Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಗಾಂಜಾ ಮಾರಾಟ ಆರೋಪ: ಇಬ್ಬರ ಬಂಧನ, ಒಬ್ಬ ಪರಾರಿ
    ಇತ್ತೀಚಿನ ಸುದ್ದಿ

    ಮಂಗಳೂರು: ಗಾಂಜಾ ಮಾರಾಟ ಆರೋಪ: ಇಬ್ಬರ ಬಂಧನ, ಒಬ್ಬ ಪರಾರಿ

    March 13, 2026
    Share

    ಮಂಗಳೂರು: ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿ ಮಾದಕ ವಸ್ತು ಮತ್ತು ಇತರೆ ಸೊತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಉಳ್ಳಾಲ ಪೊಲೀಸರು ಯಶಸ್ವಿಯಾಗಿದ್ದಾರೆ.

    ಪ್ರಕರಣದ ವಿವರ: ದಿನಾಂಕ 12-03-2026 ರಂದು ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡಕ್ಕೆ ಉಳ್ಳಾಲ ತಾಲೂಕು ಕೋಟೆಕಾರ್ ಗ್ರಾಮದ ಬಗಂಬಿಲ ಸಮೀಪದ ಗೌಂಡ್ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಕೇರಳ ರಾಜ್ಯದ ಮಂಜೇಶ್ವರದ ಅಲ್ತಾಫ್, ಉಪ್ಪಳದ ಶೇಕ್ ಅರ್ಬಾಜ್ ಹಾಗೂ ರಶೀದ್ ಆಲ್ವಿನ್ ಎಂಬವರುಗಳು ಮಾದಕ ವಸ್ತು ಗಾಂಜಾವನ್ನು ತಂದು ತಮ್ಮ ಗಿರಾಕಿಗಳಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಹಣಕ್ಕಾಗಿ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ಲಭಿಸಿತು.

    ಮಾಹಿತಿ ಮೇರೆಗೆ ಪೊಲೀಸರು ಪಂಚರ ಸಮ್ಮುಖದಲ್ಲಿ ಸ್ಥಳಕ್ಕೆ ಧಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡರು. ಆರೋಪಿಗಳಿಂದ ಒಟ್ಟು ರೂ.51,500 ಮೌಲ್ಯದ ನಿಷೇಧಿತ ಮಾದಕ ವಸ್ತುವಾದ 1 ಕೆಜಿ 110 ಗ್ರಾಂ ತೂಕದ ಗಾಂಜಾ, ರೂ.520 ನಗದು, ಒಂದು ರೆಡ್‌ಮಿ ಮೊಬೈಲ್ ಫೋನ್, ಒಂದು ವಿವೋ ಮೊಬೈಲ್ ಫೋನ್ ಸೇರಿದಂತೆ ಇತರೆ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಧಾಳಿ ವೇಳೆ ಆರೋಪಿ ಅಲ್ತಾಫ್ ಎಂಬಾತನು ಸ್ಕೂಟರ್ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ.49/2026ರಡಿ ಕಲಂ 8(c), 20(b) ಎನ್.ಡಿ.ಪಿ.ಎಸ್ ಕಾಯ್ದೆ 1985ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

    Post Views: 198

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.