Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ನಕಲಿ ಚಿನ್ನ ಅಡವಿಟ್ಟು ವಂಚನೆ, ಉತ್ತರ ಕನ್ನಡದ ನಾಲ್ವರ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ : ನಕಲಿ ಚಿನ್ನ ಅಡವಿಟ್ಟು ವಂಚನೆ, ಉತ್ತರ ಕನ್ನಡದ ನಾಲ್ವರ ಬಂಧನ

    March 7, 2024
    Share

    ಉಡುಪಿ ಜಿಲ್ಲೆಯ  ಪಡುಬಿದ್ರಿಯಲ್ಲಿ ಆರೋಪಿ ರಾಜೀವ್ 30ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಸ್ಥಳೀಯವಾಗಿ ಬ್ಯಾಂಕು, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣವನ್ನು ಪಡುಬಿದ್ರಿ ಪಿಎಸ್‌ಐ ಪ್ರಸನ್ನ ಮತ್ತು ತಂಡ  ಬೇಧಿಸಿದ್ದಾರೆ.

    ರಾಜೀವ್‌ನಿಗೆ ಸಹಕರಿಸಿದ ಆರೋಪಿಗಳಾದ ಕುಮುಟಾದ ನಿತಿಲ್ ಭಾಸ್ಕರ್ ಶೇಟ್, ಸಂಜಯ್ ಶೇಟ್, ಮತ್ತು ಸಂತೋಷ್ ಶೇಟ್, ಹಾಗೂ ಬೆಳಗಾವಿಯ ಕೈಲಾಸ್ ಗೋರಾಡ, ಎಂಬ ನಾಲ್ವರನ್ನು  ಬಂಧಿಸಿದ್ದಾರೆ.  ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿಗಳಿಂದ ನಕಲಿ 916 ಹಾಲ್‌ಮಾರ್ಕ್ ಸೀಲ್ ಹಾಕಲು ಬಳಸಲಾಗುತ್ತಿದ್ದ ಸುಮಾರು 3.5 ಲಕ್ಷ ರೂ. ಮೌಲ್ಯದ ಮೆಷಿನ್ ಕಂಪ್ಯೂಟರ್‌ಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ರಾಜೀವ್ 30 ಗ್ರಾಂ ಗೋಲ್ಡ್ ಬಳಸಿ20 ಗ್ರಾಂ ಚಿನ್ನಾಭರಣದೊಂದಿಗೆ ಗಲ್ ರಾಷ್ಟ್ರಕ್ಕೆ ಹೋಗುವ ಮತ್ತು ಅಲ್ಲಿಂದ ವಾಪಾಸಾಗುವ ವೇಳೆ 20 ಗ್ರಾಂ ಶುದ್ಧ ಚಿನ್ನದಾಭರಣವನ್ನೇ ಹಾಕಿಕೊಂಡು ಬರುವ ತನ್ನ ಪ್ಲಾನ್‌ಗೆ ಸಹಕರಿಸಲು ಪ್ರಕರಣದ ಇತರ ಆರೋಪಿಗಳಾದ ನಿತಿಲ್ ಭಾಸ್ಕರ್ ಶೇಟ್‌ನನ್ನು ಬಳಸಿಕೊಂಡಿದ್ದ. ಕುಮುಟಾದ ಇನ್ನಿಬ್ಬರು ಆರೋಪಿಗಳಿಂದ ನಕಲಿ ಚಿನ್ನದ ಆಭರಣಗಳನ್ನು ತಯಾರಿಸಿಕೊಂಡು ಬೆಳಗಾವಿಯಲ್ಲಿ ನಕಲಿ ಹಾಲ್‌ಮಾರ್ಕ್ ಮೊಹರನ್ನು ಹಾಕಲಾಗುತ್ತಿತ್ತು. ಆದರೆ ಆರೋಪಿ ರಾಜೀವ್ ತನ್ನ ಖತರ್‌ನಾಕ್ ಐಡಿಯಾವನ್ನು ಬದಲಾಯಿಸಿ, ಸ್ಥಳೀಯವಾಗಿ ಸೊಸೈಟಿ ಸಂಸ್ಥೆಗಳಿಗ ವಂಚನೆ ಮಾಡಲು ಶುರುವಿಟ್ಟು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

    ಬ್ಯಾಂಕು, ಸೊಸೈಟಿಗಳಲ್ಲಿ ಚಿನ್ನಾಭರಣ ಈಡಿನ ಸಾಲವನ್ನಿತ್ತು ಮರಳಿ ಬಾರದೇ ಇದ್ದಾಗ ಏಲಂ ಪ್ರಕ್ರಿಯೆ ನಡೆಸಿ ಇದರಲ್ಲೂ ನಕಲಿ ಅಸಲಿಗಳನ್ನು ಪತ್ತೆ ಮಾಡಲಾಗಿರಲಿಲ್ಲ. ಕೇವಲ ಉಡುಪಿಯ ಬಿಡ್ಡುದಾರರೊಬ್ಬರು ಇದನ್ನು ಕತ್ತರಿಸಿ ಪರಿಶೀಲಿಸಿದಾಗ ಆರೋಪಿ ರಾಜೀವ್ ಮತ್ತು ಆತನ ಪತ್ನಿಯ ಚಿನ್ನಾಭರಣ ಸಾಲದ ವಂಚನೆ ಪ್ರಕರಣವು ಬೆಳಕಿಗೆಬಂತು. ವಿವಿಧ ಬ್ಯಾಂಕ್ ಗಳಲ್ಲಿ ಒಟ್ಟು 29.94 ಲಕ್ಷ ರೂ. ಗಳನ್ನು ರಾಜೀವ್ ದಂಪತಿ ಪಡೆದಿದ್ದರು.ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅರುಣ್ ಕುಮಾರ್, ಉಪ-ಅಧೀಕ್ಷಕ ಸಿದ್ಧಲಿಂಗಪ್ಪ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಹಾಗೂ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಅವರ ನಿರ್ದೇಶನದಂತೆ ಪಡುಬಿದ್ರಿ ಪಿಎಸ್‌ಐ ಪ್ರಸನ್ನ ಎಂ. ಎಸ್. ಹಾಗೂ ಅವರ ಸಿಬಂದಿಗಳು ಪ್ರಕರಣವನ್ನು ಬೇಧಿಸಿದ್ದು ಇನ್ನಷ್ಟು ತನಿಖೆ ಮುಂದುವರಿಸಿದ್ದಾರೆ.

    Post Views: 232

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.