ಬೆಳ್ತಂಗಡಿ: ಪೊಲೀಸರು ನೋಟಿಸ್ ನೀಡಿದ ವಿಚಾರದಲ್ಲಿ ಶಾಸಕ ಹರೀಶ್ ಪೂಂಜ ರಾತ್ರಿ 9.30ಕ್ಕೆ ಠಾಣೆಗೆ ಹಾಜ ರಾದರು. ಬಳಿಕ ಬೆಳ್ತಂಗಡಿ ಠಾಣಾ 58/2024, ಕಲಂ: 143, 147, 341, 504, 506 ಜತೆಗೆ 149 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜರನ್ನು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಸಿ, ಸ್ಟೇಶನ್ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿರುತ್ತದೆ ಎಂದು ಠಾಣೆಯ ಮೂಲಗಳಿಂದ ತಿಳಿದು ಬಂದಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ವಿಚಾರಣೆ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ಸುನಿಲ್ ಕುಮಾರ್, ಶಾಸಕರ ಬಂಧನ ಯತ್ನ ಅತ್ಯಂತ ಖಂಡನೀಯ. ಪಾಕಿಸ್ಥಾನಕ್ಕೆ ಜಿಂದಾಬಾದ್ ಹಾಕಿದವನಿಗೆ ನೋಟಿಸ್ ನೀಡಲು 4 ದಿನ ತೆಗೆದುಕೊಂಡವರು ಓರ್ವ ಜನಪ್ರತಿನಿಧಿಯ ಬಂಧನ ಹುನ್ನಾರ ಕಂಡಾಗ ರಾಜ್ಯ ಯಾವ ಪ್ರಜಾಪ್ರಭುತ್ವದಲ್ಲಿದೆ ಎಂಬ ಪ್ರಶ್ನೆ ಮೂಡುತ್ತದೆ. ನಾವೆಲ್ಲ ಶಾಸಕರು ಈ ಪ್ರಕರಣ ತಾರ್ಕಿಕ ಹಂತ ಕಾಣುವವರೆಗೆ ನಾವು ಬಿಡುವುದಿಲ್ಲ. ನಾಳೆ ನಾಡಿದ್ದರಲ್ಲಿ ಗೃಹಸಚಿವರನ್ನು ಭೇಟಿಯಾಗಿ ಉತ್ತರ ಕೇಳುತ್ತೇವೆ.ರಾಜಕೀಯ ಹುನ್ನಾರವಾದರೆ ವಿಧಾನಸಭೆ ನಡೆಸಲು ಬಿಡುವುದಿಲ್ಲ. ಶಾಸಕರು ಸೌಜನ್ಯದಿಂದ ವರ್ತಿಸಿದರೂ ಪೊಲೀಸರು ಗೂಂಡಾ ವರ್ತನೆ ತೋರಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.