Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»“ಗಜಾನನ ಕ್ರಿಕೆಟರ್ಸ್ ” ಚಿತ್ರೀಕರಣ ಮೇ 18ರಿಂದ ಶುರು!
    ಇತ್ತೀಚಿನ ಸುದ್ದಿ

    “ಗಜಾನನ ಕ್ರಿಕೆಟರ್ಸ್ ” ಚಿತ್ರೀಕರಣ ಮೇ 18ರಿಂದ ಶುರು!

    May 16, 2023
    Share

    ಮಂಗಳೂರು: ಪ್ರಜ್ವಲ್ ಫಿಲಂಸ್ ನಿರ್ಮಾಣದ ಕೀರ್ತನ್ ಭಂಡಾರಿ ರಚಿಸಿ ನಿರ್ದೇಶಿಸುತ್ತಿರುವ “ಗಜಾನನ ಕ್ರಿಕೆಟರ್ಸ್” ತುಳು ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಸೋಮವಾರ ಸಂಜೆ ಲಾಲ್ ಭಾಗ್ ನಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ನಡೆಯಿತು. “ಚಿತ್ರರಂಗದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಅಂಡರ್ ಆರ್ಮ್ ಕ್ರಿಕೆಟ್ ಜಗತ್ತನ್ನು ತೆರೆದಿಡುವಂತಹ ಪ್ರಯತ್ನವನ್ನು ಈ ಚಿತ್ರತಂಡ ಮಾಡುತ್ತಿದ್ದು ಚಿತ್ರವು ಹಾಸ್ಯಮಯ ಕಥಾಹಂದರವನ್ನು ಹೊಂದಿದ್ದು ಕುಟುಂಬ ಸಮೇತ ನೋಡುವಂತಹ ಚಿತ್ರ ಇದಾಗಿರುತ್ತದೆ, ಕ್ರಿಕೆಟ್ ಪ್ರೇಮಿಗಳಿಗೆ ಮನೋರಂಜನೆ ನೀಡುವಂತಹ ಹಲವಾರು ಸನ್ನಿವೇಶಗಳು ಚಿತ್ರದಲ್ಲಿದೆ ಎಂದು ಹಾಗೂ ಚಿತ್ರದ ಚಿತ್ರೀಕರಣವು ಮೇ 18ರಿಂದ ಮಂಗಳೂರಿನಾದ್ಯಂತ ನಡೆಯಲಿದ್ದು ಅತೀ ಶೀಘ್ರದಲ್ಲಿ ಬೆಳ್ಳಿತರೆಗೆ ಬರಲಿದೆ. ನಾನು ಚಿತ್ರದ ಕಥೆಯನ್ನು ಒಪ್ಪಿಕೊಂಡು ಅದರ ಭಾಗವಾಗಿದ್ದೇನೆ” ಎಂದು ತುಳು ರಂಗಭೂಮಿಯ ಹಿರಿಯ ನಟ ಭೋಜರಾಜ್ ವಾಮಂಜೂರ್ ಹೇಳಿದರು. “ಚಿತ್ರದ ನಾಯಕ ನಟನಾಗಿ ವಿನೀತ್ ಕುಮಾರ್ ನಟಿಸುತ್ತಿದ್ದು ಇವರಿಗೆ ನಾಯಕಿಯರಾಗಿ ಅನ್ವಿತಾ ಸಾಗರ್ ಹಾಗೂ ಸಮತ ಅಮೀನ್ ಜೊತೆಯಾಗಲಿದ್ದಾರೆ, ತಾರಾಗಣದಲ್ಲಿ ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ ವಾಮಂಜೂರು, ಪ್ರಕಾಶ್ ತುಮಿನಾಡು, ದೀಪಕ್ ರೈ, ಉಮೇಶ್ ಮಿಜಾರ್, ಸಂದೀಪ್ ಶೆಟ್ಟಿ ಮಾಣಿಬೆಟ್ಟು ಕಾಣಿಸಿಕೊಳ್ಳಲಿದ್ದಾರೆ, ಪ್ರಸನ್ನ ಶೆಟ್ಟಿ ಬೈಲೂರು ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ, ಮಾಡಲಿಂಗ್ ಕ್ಷೇತ್ರದಲ್ಲಿ ಖ್ಯಾತಿ ಪಡೆದಿರುವ 2018ರ ಮಿಸ್ಟರ್ ದುಬೈ ಕಿರೀಟ ಮುಡಿಗೇರಿಸಿಕೊಂಡಿರುವ ಪ್ರಜ್ವಲ್ ಶೆಟ್ಟಿ ಅವರು ಮೊಟ್ಟ ಮೊದಲ ಬಾರಿಗೆ ಖಳನಾಯಕರಾಗಿ ಚಿತ್ರದಲ್ಲಿ ಬಣ್ಣಹಚ್ಚಲಿದ್ದಾರೆ” ಎಂದು ಚಿತ್ರ ನಿರ್ದೇಶಕ ಕೀರ್ತನ್ ಭಂಡಾರಿ ಮಾಹಿತಿ ನೀಡಿದರು. ಚಾರ್ಲಿ 777, ಒಂದು ಮೊಟ್ಟೆಯ ಕಥೆ, ಗಿರಿ ಗಿಟ್ ಹಾಗೂ ಹಲವಾರು ಕನ್ನಡ ಮತ್ತು ತುಳು ಚಿತ್ರಗಳಿಗೆ ಸಾಹಿತ್ಯ ಬರೆದಿರುವ ಕೀರ್ತನ್ ಭಂಡಾರಿ ಅವರು ಮೊದಲ ಬಾರಿಗೆ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ, ಚಿತ್ರದಲ್ಲಿ 5 ಹಾಡುಗಳಿದ್ದು ಸೃಜನ್ ಕುಮಾರ್ ತೋನ್ಸೆ ಸಂಗೀತ ಸಂಯೋಜನೆ ಮಾಡುತ್ತಿದ್ದು ಚಿತ್ರಕ್ಕೆ ನಿರಂಜನ್ ದಾಸ್ ಛಾಯಾಗ್ರಹಣ ಇರಲಿದೆ.

    Post Views: 201

    Related Posts

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.