಪಬಹುದು.ಎಲ್ಲರಿಗೂ ಕೈಗೆಟಕುವ ದರದಲ್ಲಿ ಲಭ್ಯ: ಕಾರ್ಪೊರೇಟ್ ಶೈಲಿಯ ಅದ್ದೂರಿ ಈವೆಂಟ್‌ಗಳಿಂದ ಹಿಡಿದು ಜನಸಾಮಾನ್ಯರ ಸಣ್ಣ ಬಜೆಟ್‌ನ ಕಾರ್ಯಕ್ರಮ ಗಳವರೆಗೆ, ಪ್ರತಿಯೊಬ್ಬರ ಆರ್ಥಿಕ ಶಕ್ತಿಗೆ ತಕ್ಕಂತೆ ಇಲ್ಲಿ ಸಭಾಂಗಣಗಳು ಲಭ್ಯವಿವೆ. ಎಲ್ಲ ವರ್ಗದ ಜನರಿಗೂ ಕೈಗೆಟಕುವ ದರದ ಸಭಾಂಗಣಗಳನ್ನು ಇಲ್ಲಿ ರೂಪಿಸಲಾಗಿದೆ.ಸುದ್ದಿಗೋಷ್ಠಿಯಲ್ಲಿ ವಿಕಾಸ ಎಜುಕೇಶನ್ ಟ್ರಸ್ಟ್ ನ ಟ್ರಸ್ಟಿಗಳಾದ ಜೆ.ಕೆ.ರಾವ್, ಕೊರಗಪ್ಪ, ಸೂರಜ್ ಕುಮಾರ್ ಕಲ್ಯ, ಜೆ.ಸಂತೋಷ್ ಕುಮಾರ್, ಲ್ಯಾಂಡ್ ಲಿಂಕ್ಸ್ ನ ಉಪಾಧ್ಯಕ್ಷ ಪ್ರದೀಪ್ ಪಾಲ್ ಮಾರ್ ಮೊದಲಾದವರು ಉಪಸ್ಥಿತರಿದ್ದರು.

    Post Views: 126

    karnataka mangalore

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.