ಮಂಗಳೂರು : ಅತ್ಯಾಧುನಿಕ ಹಾಗೂ ಕೈಗೆಟುಕುವ ಆರೋಗ್ಯ ಸೇವೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದೊಂದಿಗೆ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಆರ್ವಿಆರ್ ಹೆಲ್ತ್ಕೇರ್ ಸಂಸ್ಥೆಯು ನೆರೆ ರಾಜ್ಯವಾದ ಕೇರಳದ ಕಾಸರಗೋಡಿನಲ್ಲಿ ಆರ್ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರವನ್ನು ಆರಂಭಿಸುವುದಲ್ಲದೆ ಮತ್ತು ತನ್ನ ಪ್ರಮುಖ ಸಮುದಾಯ ಆರೋಗ್ಯ ಕಾರ್ಯಕ್ರಮವಾದ ‘ಆರೋಗ್ಯ ಬೈ ಆರ್ವಿಆರ್’ ಅನ್ನು ದೇಶದಾದ್ಯಂತ ವಿಸ್ತರಿಸುವುದಾಗಿ ಘೋಷಿಸಿದೆ. ಮಂಗಳೂರು ನಗರದ ದಿ ಓಶನ್ ಪರ್ಲ್ ಹೋಟೆಲ್ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಮಹತ್ವದ ಘೋಷಣೆ ಮಾಡಲಾಯಿತು.
ಸಮಾಜಮುಖಿ ಆರೋಗ್ಯ ಸೇವೆಯ ಧ್ಯೇಯ
2026ರ ಏಪ್ರಿಲ್ 24ರಂದು ಮಂಗಳೂರಿನಲ್ಲಿ ಕಾರ್ಯಾರಂಭ ಮಾಡಿದ ಆರ್ವಿಆರ್ ಹೆಲ್ತ್ಕೇರ್, ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಒಳಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಆರೋಗ್ಯ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಆರಂಭಿಸಿದೆ. ರೋಗಿಯ ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆ, ಪ್ರತಿಯೊಬ್ಬರಿಗೂ ವಿಶ್ವಮಟ್ಟದ,ಉತ್ತಮ ಗುಣಮಟ್ಟದ ಹಾಗೂ ಕೈಗೆಟುಕುವ ಆರೋಗ್ಯ ಸೇವೆಯನ್ನು ಒದಗಿಸಬೇಕು ಎಂಬ ಉದ್ದೇಶದೊಂದಿಗೆ ಆಸ್ಪತ್ರೆ ತನ್ನ ಸೇವೆಯನ್ನು ಸಮರ್ಪಿಸಿಕೊಂಡಿದೆ. ಅತ್ಯುತ್ತಮ ವೈದ್ಯರು, ನವೀಕೃತ ತಂತ್ರಜ್ಞಾನ ಮತ್ತು ರೋಗಿಕೇಂದ್ರಿತ ಚಿಕಿತ್ಸಾ ವ್ಯವಸ್ಥೆಯ ಮೂಲಕ ಸಮಗ್ರ ಆರೋಗ್ಯ ಸೇವೆ ನೀಡುವ ಬದ್ಧತೆಯನ್ನು ಆರ್ವಿಆರ್ ಹೆಲ್ತ್ಕೇರ್ ಹೊಂದಿದೆ.
ಸಂಸ್ಥೆಯ ವೈದ್ಯಕೀಯ ತಂಡವು 30 ವರ್ಷಗಳಿಗಿಂತ ಹೆಚ್ಚು ಸಂಯೋಜಿತ ವೈದ್ಯಕೀಯ ಹಾಗೂ ಶಸ್ತ್ರಚಿಕಿತ್ಸಾ ಅನುಭವ ಹೊಂದಿದ್ದು, ತಮ್ಮ ವೃತ್ತಿಜೀವನದಲ್ಲಿ 17,000ಕ್ಕೂ ಅಧಿಕ ಯಶಸ್ವಿ ಶಸ್ತ್ರಚಿಕಿತ್ಸೆಗಳನ್ನು ನಡೆಸಿದ ಪರಿಣತ ವೈದ್ಯರನ್ನು ಒಳಗೊಂಡಿದೆ. ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನ, ಕ್ಲಿನಿಕಲ್ ಪರಿಣತಿ ಹಾಗೂ ಮಾನವೀಯ ಸೇವೆಯನ್ನು ಒಟ್ಟುಗೂಡಿಸಿ ವಿವಿಧ ಸೂಪರ್ ಸ್ಪೆಷಾಲಿಟಿ ವಿಭಾಗಗಳಲ್ಲಿ ಸಮಗ್ರ ಚಿಕಿತ್ಸೆ ಒದಗಿಸಲಾಗುತ್ತಿದೆ.
ಸಂಸ್ಥಾಪಕ ಹಾಗೂ ಅಧ್ಯಕ್ಷ ವಿಜಯ್ ಎಂ. ಎನ್. ಶೆಟ್ಟಿ
ವಿವಿಧ ಉದ್ಯಮ ಕ್ಷೇತ್ರಗಳಲ್ಲಿ ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿರುವ ಆರ್ವಿಆರ್ ಹೆಲ್ತ್ಕೇರ್ನ ಸಂಸ್ಥಾಪಕ ಹಾಗೂ ಅಧ್ಯಕ್ಷ ವಿಜಯ್ ಎಂ. ಎನ್. ಶೆಟ್ಟಿ ಅವರು ಸಮಾಜಸೇವೆಯ ದೃಢ ಸಂಕಲ್ಪದೊಂದಿಗೆ ಅವರು ಆರ್ವಿಆರ್ ಹೆಲ್ತ್ಕೇರ್ ಅನ್ನು ಸ್ಥಾಪಿಸಿದ್ದು, ಉತ್ತಮ ಆರೋಗ್ಯ ಸೇವೆ ರೋಗಿಯ ಆರ್ಥಿಕ ಸಾಮರ್ಥ್ಯವನ್ನು ಅವಲಂಬಿಸಿರಬಾರದು ಎಂಬ ನಂಬಿಕೆಯನ್ನು ಹೊಂದಿದ್ದಾರೆ. ಪ್ರತಿಯೊಬ್ಬ ರೋಗಿಗೂ ಗೌರವ ಮತ್ತು ಉತ್ತಮ ಕಾಳಜಿಯೊಂದಿಗೆ ಮತ್ತು ಕೈಗೆಟುಕುವ ವೆಚ್ಚದಲ್ಲಿ ವಿಶ್ವದರ್ಜೆಯ ಚಿಕಿತ್ಸೆ ದೊರೆಯುವ ಆರೋಗ್ಯ ವ್ಯವಸ್ಥೆಯನ್ನು ನಿರ್ಮಿಸುವುದು ಅವರ ದೂರದೃಷ್ಟಿಯಾಗಿದೆ. ಅಲ್ಲದೆ ಅವರ ಮಾರ್ಗದರ್ಶನದಲ್ಲಿ ಸಂಸ್ಥೆಯು ಅತ್ಯಾಧುನಿಕ ಮೂಲಸೌಕರ್ಯ, ಹೊಸ ವೈದ್ಯಕೀಯ ತಂತ್ರಜ್ಞಾನ, ಪರಿಣತ ವೈದ್ಯಕೀಯ ಸೇವೆಗಳು ಹಾಗೂ ಸಮಾಜಮುಖಿ ಆರೋಗ್ಯ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಹೂಡಿಕೆ ಮಾಡುತ್ತಿದೆ.
ವೈದ್ಯಕೀಯ ನಾಯಕತ್ವ
ಆರ್ವಿಆರ್ ಹೆಲ್ತ್ಕೇರ್ನ ನಿರ್ದೇಶಕರಾಗಿರುವ ಡಾ. (ಪ್ರೊ.) ರಾಘವೇಂದ್ರ ಬಿ. ಎಸ್. ಅವರು ದಕ್ಷಿಣ ಕನ್ನಡದ ಅತ್ಯಂತ ಹಿರಿಯ ಹಾಗೂ ಖ್ಯಾತ ನರಶಸ್ತ್ರಚಿಕಿತ್ಸಕರಲ್ಲಿ ಒಬ್ಬರಾಗಿದ್ದಾರೆ. ಅವರ ಅಪಾರ ಅನುಭವ, ವೈದ್ಯಕೀಯ ಪರಿಣತಿ ಹಾಗೂ ನೈತಿಕ ಮೌಲ್ಯಗಳ ಆಧಾರದಲ್ಲಿ ಸಂಸ್ಥೆಯು ಅತ್ಯುನ್ನತ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡುತ್ತಿದೆ.
ಇದಲ್ಲದೆ, ಹಿರಿಯ ಹೃದ್ರೋಗ ತಜ್ಞ ಡಾ. ಮನೀಶ್ ರೈ ಸೇರಿದಂತೆ ನರವಿಜ್ಞಾನ, ನರಶಸ್ತ್ರಚಿಕಿತ್ಸೆ, ಆಂಕಾಲಜಿ ಹಾಗೂ ಇತರ ಹಲವು ವಿಭಾಗಗಳ ಅನುಭವಿ ತಜ್ಞ ವೈದ್ಯರ ತಂಡ ಸಂಸ್ಥೆಗೆ ಬಲ ತುಂಬಿದೆ.
‘ಆರೋಗ್ಯ ಬೈ ಆರ್ವಿಆರ್’ ಮೂಲಕ ಆರೋಗ್ಯ ಸೇವೆಯ ವಿಸ್ತರಣೆ – ಕಾಸರಗೋಡಿನಲ್ಲಿ ನ್ಯೂರೋ-ಆಂಕೊಲಜಿ ಕೇಂದ್ರ ಆರಂಭ
ಉತ್ತಮ ಆರೋಗ್ಯ ಸೇವೆ ಒದಗಿಸುವ ತನ್ನ ಧ್ಯೇಯವನ್ನು ಮತ್ತಷ್ಟು ವಿಸ್ತರಿಸಿರುವ ಆರ್ವಿಆರ್ ಹೆಲ್ತ್ಕೇರ್, ‘ಆರೋಗ್ಯ ಬೈ ಆರ್ವಿಆರ್’ (AROGYA BY RVR) ಎಂಬ ಉಚಿತ ಆರೋಗ್ಯ ತಪಾಸಣೆ ಹಾಗೂ ತಜ್ಞ ವೈದ್ಯರ ಸಮಾಲೋಚನಾ ಕಾರ್ಯಕ್ರಮವನ್ನು ಆರಂಭಿಸಿದೆ. ದೇಶದ ವಿವಿಧ ಭಾಗಗಳಲ್ಲಿರುವ ಆರೋಗ್ಯ ಸೇವೆಯಿಂದ ವಂಚಿತ ಸಮುದಾಯಗಳಿಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ತಲುಪಿಸುವ ಉದ್ದೇಶದಿಂದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ರೂಪಿಸಲಾಗಿದೆ.
“ಪ್ರತಿಯೊಂದು ಜೀವಕ್ಕೂ ಅತ್ಯುತ್ತಮ ಆರೋಗ್ಯ ಸೇವೆ ದೊರೆಯಬೇಕು” ಎಂಬ ಸಂಸ್ಥೆಯ ಧ್ಯೇಯವಾಕ್ಯವನ್ನು ಸಾಕಾರಗೊಳಿಸುವ ಈ ಕಾರ್ಯಕ್ರಮದಡಿ ತಜ್ಞ ವೈದ್ಯರಿಂದ ಉಚಿತ ಸಮಾಲೋಚನೆ, ಸಮಗ್ರ ಆರೋಗ್ಯ ತಪಾಸಣೆ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈಗಾಗಲೇ ಚಿಕ್ಕಮಗಳೂರಿನಲ್ಲಿ ಯಶಸ್ವಿಯಾಗಿ ನಡೆದ ಉಚಿತ ಆರೋಗ್ಯ ಶಿಬಿರಕ್ಕೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ಮತ್ತು ಮೆಚ್ಚುಗೆ ವ್ಯಕ್ತವಾಗಿದ್ದು, ಈ ಕಾರ್ಯಕ್ರಮವನ್ನು ಶೀಘ್ರದಲ್ಲೇ ಕರ್ನಾಟಕ, ಕೇರಳ ಸೇರಿದಂತೆ ದೇಶದ ಇತರ ರಾಜ್ಯಗಳಿಗೂ ವಿಸ್ತರಿಸಲು ಯೋಜಿಸಲಾಗಿದೆ.
ಕಾಸರಗೋಡಿನಲ್ಲಿ ನ್ಯೂರೋ-ಆಂಕೊಲಜಿ ಕೇಂದ್ರ
ವಿಶೇಷ ವೈದ್ಯಕೀಯ ಸೇವೆಗಳನ್ನು ಹೆಚ್ಚಿನ ಜನರಿಗೆ ತಲುಪಿಸುವ ಉದ್ದೇಶದಿಂದ 2026ರ ಜುಲೈ 26ರಂದು, ಕೇರಳದ ಕಾಸರಗೋಡಿನಲ್ಲಿ ಆರ್ವಿಆರ್ ಹೆಲ್ತ್ಕೇರ್ ನ್ಯೂರೋ-ಆಂಕೊಲಜಿ ಕೇಂದ್ರವನ್ನು ಅಧಿಕೃತವಾಗಿ ಉದ್ಘಾಟಿಸಲಾಗುತ್ತಿದೆ. ಆರೋಗ್ಯ ಮೂಲಸೌಕರ್ಯಗಳು ಸೀಮಿತವಾಗಿರುವ ಪ್ರದೇಶಗಳಲ್ಲಿ ಅತ್ಯಾಧುನಿಕ ತಜ್ಞ ಚಿಕಿತ್ಸೆಯನ್ನು ಒದಗಿಸುವ ಸಂಸ್ಥೆಯ ದೂರದೃಷ್ಟಿಯ ಭಾಗವಾಗಿ ಈ ಕೇಂದ್ರ ಆರಂಭವಾಗುತ್ತಿದೆ.
ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು, ಸುಸಜ್ಜಿತ ಚಿಕಿತ್ಸಾ ಸೌಲಭ್ಯಗಳು ಹಾಗೂ ಅನುಭವಿ ನರವಿಜ್ಞಾನ ಮತ್ತು ಕ್ಯಾನ್ಸರ್ ತಜ್ಞ ವೈದ್ಯರ ತಂಡದೊಂದಿಗೆ ಈ ಕೇಂದ್ರ ಕಾರ್ಯನಿರ್ವಹಿಸಲಿದ್ದು, ನರವ್ಯವಸ್ಥೆಗೆ ಸಂಬಂಧಿಸಿದ ಕ್ಯಾನ್ಸರ್ ಸೇರಿದಂತೆ ಸಂಕೀರ್ಣ ಕಾಯಿಲೆಗಳ ನಿರ್ಣಯ ಮತ್ತು ಚಿಕಿತ್ಸೆಗೆ ಸಮಗ್ರ ಸೇವೆಯನ್ನು ಒದಗಿಸಲಿದೆ.
ಈ ಕಾರ್ಯಕ್ರಮವು ಈಗಾಗಲೇ ಗಮನಾರ್ಹ ಯಶಸ್ಸು ಸಾಧಿಸಿದ್ದು, ಚಿಕ್ಕಮಗಳೂರಿನಲ್ಲಿ ಆಯೋಜಿಸಲಾದ ಉಚಿತ ಆರೋಗ್ಯ ಶಿಬಿರಕ್ಕೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ಮತ್ತು ಮೆಚ್ಚುಗೆ ವ್ಯಕ್ತವಾಗಿದೆ. ಇದರ ಯಶಸ್ಸಿನ ಹಿನ್ನೆಲೆಯಲ್ಲಿ ಕರ್ನಾಟಕ, ಕೇರಳ ಸೇರಿದಂತೆ ದೇಶದ ಇತರ ರಾಜ್ಯಗಳಿಗೂ ‘ಆರೋಗ್ಯ ಬೈ ಆರ್ವಿಆರ್’ ಕಾರ್ಯಕ್ರಮವನ್ನು ವಿಸ್ತರಿಸುವ ಯೋಜನೆಯನ್ನು ಆರ್ವಿಆರ್ ಹೆಲ್ತ್ಕೇರ್ ರೂಪಿಸಿದೆ.
ಭವಿಷ್ಯದ ಯೋಜನೆಗಳು
ಕಾಸರಗೋಡು ನ್ಯೂರೋ-ಆಂಕಾಲಜಿ ಕೇಂದ್ರದ ಆರಂಭ ಹಾಗೂ ‘ಆರೋಗ್ಯ ಬೈ ಆರ್ವಿಆರ್’ ಕಾರ್ಯಕ್ರಮದ ರಾಷ್ಟ್ರವ್ಯಾಪಿ ವಿಸ್ತರಣೆಯೊಂದಿಗೆ ಆರ್ವಿಆರ್ ಹೆಲ್ತ್ಕೇರ್ ತನ್ನ ಆರೋಗ್ಯ ಸೇವೆಯ ವ್ಯಾಪ್ತಿಯನ್ನು ಇನ್ನಷ್ಟು ಬಲಪಡಿಸುತ್ತಿದೆ.
ಮುಂದಿನ ದಿನಗಳಲ್ಲಿ ಕರ್ನಾಟಕ, ಕೇರಳ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಕೇಂದ್ರಗಳು, ಸಮುದಾಯ ಆರೋಗ್ಯ ಯೋಜನೆಗಳು ಹಾಗೂ ತಂತ್ರಜ್ಞಾನದ ಆಧಾರಿತ ವೈದ್ಯಕೀಯ ಸೇವೆಗಳನ್ನು ವಿಸ್ತರಿಸುವ ಮೂಲಕ ಎಲ್ಲರಿಗೂ ವಿಶ್ವದರ್ಜೆಯ ಆರೋಗ್ಯ ಸೇವೆ ಒದಗಿಸುವ ಗುರಿಯೊಂದಿಗೆ ಸಂಸ್ಥೆ ಮುನ್ನಡೆಯುತ್ತಿದೆ.
ಮಾಧ್ಯಮ ಸಂಪರ್ಕ
ಆರ್ವಿಆರ್ ಸೂಪರ್ ಸ್ಪೆಷಾಲಿಟಿ ಸೆಂಟರ್
ಫಲ್ನೀರ್ ರಸ್ತೆ, ಮಂಗಳೂರು – 575001, ಕರ್ನಾಟಕ
ದೂರವಾಣಿ: +91 80504 54112
ಇ-ಮೇಲ್: info@rvrhealthcare.in
ಜಾಲತಾಣ: www.rvrhealthcare.in




