Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬ್ಯಾನರ್‌ನಲ್ಲಿ ಗೋಡ್ಸೆ ಫೋಟೋ ಪ್ರತ್ಯಕ್ಷ , ಮತ್ತೊಂದು ವಿವಾದ..!!
    ಇತ್ತೀಚಿನ ಸುದ್ದಿ

    ಮಂಗಳೂರು: ಬ್ಯಾನರ್‌ನಲ್ಲಿ ಗೋಡ್ಸೆ ಫೋಟೋ ಪ್ರತ್ಯಕ್ಷ , ಮತ್ತೊಂದು ವಿವಾದ..!!

    August 19, 2022
    Share

    ಮಂಗಳೂರು: ರಾಜ್ಯದಲ್ಲಿ ಸಾವರ್ಕರ್ ಬ್ಯಾನರ್ ವಿವಾದ ತೀವ್ರವಾಗಿರುವ ಸಂದರ್ಭದಲ್ಲಿ ಮಂಗಳೂರಿನಲ್ಲಿ ಬ್ಯಾನರ್ ವಿವಾದ ಪ್ರತಿಧ್ವನಿಸಿದೆ. ಅಖಿಲ ಭಾರತ ಹಿಂದೂ ಮಹಾಸಭಾ ಕೃಷ್ಣ ಜನ್ಮಾಷ್ಟಮಿಗೆ ನಾಡಿನ ಜನತೆಗೆ ಶುಭಾಶಯ ಕೋರುವ ನಿಟ್ಟಿನಲ್ಲಿ ಮತ್ತೊಂದು ವಿವಾದವನ್ನು ಸೃಷ್ಟಿಸಿದೆ.

    ಬ್ಯಾನರ್‌ನಲ್ಲಿ ಸಾವರ್ಕರ್ ಫೋಟೋ ಜೊತೆಗೆ ನಾಥುರಾಮ್ ಗೋಡ್ಸೆಯ ಫೋಟೋ ಹಾಕಿರುವುದು ತೀವ್ರ ವಿವಾದವನ್ನು ಸೃಷ್ಟಿಸಿದೆ.

    ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಹೆಸರಿನಲ್ಲಿ ಬ್ಯಾನರ್ ಹಾಕಲಾಗಿದೆ. ಮಂಗಳೂರಿನ ಸುರತ್ಕಲ್, ಬೈಕಂಪಾಡಿ, ಕೂಳೂರು ಭಾಗದಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಶುಭಕೋರುವ ನೆಪದಲ್ಲಿ ಬ್ಯಾನರ್ ಹಾಕಲಾಗಿದೆ. ಈ ಬ್ಯಾನರ್‌ನಲ್ಲಿ ವಿನಾಯಕ ದಾಮೋದರ ಸಾವರ್ಕರ್ ಮತ್ತು ನಾಥುರಾಮ್ ಗೋಡ್ಸೆಯ ಫೋಟೋವನ್ನು ಹಾಕಲಾಗಿದೆ. ಅಲ್ಲದೇ ಬ್ಯಾನರ್‌ನಲ್ಲಿ “ರಾಜಕೀಯವನ್ನು ಹಿಂದುತ್ವಗೊಳಿಸಿ, ಹಿಂದೂಗಳನ್ನು ಸೈನಿಕೀಕರಣಗೊಳಿಸಿ” ಎಂಬ ಘೋಷ ವಾಕ್ಯವನ್ನು ನಮೂದಿಸಿದ್ದಾರೆ. ಬ್ಯಾನರ್‌ನಲ್ಲಿ ಹಿಂದೂ ಮಹಾಸಭಾದ ಪದಾಧಿಕಾರಿಗಳ ಫೋಟೋವನ್ನು ಕೂಡ ಹಾಕಲಾಗಿದೆ.

    ಇದೀಗ ಈ ಬ್ಯಾನರ್‌ಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಮಹಾತ್ಮ ಗಾಂಧೀಜೀ ಅವರನ್ನು ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆಯ ಫೋಟೋವನ್ನು ಹಾಕಿದ್ದು, ಉದ್ಧಟತನದ ಪರಮಾವಧಿ ಎನ್ನುವ ಮಾತುಗಳು ಎಲ್ಲೆಡೆ ಕೇಳಿಬರುತ್ತಿವೆ. ಕೂಡಲೇ ಈ ಬ್ಯಾನರ್ ಅನ್ನು ತೆರವುಗೊಳಿಸಿ. ಬ್ಯಾನರ್ ಹಾಕಿದ ಸಂಘಟನೆಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಕಾಂಗ್ರೆಸ್ ಒತ್ತಾಯಿಸಿದೆ.

    ಈ ಬ್ಯಾನರ್ ತೀವ್ರ ವಿವಾದ ಸೃಷ್ಠಿಸಿದ ಹಿನ್ನಲೆಯಲ್ಲಿ ಪೊಲೀಸರು, ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಥುರಾಮ್ ಗೋಡ್ಸೆಯ ಫೋಟೋ ಹಾಕಿರುವುದು ಮತ್ತಷ್ಟು ಸಂಘರ್ಷಕ್ಕೆ ಆಸ್ಪದ ನೀಡುವ ಹಿನ್ನೆಲೆಯಲ್ಲಿ ಬ್ಯಾನರ್ ತೆರವುಗೊಳಿಸುವಂತೆ ಅಖಿಲ ಭಾರತ ಹಿಂದೂ ಮಹಾಸಭಾಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಹಿಂದೂಮಹಾಸಭಾ ಪ್ರತಿಕ್ರಿಯೆ ನೀಡಿದ್ದು, ಹಿಂದೂಮಹಾಸಭಾವನ್ನು ಆರಂಭಗೊಳಿಸಿರುವುದು ಸಾವರ್ಕರ್. ಅವರ ಚಿಂತನೆಗಳಿಗೆ ಪ್ರಭಾವಿತರಾದವರು ನಾಥುರಾಮ್ ಗೋಡ್ಸೆ. ಈ ಹಿನ್ನೆಲೆಯಲ್ಲಿ ಫೋಟೋವನ್ನು ಬ್ಯಾನರ್‌ನಲ್ಲಿ ಹಾಕಲಾಗಿದೆ ಎಂದಿದ್ದಾರೆ.

    Post Views: 227

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.