Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»`ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆ- ಶುಭ ಹಾರೈಸಿದ ಸ್ಪೀಕರ್ ಯು.ಟಿ ಖಾದರ್
    ಇತ್ತೀಚಿನ ಸುದ್ದಿ

    `ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆ- ಶುಭ ಹಾರೈಸಿದ ಸ್ಪೀಕರ್ ಯು.ಟಿ ಖಾದರ್

    May 22, 2026
    Share

    ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿದೆ.


    ಭಾರತ್ ಸಿನಿಮಾಸ್ ನಲ್ಲಿ ಸಿನಿಮಾದ ಬಿಡುಗಡೆ ಸಮಾರಂಭ ಜರಗಿತು. ಅತಿಥಿಗಳು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
    ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು.


    ಹಿರಿಯ ನಿರ್ದೇಶಕ ವಿಜಯಕುಮಾರ್ ಕೊಡಿಯಲ್ ಬೈಲ್ ಮಾತನಾಡಿ ತುಳು ಸಿನಿಮಾ ರಂಗದಲ್ಲಿ ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ ಕಿರಿಯರು, ಹೊಸಬರು ಸಿನಿಮಾರಂಗದಲ್ಲಿ ಮಿಂಚುತ್ತಿದ್ದಾರೆ. ಯುವ ಪ್ರತಿಭಾವಂತರು ಸಿನಿಮಾರಂಗದಲ್ಲಿ ಬೌಂಡರಿ, ಸಿಕ್ಸರ್ ಬಾರಿಸುವ ಮೂಲಕ ಚೆನ್ನಾಗಿ ಆಡಲಿ ಎಂದರು.


    ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ ಗಜಾನನ ಕ್ರಿಕೆಟರ್ಸ್ ಸಿನಿಮಾದ ಪ್ರೀಮಿಯರ್ ಶೋಗಳನ್ನು ಪ್ರೇಕ್ಷಕರು ನೋಡಿ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ನಿರ್ಮಾಪಕ ಪ್ರಜ್ವಲ್ ಶೆಟ್ಟಿ, ರೋಹನ್ ಪಿರೇರ, ಸಂತೋಷ್ ಲಾಡ್ ಕಷ್ಟಪಟ್ಟು ಸಿನಿಮಾ ಮಾಡಿದ್ದಾರೆ. ಸಿನಿಮಾವನ್ನು ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದರು.
    ಉದ್ಯಮಿ ಮೈಕಲ್ ಡಿ ಸೋಜ ಶುಭ ಹಾರೈಸಿದರು.
    ಸಮಾರಂಭದಲ್ಲಿ ಕಲಾ ನಿರ್ದೇಶಕ ತಮ್ಮಲಕ್ಷ್ಮಣ, ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಯೊಗೀಶ್ ಶೆಟ್ಟಿ ಜಪ್ಪು, ತೋನ್ಸೆ ಪುಷ್ಕಳ್ ಕುಮಾರ್, ಭೋಜರಾಜ್ ವಾಮಂಜೂರು, ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಪ್ರಸನ್ನ ಶೆಟ್ಟಿ ಬೈಲೂರು, ಲಂಚುಲಾಲ್, ನವೀನ್ ಶೆಟ್ಟಿ ಆರ್ಯನ್, ದಯಾನಂದ ಹೆಜಮಾಡಿ, ನವೀನ್ ಶೆಟ್ಟಿ ಎಡ್ಮೆಮಾರ್, ವಿನೀತ್ ಕುನಾರ್, ನಿರ್ದೇಶಕ ಕೀರ್ತನ್ ಭಂಡಾರಿ, ನಿರ್ಮಾಪಕರಾದ ಪ್ರಜ್ವಲ್ ಶೆಟ್ಟಿ, ಸಹನಿರ್ಮಾಪಕರಾದ ರೋಹನ್ ಪಿರೇರಾ, ಸಂತೋಷ್ ಲಾಡ್, ಶೈಲಶ್ರಿ ಮುಲ್ಕಿ, ರೂಪ ವರ್ಕಾಡಿ, ಅನ್ವಿತಾ ಸಾಗರ, ಸಮತಾ ಅಮೀನ್, ಸಂಗೀತ ನಿರ್ದೇಶಕ ಸೃಜನ್ ಕುಮಾರ್ ತೋನ್ಸೆ, ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ‌ ನಿರ್ವಹಿಸಿದರು.

    ಗಜಾನನ ಕ್ರಿಜೆಟಸ್೯ ತುಳು ಸಿನಿಮಾ ಮಂಗಳೂರು, ಸುರತ್ಕಲ್, ಪಡುಬಿದ್ರೆ, ಉಡುಪಿ, ಕುಂದಾಪುರ, ಮಣಿಪಾಲ ಕಾರ್ಕಳ, ಪುತ್ತೂರು, ಬೆಳ್ತಂಗಡಿ, ದೇರಳಕಟ್ಟೆ ಮೊದಲಾದ ಕಡೆಗಳಲ್ಲಿ ಬಿಡುಗಡೆಗೊಂಡಿದೆ.
    ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ ಹೊಂದಿದೆ. ಚಿತ್ರದಲ್ಲಿ ಹಾಸ್ಯ, ಪ್ರೇಮಪೂರಿತ ಭಾವನೆಗಳು ಮತ್ತು ಸಮಾಜಮುಖಿ ಸಂದೇಶವಿರುವ ಬಿಗು ಕತೆ ಒಳಗೊಂಡಿದೆ.

    ಕೀರ್ತನ್ ಭಂಡಾರಿ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ನಿರ್ಮಾಪಕ ಪ್ರಜ್ವಲ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
    ಚಿತ್ರದ ತಾರಾಗಣದಲ್ಲಿ ವಿನೀತ್ ಕುಮಾರ್, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಾಜೆ, ಪ್ರಕಾಶ್ ತುಮಿನಾಡು, ಉಮೇಶ್ ಮಿಜಾರು, ಅನ್ವಿತಾ ಸಾಗರ್, ಸಮತಾ ಅಮೀನ್, ಸರ್ವೋತ್ತಮ ಶೆಟ್ಟಿ ಅಬುದಾಭಿ, ವಾಲ್ಟರ್ ನಂದಳಿಕೆ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಪುಷ್ಪರಾಜ್ ಬೊಳ್ಳಾರು, ರೂಪ ವರ್ಕಾಡಿ, ಲಂಚುಲಾಲ್, ಸಚಿನ್ ಮಾಡ, ಜೇಮ್ಸ್ ಮೆಂಡೋನ್ಸಾ, ಕರಣ್ ಪೂಜಾರಿ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.

    Post Views: 122

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.