Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ವನ್ಯಜೀವಿ ಬೇಟೆಯಾಡಿ ಮಾಂಸ ದಾಸ್ತಾನು- ಆರೋಪಿಗೆ ಜಾಮೀನು ಮಂಜೂರು
    ಇತ್ತೀಚಿನ ಸುದ್ದಿ

    ಪುತ್ತೂರು: ವನ್ಯಜೀವಿ ಬೇಟೆಯಾಡಿ ಮಾಂಸ ದಾಸ್ತಾನು- ಆರೋಪಿಗೆ ಜಾಮೀನು ಮಂಜೂರು

    May 15, 2025
    Share

    ಪುತ್ತೂರು: ಕಳೆದ ಏಪ್ರಿಲ್ ತಿಂಗಳಲ್ಲಿ ವನ್ಯಜೀವಿ ಬೇಟೆಯಾಡಿ, ಅದರ ಮಾಂಸವನ್ನು ದಾಸ್ತಾನಿರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ದ.ಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ನಿರೀಕ್ಷಣ ಜಾಮೀನು ಮಂಜೂರುಗೊಳಿಸಿ ಆದೇಶ ನೀಡಿದೆ.  

    ಏ.24 ರಂದು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲೆಂಜಾಲು ಎಂಬಲ್ಲಿ ವಾಸವಿರುವ ವರ್ಗೀಸ್‍ ಥಾಮಸ್ ಎಂಬವರ ಮನೆಯಲ್ಲಿ ವನ್ಯ ಪ್ರಾಣಿಯ ಮಾಂಸದ ತುಂಡುಗಳನ್ನು ದಾಸ್ತಾನಿಟ್ಟಿರುವ ಕುರಿತು ಮಾಹಿತಿ ಬಂದಿದ್ದು, ಪಂಜ ವಲಯದ ಕಡಬ ಅರಣ್ಯಾಧಿಕಾರಿಗಳು ಆರೋಪಿ ಮನೆಗೆ ದಾಳಿ ನಡೆಸಿದಾಗ ಮನೆಯ ರೆಫ್ರಿಜರೇಟರ್ ಒಳಗಡೆ ಹಸಿ ಮಾಂಸ ಪತ್ತೆಯಾಗಿ ಬಳಿಕ ಆರೋಪಿ ಪರಾರಿಯಾಗಿರುವುದಾಗಿ ಆರೂಪಿಸಿ, ತದನಂತರ ಕೃತ್ಯಕ್ಕೆ ಉಪಯೋಗಿಸಿದೆ ಎನ್ನಲಾದ ಕೋವಿ, ವಾಹನವನ್ನು ಮತ್ತು ಹಸಿ ಮಾಂಸವನ್ನು ವಶಕ್ಕೆ ಪಡೆದುಕೊಂಡು, ಆರೋಪಿ ವರ್ಗಿಸ್ ಥಾಮಸ್ ವಿರುದ್ಧ ಭಾರತೀಯ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರನ್ವಯ ಮೊಕದ್ದಮೆ ದಾಖಲಿಸಿ, ಪುತ್ತೂರು ನ್ಯಾಯಾಲಯಕ್ಕೆ ಅರಣ್ಯ ಅಧಿಕಾರಿಗಳು ವರದಿಯನ್ನು ನೀಡಿದ್ದರು.

    ಪ್ರಕರಣದ ಆರೋಪಿ ವರ್ಗೀಸ್ ಥಾಮಸ್‍ ರವರು, ತಾನು ನಿರಪರಾಧಿ, ಈ ಪ್ರಕರಣಕ್ಕೂ ಮತ್ತು ತನಗೆ ಯಾವುದೇ ಸಂಬಂಧವಿಲ್ಲ. ಆನೆ ಕಾರಿಡಾರ್ ನಿರ್ಮಿಸುವ ವಿಚಾರದಲ್ಲಿ ತನಗೂ ಮತ್ತು ತನ್ನ ರಾಜಕೀಯ ವೈರಿಗಳಿಗೂ ದ್ವೇಷವಿರುವುದರಿಂದ, ಈ ಪ್ರಕರಣದಲ್ಲಿ ತನ್ನನ್ನು ಸಿಲುಕಿಸಲಾಗಿದೆ ಎಂಬ ವಾದವನ್ನು ಮುಂದಿಟ್ಟು ತನ್ನ ವಕೀಲರ ಮೂಲಕ ರಕ್ಷಣೆಗಾಗಿ ಮಾನ್ಯ ನ್ಯಾಯಾಲಯದ ಮೊರೆ ಹೋಗಿದ್ದರು.

    ಇದೀಗ ಈ ಪ್ರಕರಣದಲ್ಲಿ ದ.ಕ. ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪುತ್ತೂರು ಪೀಠದ ಗೌರವಾನ್ವಿತ ನ್ಯಾಯಾಧೀಶೆ ಸರಿತಾ ಡಿ ರವರು, ಆರೋಪಿಗೆ ಶರ್ತಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ. ಆರೋಪಿ ಹಿರಿಯ ನ್ಯಾಯವಾದಿಗಳಾದ ನೂರುದ್ದೀನ್ ಸಾಲ್ಮರ ಮತ್ತು ಸಾಕ್ಷಿಕ್ ಆರಿಗಾ ಬಿ.ವಾದಿಸಿದ್ದರು.

    Post Views: 148

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.