Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮನೆ ನಿರ್ಮಿಸಲು ಸಹಾಯ ದೊರಕಿಸಿಕೊಡುವುದಾಗಿ ವಂಚನೆ- 2 ಲ.ರೂ. ಮೌಲ್ಯದ ಚಿನ್ನಾಭರಣ ಕಳಕೊಂಡ ಮಹಿಳೆ
    ಇತ್ತೀಚಿನ ಸುದ್ದಿ

    ಮಂಗಳೂರು: ಮನೆ ನಿರ್ಮಿಸಲು ಸಹಾಯ ದೊರಕಿಸಿಕೊಡುವುದಾಗಿ ವಂಚನೆ- 2 ಲ.ರೂ. ಮೌಲ್ಯದ ಚಿನ್ನಾಭರಣ ಕಳಕೊಂಡ ಮಹಿಳೆ

    April 9, 2023
    Share

    ಮನೆ ನಿರ್ಮಿಸಲು ಸಹಾಯ ಮಾಡ್ತೀನಿ ಅಂತಾ ಹೇಳಿ ವ್ಯಕ್ತಿಯೋರ್ವ ಮಹಿಳೆಯ ಚಿನ್ನಾಭರಣ ಪಡೆದು ವಂಚಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಆತಿಕಾ ಎಂಬುವವರನ್ನು ತೊಕ್ಕೊಟ್ಟು ರೈಲ್ವೆ ಹಳಿಯ ಬಳಿ ಭೇಟಿಯಾದ ಸುಮಾರು 50 ವರ್ಷ ಪ್ರಾಯದ ಅಪರಿಚಿತ ಗಂಡಸು ತನ್ನ ಹೆಸರು ರಶೀದ್ ಎಂಬುದಾಗಿ ಪರಿಚಯ ಮಾಡಿಕೊಂಡಿದ್ದ.

    ಬಳಿಕ ಅದೇ ದಿನ ಆತೀಕಾ ವಾಸವಿರುವ ಬಾಡಿಗೆ ಮನೆಗೆ ಬಂದಿದ್ದ ರಶೀದ್ ‘ನೀವು ಇಷ್ಟು ಬಾಡಿಗೆ ಕೊಟ್ಟು ಈ ಮನೆಯಲ್ಲಿ ಇರುತ್ತೀರಾ. ನೀವು ಬೇರೆ ಮನೆ ಮಾಡಲು ನಾನು ವ್ಯವಸ್ಥೆ ಮಾಡುತ್ತೇನೆ. ನಾಳೆ ಬಂದರ್ ಮಸೀದಿಯಲ್ಲಿ ನನಗೆ ಸಿಗಬೇಕು’ ಎನ್ನುತ್ತಾ ಎರಡು ಮೊಬೈಲ್ ಸಂಖ್ಯೆಗಳನ್ನು ನೀಡಿ ಹೋಗಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಅದರಂತೆ ಆತಿಕಾ ಈ ಮಾತನ್ನು ನಂಬಿ ಮಂಗಳೂರು ನಗರದ ಬಂದರ್ ಮಸೀದಿಗೆ ಬಂದಾಗ ಅವರನ್ನು ರಶೀದ್ ಮಧ್ಯಾಹ್ನ ಫಳ್ನೀರ್ ರಸ್ತೆಯ ಹೊಟೇಲ್‌ ವೊಂದರ ರೂಮಿಗೆ ಕರೆದುಕೊಂಡು ಹೋಗಿ ‘ಈಗ ಶೇಖ್‌ ಮತ್ತು ಶೇಖ್ ನ ಹೆಂಡತಿ ಬರುತ್ತಾರೆ. ನಿನ್ನ ಮೈಮೇಲಿರುವ ಚಿನ್ನಾಭರಣ ನೋಡಿದರೆ ಅವರು ಸಹಾಯ ಮಾಡುವುದಿಲ್ಲ. ಅದನ್ನು ನನ್ನ ಬಳಿ ಇಟ್ಟುಕೊಳ್ಳುತ್ತೇನೆ’ ಎಂದಿದ್ದ ಎನ್ನಲಾಗಿದೆ.

    ಅದರಂತೆ ಆತಿಕಾ ತನ್ನ ಮೈಮೇಲಿದ್ದ ಚಿನ್ನದ ಕಿವಿಯೋಲೆ, ಉಂಗುರ, ಬಳೆ ಇತ್ಯಾದಿಗಳನ್ನು ನೀಡಿದ ಬಳಿಕ ಅಲ್ಲಿಂದ ಮತ್ತೊಂದು ಹೊಟೇಲ್‌ ಗೆ ಕರೆದುಕೊಂಡು ಹೋಗಿ ಕುಳ್ಳಿರಿಸಿ ಶೇಖ್‌ ಮತ್ತು ಶೇಖ್ ನ ಪತ್ನಿಯನ್ನು ಕರೆದುಕೊಂಡು ಬರುವುದಾಗಿ ಹೇಳಿ ಹೊರಗೆ ಹೋದ ರಶೀದ್ ಎಂಬ ಹೆಸರಿನ ವ್ಯಕ್ತಿ ವಾಪಸ್ ಬಂದಿಲ್ಲ. ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಪಡೆದು ವಂಚಿಸಿರುವುದಾಗಿ ಆತಿಕಾ ಬಂದರ್ ಠಾಣೆಗೆ ನೀಡಿದ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

    Post Views: 209

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.