Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಗಾಂಜಾ ದಂಧೆ- 10 ಮಂದಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು : ಗಾಂಜಾ ದಂಧೆ- 10 ಮಂದಿಯ ಬಂಧನ

    January 11, 2023
    Share

    ಮಂಗಳೂರು : ಅತ್ಯಂತ ಅಘಾತಕಾರಿ ಘಟನೆಯೊಂದರಲ್ಲಿ ನಗರದಲ್ಲಿ ನಡೆಯುತ್ತಿದ್ದ ಗಾಂಜಾ ದಂಧೆ ಪ್ರಕರಣದಲ್ಲಿ ಹತ್ತು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಒಂಬತ್ತು ಮಂದಿ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದಾರೆ ಎನ್ನುವ ವಿಚಾರ ಕಳವಳಕಾರಿಯಾಗಿದೆ.

    ಬಂಧನದ ಕುರಿತು ನಗರ ಪೊಲೀಸ್ ಕಮಿಷನರ್ ಎನ್ . ಶಶಿಕುಮಾರ್ ಅವರು ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ್ದು, ದೂರಿನ ಆಧಾರದ ಮೇಲೆ ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ಎಂಬಾತನನ್ನು ಮೊದಲು ಬಂಧಿಸಲಾಗಿದೆ. ಈತ ಯುಕೆಯ ಪ್ರಜೆಯಾಗಿದ್ದು, ಎನ್ ಆರ್ ಐ ಕೋಟಾದಲ್ಲಿ ಡೆಂಟಲ್ ವಿದ್ಯಾರ್ಥಿಯಾಗಿದ್ದು ಕಳೆದ ಹದಿನೈದು ವರ್ಷಗಳಿಂದಲೂ ವಿದ್ಯಾಭ್ಯಾಸ ಮಾಡುತ್ತಿದ್ದು,ಆತನಿಗೆ ಶಿಕ್ಷಣ ಇನ್ನೂ ಪೂರ್ಣ ಗೊಳಿಸಲು ಸಾಧ್ಯವಾಗಿಲ್ಲ. ಗಾಂಜಾ ಪೆಡ್ಲರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿಸಿದ್ದಾರೆ.

    ನೀಲ್ ಕಿಶೋರಿಲಾಲ್ ವಿದ್ಯಾರ್ಥಿನಿಯರು ಮತ್ತು ವೈದ್ಯರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದು, ಸಾಕಷ್ಟು ಪೂರಕ ಸಾಕ್ಷಧಾರಗಳಿಂದ ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

    ಬಂಧಿತ ಆರೋಪಿಗಳು,ಕೇರಳ ಮೂಲದ ಡಾ ಸಮೀರ್ (32), ಡಾ. ನಾಡಿಯಾ ಸಿರಾಜ್ (24), ತಮಿಳುನಾಡಿನ ಡಾ ಮಣಿಮಾರನ್ ಮುತ್ತು (28), ಆಂಧ್ರದ ಡಾ ವರ್ಷಿಣಿ ಪ್ರತಿ (26),ಚಂಡಿಘಡ,ಪಂಜಾಬ್ ನ ಡಾ ಭಾನು ಧಾಹಿಯಾ (27), ಚಂಡಿಘಡದ ಡಾ ರಿಯಾ ಚಡ್ಡಾ (22), ದೆಹಲಿಯ ಡಾ. ಕ್ಷಿತಿಜ್ ಗುಪ್ತಾ (25), ಮಹಾರಾಷ್ಟ್ರದ ಡಾ ಇರಾ ಬಸಿನ್ (23) ಮತ್ತು ಬಂಟ್ವಾಳ ಮಾರಿಪಳ್ಳದ ಮೊಹಮ್ಮದ್ ರೌಫ್ ಗೌಸ್ (34) ಎಂದು ಪೊಲೀಸರು ವಿವರಗಳನ್ನು ನೀಡಿದ್ದಾರೆ.

    ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ನೀಲ್ ಕಿಶೋರಿಲಾಲ್ ರಾಮ್ ಜಿ ಶಾನನ್ನ ಮೊದಲು ಬಂಧಿಸಲಾಗಿದೆ. ಆತನ ಬಳಿ 50 ಸಾವಿರ ಮೌಲ್ಯದ 2 ಕೆಜಿ ಗಾಂಜಾ, ಮೊಬೈಲ್ ಮತ್ತು ನಗದನ್ನು ಮತ್ತು ಆಟಿಕೆ ಪಿಸ್ತೂಲನ್ನು ವಶಕ್ಕೆ ಪಡೆಯಲಾಗಿದೆ. ಆ ಬಳಿಕ ಕಾರ್ಯಾಚರಣೆ ನಡೆಸಿ ಉಳಿಸವರನ್ನು ಪಿಜಿಗಳು, ಹಾಸ್ಟೆಲ್ ಮತ್ತು ಬಾಡಿಗೆ ಮನೆಗಳಿಂದ ಬಂಧಿಸಲಾಗಿದೆ.

    ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

    Post Views: 195

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.