ತನಗೆ ಹೆಣ್ಣು ಸಿಗುತ್ತಿಲ್ಲ ಎಂಬುದಾಗಿ ಮನನೊಂದು ಹೋಂಗಾರ್ಡ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಜೆಬಿ ಹಳ್ಳಿಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಜೆ.ಬಿ ಹಳ್ಳಿಯಲ್ಲಿ ಹೋಂಗಾರ್ಡ್ ತಿರುಮಲ(31) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ನೇಣಿಗೆ ಹೋಂಗಾರ್ಡ್ ತಿರುಮಲ ಶರಣಾಗಿದ್ದಾರೆ.
ಇತ್ತೀಚೆಗೆ ಮೂರು ಕಡೆಯಲ್ಲಿ ತಿರುಮಲ ಹೆಣ್ಣು ನೋಡಿಕೊಂಡು ಬಂದಿದ್ದರು. ಅವರಲ್ಲಿ ಯಾರೂ ಒಪ್ಪದ ಹಿನ್ನಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.




