ಬೆಂಗಳೂರು : ಕುಡಿಯಲು ಹಣ ನೀಡದ ತಾತನನ್ನೇ ಮೊಮ್ಮಗ ಕೊಂದ ಘಟನೆ ಬೆಂಗಳೂರಿನ ಕಮ್ಮನಹಳ್ಳಿ ಸ್ಲಮ್ನಲ್ಲಿ ನಡೆದಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಕೊಲೆಯಾದ ವ್ಯಕ್ತಿಯನ್ನು ಜೋಸೆಫ್ (54) ಎಂದು ಗುರುತಿಸಲಾಗಿದೆ. ದಿನನಿತ್ಯ ಹಣಕ್ಕಾಗಿ ತಾತನೊಂದಿಗೆ ಜಗಳ ಮಾಡುತ್ತಿದ್ದ ಮೊಮ್ಮಗ ದೊಣ್ಣೆಯಿಂದ ಹಲ್ಲೆ ನಡೆಸಿ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ.
ಪ್ರಕರಣ ಸಂಬಂಧ ಆರೋಪಿ ಆಯಂಟೊನಿಯನ್ನು ಬಂಧಿಸಿರುವ ಬಾಣಸವಾಡಿ ಠಾಣಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರತಿನಿತ್ಯ ಕುಡಿದು ಬಂದು ಜಗಳವಾಡುತ್ತಿದ್ದ ಆಯಂಟೊನಿ ತಾತನೊಂದಿಗೆ ಜಗಳ ಮಾಡುತ್ತಿದ್ದನು. ತನಿಖೆ ಕೈಗೊಂಡ ಪೊಲೀಸರು ಪರಾರಿಯಾಗುತ್ತಿದ್ದ ಆಯಂಟೊನಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.