Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ರೇಶನ್‌ ಅಕ್ಕಿಯಲ್ಲಿ ಗೋಲ್ ಮಾಲ್ ಶಂಕೆ-ಅವ್ಯವಹಾರ ಆರೋಪ..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ರೇಶನ್‌ ಅಕ್ಕಿಯಲ್ಲಿ ಗೋಲ್ ಮಾಲ್ ಶಂಕೆ-ಅವ್ಯವಹಾರ ಆರೋಪ..!

    August 18, 2023
    Share

    ಬಂಟ್ವಾಳ: ಬಂಟ್ವಾಳ ತಾಲೂಕಿನ‌ ಪಡಿತರ ಚೀಟಿದಾರರಿಗೆ ವಿತರಿಸಲು ಭಾರತೀಯ ಆಹಾರ ನಿಗಮದಿಂದ ಪೂರೈಕೆಯಾದ ಸುಮಾರು 40 ಲೋಡ್ ಅಂದರೆ ಅಂದಾಜು ಒಂದುವರೆ ಕೋಟಿ ರೂಪಾಯಿ ಮೌಲ್ಯದ ಅಕ್ಕಿಯ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಭಾರೀ ಅವ್ಯವಹಾರದ ಶಂಕೆ ವ್ಯಕ್ತವಾಗಿದೆ.

    ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಶಾಸಕ ರಾಜೇಶ್‌ ನಾಯ್ಕ್‌ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ ಹಾಗೂ ಇದೇ ವೇಳೆ ಮಂಗಳೂರಿನ ಸಹಾಯಕ ಆಯುಕ್ತ ಹಾಗೂ ತಾಲೂಕು ದಂಡಾಧಿಕಾರಿಯವರು ಬಂಟ್ವಾಳದ ಬಿ.ಸಿ.ರೋಡು ತಲಪಾಡಿ ಎಂಬಲ್ಲಿರುವ ಆಹಾರ ನಿಗಮದ ಗೋದಾಮಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಮಂಗಳೂರಿನಲ್ಲಿರುವ ಭಾರತೀಯ ಆಹಾರ ನಿಗಮದ ಗೋದಾಮಿನಿಂದ ಬಂಟ್ವಾಳದ ಬಿ.ಸಿ. ರೋಡ್‌ ನ ಗೋದಾಮಿಗೆ ಸರಬರಾಜು ಆಗಿರುವ ಸುಮಾರು 40 ಲೋಡ್‌ ಅಕ್ಕಿ ಕಾಣೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ.

    ಈ ಬಗ್ಗೆ ಶಾಸಕ ರಾಜೇಶ್‌ ನಾಯ್ಕ್‌ ಅವರು ಜಿಲ್ಲಾಧಿಕಾರಿಗೆ ಬರೆದ ಪತ್ರದಲ್ಲಿ ‘ಬಂಟ್ವಾಳ ತಾಲೂಕಿನ ಪಡಿತರ ಚೀಟಿದಾರರಿಗೆ ವಿತರಿಸಲು ಪೂರೈಕೆಯಾದ ಅಕ್ಕಿಗೆ ಸಂಬಂಧಿಸಿ ಅವ್ಯವಹಾರ ನಡೆಯುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ದೂರುಗಳು ಬಂದಿವೆ.

    ಹಾಗಾಗಿ ಈ ಬಗ್ಗೆ ಕೂಡಲೇ ತನಿಖೆ ನಡೆಸಬೇಕು. ಒಂದೊಮ್ಮೆ ದುರುಪಯೋಗ ಆಗಿರುವುದು ಕಂಡು ಬಂದಿದ್ದರೆ ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಕೈಗೊಳ್ಳ ಬೇಕು’ ಎಂದು ಒತ್ತಾಯಿಸಿದ್ದಾರೆ.

    ಶಾಸಕರ ದೂರಿನ ಬೆನ್ನಲ್ಲೇ ಮಂಗಳೂರಿನ ಸಹಾಯಕ ಆಯುಕ್ತರು ಬಿ.ಸಿ. ರೋಡ್‌ ನ ಗೋದಾಮಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

    ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು ‘ಪೂರೈಕೆಯಾದ ಅಕ್ಕಿ ಬಗ್ಗೆ ಲೆಕ್ಕಾಚಾರ ಮತ್ತು ಇತರ ವಿಷಯಗಳ ಸ್ಪಷ್ಟವಾದ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

    ತನಿಖೆಯ ಹಿತ ದೃಷ್ಟಿಯಿಂದ ಈಗ ಮಾಹಿತಿ ನೀಡಲು ಸಾಧ್ಯವಿಲ್ಲ.

    ತನಿಖೆ ಮುಗಿದ ಬಳಿಕ ಮಾಹಿತಿ ನೀಡಲಾಗುವುದು’ ಎಂದು ತಿಳಿಸಿದ್ದಾರೆ.

    Post Views: 215

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.