Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ
    ಇತ್ತೀಚಿನ ಸುದ್ದಿ

    ಮಂಗಳೂರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

    November 3, 2023
    Share

    ಮಂಗಳೂರು : ಮಂಗಳೂರು ಹೊರವಲಯದ ಜೋಕಟ್ಟೆಯ ಯುವಕ ಇರ್ಷಾದ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ದಾರುಣ ಅಂತ್ಯ ಕಂಡಿದ್ದಾನೆ.

    ಜೋಕಟ್ಟೆಯ ಕೆಬಿಎಸ್‌ಸಿ ನಿವಾಸಿ ಇರ್ಷಾದ್ (33) ಸೌದಿ ಅರೆಬಿಯಾದ ಅಲ್ ಕೋಬರ್ ನಲ್ಲಿ ಮೃತಪಟ್ಟ ಯುವಕನಾಗಿದ್ದಾನೆ. ಕೆಬಿಎಸ್‌ ನಿವಾಸಿ ಅಬ್ದುಲ್‌ ರಝಾಕ್‌ ಅವರ ಮಗ ಇರ್ಶಾದ್‌ 7ವರ್ಷಗಳಿಂದ ಸೌದಿ ಅರೇಬಿಯಾದ ಅಲ್‌ ಕೋಬರ್‌ ನಲ್ಲಿ ಇಲೆಕ್ಟ್ರಾನಿಕ್‌ ಅಂಗಡಿಯೊಂದರಲ್ಲಿ ಕೆಲಸಕ್ಕೆ ಇದ್ದರು. ಇತ್ತೀಚೆಗೆ ಒಂದೂವರೆ ವರ್ಷಗಳ ಹಿಂದೆ ಊರಿಗೆ ಬಂದು ತೆರಳಿದ್ದರು. ಗುರುವಾರ ಬೆಳಗ್ಗೆ ಇರ್ಶಾದ್‌ ಅವರಿಗೆ ತೀವೃ ತರಹದ ಹೃದಯಾಘಾತ ಸಂಭವಿಸಿದ್ದು, ತಕ್ಷಣ ಅವರ ಸ್ನೇಹಿತರು ಅಲ್ ಕೋಬರ್‌ ನ ಅಲ್‌ ಸಲಾಮ್‌ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಇರ್ಶಾದ್‌ ಹೃದಯಾಘಾತ ಕ್ಕೊಳಗಾಗಿ ಮೃತಪಟ್ಟಿದ್ದಾಗಿ ಘೋಷಿಸಿದರು ಎಂದು ಅವರ ಕುಟುಂಬ ಮೂಲ ಮಾಹಿತಿ ನೀಡಿದೆ. ಮೃತ ಇರ್ಶಾದ್‌ ವಿವಾಹಿತರಾಗಿದ್ದು, ತಂದೆ, ತಾಯಿ, ಇಬ್ಬರು ಸಹೋದರರು, ಮೂರು ಮಂದಿ ಸಹೋದರಿಯನ್ನು ಅಗಲಿದ್ದಾರೆ. ಗುರುವಾರ ಬೆಳಗ್ಗೆ 9.30ರ ಸುಮಾರಿಗೆ ಸಹೋದರ ಇಮ್ರಾನ್‌ ರಿಗೆ ವೀಡಿಯೊ ಕರೆ ಮಾಡಿದ್ದ ಇರ್ಶಾದ್‌, ಅನಾರೋಗ್ಯ ವಿದ್ದು ಊರಿಗೆ ಬರುವುದಾಗಿ ಹೇಳಿದ್ದ. ಊರಿಗೆ ಬಂದು ಚಿಕಿತ್ಸೆ ಪಡೆಯುವ ಕುರಿತು ಸಹೋದರನ ಜೊತೆ ಸಮಾಲೋಚನೆ ಯನ್ನೂ ಮಾಡಿದ್ದ. ಎಲ್ಲರೊಂದಿಗೂ ವೀಡಿಯೊ ಕಾಲ್‌ ನಲ್ಲಿ ಮಾತನಾಡಿ ಕರೆ ಕಟ್‌ ಮಾಡಿದ್ದ. ಆದರೆ, ಕರೆ ಕಟ್‌ ಮಾಡಿದ ಅರ್ಧಗಂಟೆಯಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ. ಇರ್ಶಾದ್‌ ಮೃತದೇಹ ಸೌದಿ ಅರೆಬಿಯಾದ ಅಲ್‌ ಕೋಬರ್‌ ನ ಅಲ್‌ ಸಲಾಮ್‌ ಆಸ್ಪತ್ರೆಯಲ್ಲಿದ್ದು,ಇಂದು ಶುಕ್ರವಾರ ಜುಮಾ ನಮಾಝಿನ ಬಳಿಕ ಅಲ್‌ ಕೋಬರ್ ನ ಮಸೀದಿಯಲ್ಲಿ ದಫನ ಕಾರ್ಯ ನಡೆಯಲಿದೆ ಎಂದು ಅವರ ಸಹೋದರ ಇಮ್ರಾನ್‌ ಮಾಹಿತಿ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೃದಯಾಘಾತಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅದರಲ್ಲೂ ಏನೂ ಆರೋಗ್ಯ ಸಮಸ್ಯೆಗಳಿಲ್ಲದ ಯುವಜನಾಂಗ ಹೆಚ್ಚಾಗಿ ಹೃದಯಾಘಾತಕ್ಕೆ ಬಲಿಯಾಗುತ್ತಿದೆ.  ಆದ್ರೆ  ಯಾಕಾಗಿ ಈ ಹೃದಯಾಗಾತಗಳು ಹೆಚ್ಚಾಗುತ್ತಿವೆ ಕಾರಣಗಳೇನು? ಕೊರೊನಾ ಸಾಂಕ್ರಾಮಿಕ ದಿಂದ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮವೇ ಎಂಬುವುದು ಇನ್ನೂ ಧೃಡಪಟ್ಟಿಲ್ಲ. ಈ ಬಗ್ಗೆ ಗಂಭೀರ ಅಧ್ಯಾಯನಗಳು ಅಗತ್ಯವಾಗಿದೆ.

    Post Views: 184

    Related Posts

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿ ಬೆಂಕಿಗಾಹುತಿ- ಅಪಾರ ನಷ್ಟ!!

    July 28, 2026

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.