Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ರೇಶನ್‌ ಅಕ್ಕಿಯಲ್ಲಿ ಗೋಲ್ ಮಾಲ್ ಶಂಕೆ-ಅವ್ಯವಹಾರ ಆರೋಪ..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ರೇಶನ್‌ ಅಕ್ಕಿಯಲ್ಲಿ ಗೋಲ್ ಮಾಲ್ ಶಂಕೆ-ಅವ್ಯವಹಾರ ಆರೋಪ..!

    August 18, 2023
    Share

    ಬಂಟ್ವಾಳ: ಬಂಟ್ವಾಳ ತಾಲೂಕಿನ‌ ಪಡಿತರ ಚೀಟಿದಾರರಿಗೆ ವಿತರಿಸಲು ಭಾರತೀಯ ಆಹಾರ ನಿಗಮದಿಂದ ಪೂರೈಕೆಯಾದ ಸುಮಾರು 40 ಲೋಡ್ ಅಂದರೆ ಅಂದಾಜು ಒಂದುವರೆ ಕೋಟಿ ರೂಪಾಯಿ ಮೌಲ್ಯದ ಅಕ್ಕಿಯ ಲೆಕ್ಕಾಚಾರದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ಭಾರೀ ಅವ್ಯವಹಾರದ ಶಂಕೆ ವ್ಯಕ್ತವಾಗಿದೆ.

    ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಶಾಸಕ ರಾಜೇಶ್‌ ನಾಯ್ಕ್‌ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ ಹಾಗೂ ಇದೇ ವೇಳೆ ಮಂಗಳೂರಿನ ಸಹಾಯಕ ಆಯುಕ್ತ ಹಾಗೂ ತಾಲೂಕು ದಂಡಾಧಿಕಾರಿಯವರು ಬಂಟ್ವಾಳದ ಬಿ.ಸಿ.ರೋಡು ತಲಪಾಡಿ ಎಂಬಲ್ಲಿರುವ ಆಹಾರ ನಿಗಮದ ಗೋದಾಮಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಮಂಗಳೂರಿನಲ್ಲಿರುವ ಭಾರತೀಯ ಆಹಾರ ನಿಗಮದ ಗೋದಾಮಿನಿಂದ ಬಂಟ್ವಾಳದ ಬಿ.ಸಿ. ರೋಡ್‌ ನ ಗೋದಾಮಿಗೆ ಸರಬರಾಜು ಆಗಿರುವ ಸುಮಾರು 40 ಲೋಡ್‌ ಅಕ್ಕಿ ಕಾಣೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ.

    ಈ ಬಗ್ಗೆ ಶಾಸಕ ರಾಜೇಶ್‌ ನಾಯ್ಕ್‌ ಅವರು ಜಿಲ್ಲಾಧಿಕಾರಿಗೆ ಬರೆದ ಪತ್ರದಲ್ಲಿ ‘ಬಂಟ್ವಾಳ ತಾಲೂಕಿನ ಪಡಿತರ ಚೀಟಿದಾರರಿಗೆ ವಿತರಿಸಲು ಪೂರೈಕೆಯಾದ ಅಕ್ಕಿಗೆ ಸಂಬಂಧಿಸಿ ಅವ್ಯವಹಾರ ನಡೆಯುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ದೂರುಗಳು ಬಂದಿವೆ.

    ಹಾಗಾಗಿ ಈ ಬಗ್ಗೆ ಕೂಡಲೇ ತನಿಖೆ ನಡೆಸಬೇಕು. ಒಂದೊಮ್ಮೆ ದುರುಪಯೋಗ ಆಗಿರುವುದು ಕಂಡು ಬಂದಿದ್ದರೆ ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಕೈಗೊಳ್ಳ ಬೇಕು’ ಎಂದು ಒತ್ತಾಯಿಸಿದ್ದಾರೆ.

    ಶಾಸಕರ ದೂರಿನ ಬೆನ್ನಲ್ಲೇ ಮಂಗಳೂರಿನ ಸಹಾಯಕ ಆಯುಕ್ತರು ಬಿ.ಸಿ. ರೋಡ್‌ ನ ಗೋದಾಮಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

    ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು ‘ಪೂರೈಕೆಯಾದ ಅಕ್ಕಿ ಬಗ್ಗೆ ಲೆಕ್ಕಾಚಾರ ಮತ್ತು ಇತರ ವಿಷಯಗಳ ಸ್ಪಷ್ಟವಾದ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

    ತನಿಖೆಯ ಹಿತ ದೃಷ್ಟಿಯಿಂದ ಈಗ ಮಾಹಿತಿ ನೀಡಲು ಸಾಧ್ಯವಿಲ್ಲ.

    ತನಿಖೆ ಮುಗಿದ ಬಳಿಕ ಮಾಹಿತಿ ನೀಡಲಾಗುವುದು’ ಎಂದು ತಿಳಿಸಿದ್ದಾರೆ.

    Post Views: 226

    Related Posts

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.