Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಬಸ್‌ ನಲ್ಲಿ ಫ್ರೀ, ಯಾವುದೇ ಕಂಡೀಶನ್ ಇಲ್ಲ: ಸಾರಿಗೆ ಸಚಿವ ರೆಡ್ಡಿ
    ಇತ್ತೀಚಿನ ಸುದ್ದಿ

    ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಬಸ್‌ ನಲ್ಲಿ ಫ್ರೀ, ಯಾವುದೇ ಕಂಡೀಶನ್ ಇಲ್ಲ: ಸಾರಿಗೆ ಸಚಿವ ರೆಡ್ಡಿ

    May 30, 2023
    Share

    ಬೆಂಗಳೂರು: KSRTC ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡುತ್ತೇವೆ, ಬಿಪಿಎಲ್ ಕಾರ್ಡ್ ಇದ್ರೆ ಮಾತ್ರ ಅಂತ ನಾವು ಗ್ಯಾರಂಟಿಯಲ್ಲಿ ಹೇಳಿರಲಿಲ್ಲ. ಈಗಲೂ ನಾವು ಬಿಪಿಎಲ್ ಕಾರ್ಡ್ ಬೇಕು ಎಂದು ಹೇಳುವುದೇ ಇಲ್ಲ ಎಂದಿದ್ದಾರೆ. ಹೀಗಾಗಿ ಎಲ್ಲಾ ಮಹಿಳೆಯರಿಗೂ ಬಸ್‌ನಲ್ಲಿ ಉಚಿತ ಪ್ರಯಾಣವಿದ್ದು, ಇದಕ್ಕೆ ಯಾವುದೇ ಷರತ್ತುಗಳಿಲ್ಲ ಎಂದಿದ್ದಾರೆ.

    ಮುಖ್ಯಮಂತ್ರಿಗಳ ಎಲ್ಲ ಕಾರ್ಯದರ್ಶಿಗಳು ಹಾಗೂ ಎಂಡಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ಎಲ್ಲ ನಿಗಮಗಳು ಒಂದಷ್ಟು ಗೈಡ್ಲೈನ್ಸ್ ನೀಡಿದ್ದಾರೆ. ಅವೆಲ್ಲವನ್ನೂ ಸಚಿವ ಸಂಪುಟದಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳುತ್ತೇವೆ. ನಾಳೆ ಸಿಎಂ ಜೊತೆ ಸಭೆ ಇದೆ ನಂತ್ರ ಹೇಳುತ್ತೇವೆ ಎಂದಿದ್ದಾರೆ. 

    ನಾಲ್ಕು ನಿಗಮಗಳಲ್ಲಿ ನೌಕರರ ಸಂಖ್ಯೆ ಕಡಿಮೆ ಇದೆ. ನೇಮಕಾತಿ ಮಾಡಿಕೊಳ್ಳಬೇಕು. ಬಸ್ಸುಗಳ ಸಂಖ್ಯೆ ಕೂಡ ತುಂಬಾ ಕಡಿಮೆ ಇದೆ ಅದನ್ನು ಹೆಚ್ಚಳ ಮಾಡಬೇಕು. ಇಲ್ಲಾಂದ್ರೆ ಕಾಂಗ್ರೆಸ್ ಶಕ್ತಿ ಯೋಜನೆ ಜಾರಿ ಮಾಡಲು ಕಷ್ಟ ಆಗುತ್ತದೆ ಎಂದು  ಸಾರಿಗೆ ಸಚಿವ ರಾಮಲಿಂಗರೆಡ್ಡಿಗೆ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಮಹಿಳೆಯರಿಗೆ ಉಚಿತ ಬಸ್ ಸೇವೆ ವಿಚಾರವಾಗಿ, ಪ್ರತಿ ವರ್ಷ ಅಂದಾಜು 3200 ಕೋಟಿ ಹಣ ಬೇಕಾಗುತ್ತದೆ. ನಾಲ್ಕು ನಿಗಮ ನಷ್ಟದಲ್ಲಿರುವ ಹಿನ್ನೆಲೆ ಸರ್ಕಾರ ಸಹಾಯಧನ ನೀಡಿದ್ರೆ ಯೋಜನೆ ಜಾರಿಗೆ ಅನುಕೂಲವಾಗುತ್ತೆ. ಸರ್ಕಾರ ಹಣ ನೀಡದಿದ್ರೆ ನಿಗಮಗಳು ಇನ್ನಷ್ಟು ಸಾಲದ ಸುಳಿಯಲ್ಲಿ ಸಿಲುಕುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

    ಆರ್ಥಿಕ ಪರಿಸ್ಥಿತಿ, ಕೋವಿಡ್ ವೇಳೆ ಆಗಿರುವ ನಷ್ಟ.ಕೋವಿಡ್ ವೇಳೆ ನೌಕರರ ನೇಮಕ್ಕೆ ತಡೆಯಾಗಿತ್ತು. ಹೊಸ ಬಸ್ ಗಳ ಸಂಚಾರಕ್ಕೆ ಎಲ್ಲೆಲ್ಲ ತೊಂದರೆ ಇದೆ. ಎಲ್ಲ ಮಾಹಿತಿಯನ್ನ ತೆಗೆದುಕೊಳ್ಳಲಾಗಿದೆ. ಹೊಸ ಬಸ್ ಗಳನ್ನ ಎಲ್ಲ ನಿಗಮಗಳಿಗೆ ಸೇರ್ಪಡೆ ಮಾಡುತ್ತೇವೆ. ಪ್ರಯಾಣಿಕ 82 ಲಕ್ಷದ 51 ಸಾವಿರ ಜನ ಪ್ರಯಾಣಿಸುತ್ತಾರೆ. ತಿಂಗಳಿಗೆ 24. ಕೋಟಿ ಜನ ಓಡಾಟ ನಡೆಸುತ್ತಾರೆ ಎಂದು ರೆಡ್ಡಿ ಹೇಳಿದ್ದಾರೆ.

    Post Views: 285

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.