Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಲಕ್ಷಾಂತರ ಸಿಸಿ ಕೆಮರಾಗಳ ಜಿಯೋ ಟ್ಯಾಗಿಂಗ್‌; ಅಪರಾಧ ಪತ್ತೆ, ತನಿಖೆಗೆ ಅನುಕೂಲ
    ಇತ್ತೀಚಿನ ಸುದ್ದಿ

    ಲಕ್ಷಾಂತರ ಸಿಸಿ ಕೆಮರಾಗಳ ಜಿಯೋ ಟ್ಯಾಗಿಂಗ್‌; ಅಪರಾಧ ಪತ್ತೆ, ತನಿಖೆಗೆ ಅನುಕೂಲ

    December 29, 2022
    Share

    ಮಂಗಳೂರು: ತಂತ್ರಜ್ಞಾನವನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಂಡು ಅಪರಾಧ ಪತ್ತೆ, ನಿಯಂತ್ರಣ ಮತ್ತು ತ್ವರಿತ ತನಿಖೆಗೆ ಮುಂದಾಗಿರುವ ಪೊಲೀಸ್‌ ಇಲಾಖೆ ರಾಜ್ಯಾದ್ಯಂತ ಲಕ್ಷಾಂತರ ಸಿಸಿ ಕೆಮರಾಗಳನ್ನು ಜಿಯೋ ಟ್ಯಾಗಿಂಗ್‌ ಮಾಡಿಕೊಳ್ಳುತ್ತಿದೆ.

    ಸಾರ್ವಜನಿಕ ಸುರಕ್ಷೆ ಕಾಯಿದೆ ಯಡಿ ದಿನಕ್ಕೆ 500ಕ್ಕಿಂತ ಹೆಚ್ಚು ಬಾರಿ ಜನರ ಓಡಾಟವಿರುವ ಅಥವಾ ಒಂದೇ ಬಾರಿಗೆ 100 ಮಂದಿಯ ಓಡಾಟವಿರುವ ಕಟ್ಟಡ/ಮಳಿಗೆಗಳಲ್ಲಿ ಸಿಸಿ ಕೆಮರಾ ಕಡ್ಡಾಯಗೊಳಿಸಲಾಗಿದ್ದು ಈ ರೀತಿ ಅಳವಡಿಕೆಯಾಗಿರುವ, ಸಾರ್ವಜನಿಕ ಸ್ಥಳದ ಪಕ್ಕ ಇರುವ ಕೆಮರಾಗಳನ್ನು ಜಿಯೋ ಟ್ಯಾಗಿಂಗ್‌ಗೆ ಒಳಪಡಿಸಲಾಗುತ್ತಿದೆ.

    ಏನಿದು ಜಿಯೋ ಟ್ಯಾಗಿಂಗ್‌?
    ಜಿಯೋ ಟ್ಯಾಗಿಂಗ್‌ ಎಂಬುದು ಪೊಲೀಸ್‌ ಇಲಾಖೆಯ ಆಯಪ್‌ವೊಂದರಡಿ ಕಾರ್ಯಾಚರಿಸುತ್ತದೆ. ಇದು ಜಿಐಎಸ್‌ (ಜಿಯೋಗ್ರಾಫಿಕ್‌ ಇನ್‌ಫಾರ್ಮೇಷನ್‌ ಸಿಸ್ಟಂ) ಆಗಿದ್ದು ಸಿಸಿ ಕೆಮರಾಗಳು ನಿರ್ದಿಷ್ಟವಾಗಿ ಯಾವ ಕಟ್ಟಡದ, ಯಾವ ಭಾಗದಲ್ಲಿವೆ, ಯಾವ ಕಡೆ ಮುಖ ಮಾಡಿವೆ, ಅವುಗಳ ಸ್ಟೋರೇಜ್‌ ಸಾಮರ್ಥ್ಯ ಎಷ್ಟು ಎಂಬಿತ್ಯಾದಿ ಸ್ಪಷ್ಟ ಮಾಹಿತಿಗಳು ಆಯಪ್‌ನಲ್ಲಿ ಸಂಗ್ರಹಿಸಿ ಇಡಲಾಗುತ್ತದೆ. ಯಾವುದೇ ಸ್ಥಳದಲ್ಲಿ ಏನಾದರೂ ಅಹಿತರ ಘಟನೆ ನಡೆದರೆ ಅಲ್ಲಿರುವ ಕೆಮರಾಗಳ ಮಾಹಿತಿ ಕ್ಷಣಾರ್ಧದಲ್ಲಿ ಪೊಲೀಸರಿಗೆ ಲಭ್ಯವಾಗುತ್ತದೆ. ಅಲ್ಲದೆ ಸಿಸಿ ಕೆಮರಾಗಳ ಲೊಕೇಶನ್‌, ಸ್ಥಿತಿಗತಿಯ ಬಗ್ಗೆ ಪ್ರತಿ ತಿಂಗಳು ಪೊಲೀಸರು ತಪಾಸಣೆ ಕೂಡ ನಡೆಸುತ್ತಾರೆ.

    ಮಂಗಳೂರಿನಲ್ಲಿ ಗರಿಷ್ಠ ಮ್ಯಾಪಿಂಗ್‌
    ಬೆಂಗಳೂರು ಹೊರತುಪಡಿಸಿದರೆ ಮಂಗಳೂರಿನಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಸಿಸಿ ಕೆಮರಾಗಳನ್ನು ಜಿಯೋ ಟ್ಯಾಗಿಂಗ್‌ಗೆ ಒಳಪಡಿಸಲಾಗಿದೆ. ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ 30,000ಕ್ಕೂ ಅಧಿಕ ಹಾಗೂ ದ.ಕ. ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ 2,000, ಬೆಂಗಳೂರಿನಲ್ಲಿ ವಿವಿಧ ಉಪವಿಭಾಗಗಳು ಸೇರಿದಂತೆ 1.25 ಲಕ್ಷಕ್ಕೂ ಅಧಿಕ, ಬೆಳಗಾವಿಯಲ್ಲಿ ಸುಮರು 25,000, ಕಲುºರ್ಗಿಯಲ್ಲಿ ಸುಮಾರು 12,000, ಮೈಸೂರಿನಲ್ಲಿ ಸುಮಾರು 10,000, ಹಾಸನದಲ್ಲಿ 2,400ಕ್ಕೂ ಅಧಿಕ ಸಿಸಿ ಕೆಮರಾಗಳು ಜಿಯೋ ಟ್ಯಾಗಿಂಗ್‌ನಲ್ಲಿವೆ.

    Post Views: 220

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.