Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ಳಾರೆ:  ತೋಟದ ಕೆರೆಯ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತ್ಯು
    ಇತ್ತೀಚಿನ ಸುದ್ದಿ

    ಬೆಳ್ಳಾರೆ:  ತೋಟದ ಕೆರೆಯ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತ್ಯು

    April 28, 2023
    Share

    ಸವಣೂರು: ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಿಂದ ವರದಿಯಾಗಿದೆ.

    ಮೃತಪಟ್ಟ ಯುವಕನನ್ನು ಪಾಲ್ತಾಡಿ ಗ್ರಾಮದ ಕಾಪುತಮೂಲೆ ನಿವಾಸಿ ಮೋನಪ್ಪ ನಾಯ್ಕ ಎಂಬವರ ಪುತ್ರ ಗೋಪಾಲಕೃಷ್ಣ ಕೆ.(34 ವ.) ಎಂದು ಗುರುತಿಸಲಾಗಿದೆ.

    ಗೋಪಾಲಕೃಷ್ಣ ಅವರು ಪಾಲ್ತಾಡಿ ಗ್ರಾಮದ ಕಾಪುತಮೂಲೆ ಎಂಬಲ್ಲಿರುವ ತೋಟದ ಕೆರೆಯಲ್ಲಿರುವ ಪಾಚಿಯನ್ನು ತೆಗೆಯಲು ಒಬ್ಬನೇ ತೆರಳಿದವನು ವಾಪಾಸು ಬಾರದೇ ಇದ್ದುದರಿಂದ ಮನೆಯವರು ಕೆರೆಯ ಬಳಿ ಹೋಗಿ ನೋಡಿದಾಗ ಗೋಪಾಲಕೃಷ್ಣನ ಚಪ್ಪಲಿ ಕೆರೆಯ ನೀರಿನಲ್ಲಿ ತೇಲುತ್ತಿದ್ದುರಿಂದ ಸಂಶಯಗೊಂಡು ಮರದ ದೋಂಟಿಯೊಂದನ್ನು ಕೆರೆಯ ನೀರಿಗೆ ಹಾಕಿ ನೋಡಿದಾಗ ಗೋಪಾಲಕೃಷ್ಣನ ಅಂಗಿ ದೋಂಟಿಯ ಕೊಕ್ಕೆ ಸಿಕ್ಕಿಕೊಂಡಿದ್ದು, ದೂರುದಾರ ಮೃತರ ತಂದೆ ಮೋನಪ್ಪ ನಾಯ್ಕ ಅವರು ಕೂಡಲೇ ಅಣ್ಣ ಶೇಷಪ್ಪ ನಾಯ್ಕ ಮತ್ತು ಅವರ ಮಗ ಸುಬ್ರಾಯ ನಾಯ್ಕರವರನ್ನು ಕರೆದು ಗೋಪಾಲಕೃಷ್ಣನ ದೇಹವನ್ನು ಮೇಲಕ್ಕೆತ್ತಿ ಆಟೋ ರಿಕ್ಷಾವೊಂದರಲ್ಲಿ ಕೆಯ್ಯೂರುವರೆಗೆ ತೆಗೆದುಕೊಂಡು ಬಂದು ಅಲ್ಲಿಂದ ಅಂಬ್ಯುಲೆನ್ಸ್ ವಾಹನವೊಂದರಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದಲ್ಲಿ ಅಲ್ಲಿನ ವೈದ್ಯರು ಪರೀಕ್ಷಿಸಿ ಗೋಪಾಲಕೃಷ್ಣನು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

    ತೋಟದ ಕೆರೆಯಲ್ಲಿರುವ ಪಾಚಿಯನ್ನು ತೆಗೆಯಲು ಹೋದ ಪಿರ್ಯಾದಿದಾರರ ಗೋಪಾಲಕೃಷ್ಣ ಅವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಯ ನೀರಿಗೆ ಬಿದ್ದು ಈಜು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಮೃತ ಗೋಪಾಲಕೃಷ್ಣ ಅವರು ಪಡುಬಿದ್ರೆಯ ಅದಾನಿ ಪವರ್ ಲಿಮಿಟೆಡ್ ಯಪಿಎಸ್‌ಎಲ್ ಇಲ್ಲಿ ಇಲೆಕ್ಟ್ರಿಕಲ್ ಮೆಂಟೈನೆನ್ಸ್ ಟೆಕ್ನಿಶಿಯನ್ ಆಗಿ ಕೆಲಸ ಮಾಡುತ್ತಿದ್ದು,ವಾರದ ರಜಾದಿನವಾದ ಗುರುವಾರದಂದು ಮನೆಯಲ್ಲಿ ಇದ್ದ ವೇಳೆ ಕೆರೆಯ ಪಾಚಿ ತೆಗೆಯಲು ಹೋಗಿದ್ದರು.ಈ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟರು.

    Post Views: 233

    Related Posts

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.