Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು : ಮಹಿಳೆಯು ಕತ್ತಿನಲ್ಲಿದ್ದ ಚಿನ್ನದ ಆಭರಣ ಎಗರಿಸಿದ್ದ ಸರಗಳ್ಳನ 12 ವರ್ಷಗಳ ಬಳಿಕ ಬಂಧನ..
    ಇತ್ತೀಚಿನ ಸುದ್ದಿ

    ಪುತ್ತೂರು : ಮಹಿಳೆಯು ಕತ್ತಿನಲ್ಲಿದ್ದ ಚಿನ್ನದ ಆಭರಣ ಎಗರಿಸಿದ್ದ ಸರಗಳ್ಳನ 12 ವರ್ಷಗಳ ಬಳಿಕ ಬಂಧನ..

    August 3, 2024
    Share

    ಪುತ್ತೂರು : ದಶಕದ ಹಿಂದೆ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಆಭರಣವನ್ನು ಎಗರಿಸಿದ್ದ ಸರಗಳ್ಳನ( chain snatcher) ನ್ನು 12 ವರ್ಷಗಳ ಬಳಿಕ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

    2012 ನೇ ಇಸವಿಯಲ್ಲಿ ದಕ್ಷಿಣ ಕನ್ನಡದ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿತೊಟ್ಟು ಎಂಬಲ್ಲಿ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಆಭರಣವನ್ನು ಆರೋಪಿ ಎಳೆದೊಯ್ದಿದ್ದನು.

    ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಬಂಧನಕ್ಕೊಳಗಾಗಿದ್ದ ಆರೋಪಿ ಮಹ್ಮದ್ ಶಾಫಿ ಬಳಿಕ ನ್ಯಾಯಾಲಯದಲ್ಲಿನ ವಿಚಾರಣೆಗೆ ಹಾಜರಾಗದೆ ತಲೆ ಮರೆಯಿಸಿಕೊಂಡಿದ್ದ . ತಲೆ ಮರೆಯಿಸಿಕೊಂಡಿದ್ದ ಮಹಮ್ಮದ್ ಶಾಫಿಯನ್ನು 12 ವರ್ಷಗಳ ಬಳಿಕ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸುರತ್ಕಲ್ ಬೊಕ್ಕಬೆಟ್ಟು ಗ್ರಾಮದ ಕೃಷ್ಣಾಪುರ 8 ನೇ ಬ್ಲಾಕ್ ನಿವಾಸಿಯಾಗಿರುವ ಆರೋಪಿ ಮಹಮ್ಮದ್ ಶಾಫಿ 12 ವರ್ಷಗಳ ಹಿಂದೆ ಗೋಳಿತೊಟ್ಟು ಎಂಬಲ್ಲಿ ಬೈಕಿನಲ್ಲಿ ಬಂದು ಪಾದಾಚಾರಿ ಮಹಿಳೆಯ ಚಿನ್ನಾಭರಣವನ್ನು ಎಳೆದೊಯ್ದಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಬಂಧನಕ್ಕೊಳಗಾಗಿದ್ದ ಈತ ಬಳಿಕ ನ್ಯಾಯಾಲಯದಲ್ಲಿನ ವಿಚಾರಣೆಗೆ ಹಾಜರಾಗದೆ ತಲೆ ಮರೆಯಿಸಿಕೊಂಡಿದ್ದ .

    ಆರೋಪಿಯ ಜಾಡು ಹಿಡಿದ ಪೊಲೀಸರು ಉಡುಪಿ ಜಿಲ್ಲೆಯ ಅಂಪಾರ್ ಎಂಬಲ್ಲಿ ಗುರುವಾರದಂದು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತ ಆರೋಪಿಯು ಬೆಳ್ತಂಗಡಿ, ಬಂಟ್ವಾಳ, ವಿಟ್ಲ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆಸಿದ ಅಪರಾಧ ಕೃತ್ಯಗಳಲ್ಲಿಯೂ ತಲೆ ಮರೆಯಿಸಿಕೊಂಡಿದ್ದ. ಬಂಧಿತ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈತನ ಬಗ್ಗೆ ಶೋಧ ಕಾರ್ಯಾಚರಣೆ ನಡೆಸಿದ್ದ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್. ಹಾಗೂ ಉಪ್ಪಿನಂಗಡಿ ಪೊಲೀಸ್ ಉಪ ನಿರೀಕ್ಷಕರುಗಳಾದ ಅವಿನಾಶ್ ಹೆಚ್ ಗೌಡ, ರುಕ್ಮ ನಾಯ್ಕ ರವರ ಮಾರ್ಗದರ್ಶನದಲ್ಲಿ, ಸಿಬ್ಬಂದಿಗಳಾದ ಹಿತೋಷ್ ಕುಮಾರ್, ಗಿರೀಶ್ ವಿ. ಕಾರ್ಯಾಚರಿಸಿದ್ದರು.

    Post Views: 189

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.