Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗಾಂಧೀಜಿ ಹೆಸರು ಅಳಿಸುತ್ತಿರುವುದು ಕೇಂದ್ರ ಸರ್ಕಾರದ ಘೋರ ಅಪರಾಧ- ಮಾಜಿ ಸಚಿವ ರಮಾನಾಥ ರೈ
    ಇತ್ತೀಚಿನ ಸುದ್ದಿ

    ಗಾಂಧೀಜಿ ಹೆಸರು ಅಳಿಸುತ್ತಿರುವುದು ಕೇಂದ್ರ ಸರ್ಕಾರದ ಘೋರ ಅಪರಾಧ- ಮಾಜಿ ಸಚಿವ ರಮಾನಾಥ ರೈ

    December 19, 2025
    Share

    ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ತಿದ್ದುಪಡಿ ಮಾಡಿ ಗಾಂಧೀಜಿ ಹೆಸರು ಅಳಿಸುತ್ತಿರುವುದು ಕೇಂದ್ರ ಸರ್ಕಾರದ ಘೋರ ಅಪರಾಧವನ್ನು ಖಂಡಿಸುವುದಾಗಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

    ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯುಪಿಎ ಆಡಳಿತಾವಧಿಯಲ್ಲಿ ನೀಡಲಾದ ಮಹತ್ತರ ಯೋಜನೆ ಇದಾಗಿದ್ದು, ಜಗತ್ತು ಈ ಕಾರ್ಯಕ್ರಮವನ್ನು ಮೆಚ್ಚಿದೆ. ಈ ಯೋಜನೆ ಮಂಡಿಸಲಾದ ಸಂದರ್ಭ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು.

    ಭ್ರಷ್ಟಾಚಾರ ಕಾರ್ಯಕ್ರಮ ಎಂದು ಹೇಳಿದ್ದವು. ಮಹಾತ್ಮಗಾಂಧಿ ಹೆಸರಿನಲ್ಲಿ ಜಾರಿಗೆ ಬಂದಿದ್ದ ಈ ಯೋಜನೆ ಸಮಾಜದ ಬಡ, ರೈತ, ಕಾರ್ಮಿಕ ವರ್ಗಕ್ಕೆ ಅನುಕೂಲವಾಗಿದೆ. ಇದೀಗ ಮಹಾತ್ಮ ಗಾಂಧಿ ಹೆಸರನ್ನು ಕೈಬಿಡುವ ಮೂಲಕ ಅವಮಾನ ಮಾಡಲಾಗಿದೆ. ಈಗಾಗಲೇ ಮಹಾತ್ಮಗಾಂಧಿ ವಿರುದ್ಧ ಸಂಘ ಪರಿವಾರದ ಶಕ್ತಿಗಳಿಂದ ನಡೆಯುತ್ತಿರುವ ಮಹಾತ್ಮಗಾಂಧಿ ವಿರುದ್ಧದ ಅವಹೇಳನದ ಭಾಗ ಇದಾಗಿದೆ ಎಂದು ಅವರು ಆರೋಪಿಸಿದರು.

    ಹಿಂದೆ ಈ ಯೋಜನೆಯಡಿ ವೇತನವನ್ನು ಕೇಂದ್ರ ಸರಕಾರದಿಂದ ಪಾವತಿಸಲಾಗುತ್ತಿತ್ತು. ಈಗ ಕೇಂದ್ರ ಶೇ.60, ರಾಜ್ಯ ಶೇ.40 ಪಾಲು ಎಂದು ಹೇಳಿರುವುದು ಈ ಯೋಜನೆಯ ಗಾಂಧೀಜಿ ಹೆಸರು ಬದಲಾವಣೆಯ ಜತೆಗೆ ಯೋಜನೆಯನ್ನು ದುರ್ಬಲಗೊಳಿಸುವ ಯತ್ನವೂ ನಡೆದಿದೆ. ಗಾಂಧೀಜಿ ಬಗೆಗಿನ ಬಿಜೆಪಿ ಧೋರಣೆ ಏನೆಂಬುದು ಇದರಿಂದ ಸ್ಪಷ್ಟವಾಗಿದೆ. ಇತಿಹಾಸವನ್ನು ತಿದ್ದುವ ಕೆಲಸ ಬಿಜೆಪಿಯಿಂದ ನಡೆಯುತ್ತಿದ್ದು, ದೇಶಕ್ಕಾಗಿ ತ್ಯಾಗ ಮಾಡಿದವರನ್ನು, ಇತಿಹಾಸದ ಪುಟಗಳಿಂದ ಅಳಿಸುವ ಕಾರ್ಯ ನಡೆಯುತ್ತಿದೆ.

    ಪ್ರಪಂಚದ 80 ದೇಶಗಳಲ್ಲಿ ಗಾಂಧೀಜಿ ಪ್ರತಿಮೆ ಮೂಲಕ ಗೌರವ ಸಲ್ಲಿಸಲಾಗುತ್ತದೆ. ಪ್ರಧಾನಿ ಮೋದಿಯವರು ಬೇರೆ ದೇಶಕ್ಕೆ ಹೋದಾಗ ಗಾಂಧೀ ಪ್ರತಿಮೆಗೆ ಮಾಲಾರ್ಪಣೆ ಮಾಡುತ್ತಾರೆ. ಆದರೆ ದೇಶದಲ್ಲಿ ಅವರ ಹೆಸರನ್ನೇ ಅಳಿಸುವ ಕಾರ್ಯ ನಡೆಯುತ್ತಿದೆ ಎಂದು ಆಕ್ರೋಶ ಹೊರ ಹಾಖಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಶಶಿಧರ ಹೆಗ್ಡೆ, ಅಶ್ರಫ್ ಕೆ.ಇ., ಬ್ಲಾಕ್ ಅಧ್ಯಕ್ಷರಾದ ಬಿ.ಎಲ್.ಪದ್ಮನಾಭ ಕೋಟ್ಯಾನ್, ಪ್ರಕಾಶ್ ಸಾಲ್ಯಾನ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಡೆನ್ನಿಸ್ ಡಿಸಿಲ್ವಾ, ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಮಂಜುಳಾ ನಾಯಕ್, ಮಹಿಳಾ ಮುಂಚೂಣಿ ಘಟಕದ ನಗರ ಅಧ್ಯಕ್ಷೆ ಅಪ್ಪಿ, ಡಿಸಿಸಿ ಉಪಾಧ್ಯಕ್ಷ ಶುಭೋದಯ ಆಳ್ವ, ಪ್ರಧಾನ ಕಾರ್ಯದರ್ಶಿ ಜಯಶೀಲ ಅಡ್ಯಂತಾಯ, ಟಿ.ಕೆ.ಸುಧೀರ್, ದಿನೇಶ್ ಮೂಳೂರ್, ಸಮರ್ಥ್ ಭಟ್, ಶಬೀರ್ ಸಿದ್ದಕಟ್ಟೆ ಉಪಸ್ಥಿತರಿದ್ದರು.

    Post Views: 211

    Related Posts

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.