Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಷ್ಟಪಟ್ಟು ಓದಿಸಿ ಸರ್ಕಾರಿ ಕೆಲಸಕ್ಕೆ ದಾರಿಯಾದ ಪತಿಯನ್ನೇ ಜೈಲಿಗೆ ಕಳುಹಿಸಿದ ಪತ್ನಿ
    ಇತ್ತೀಚಿನ ಸುದ್ದಿ

    ಕಷ್ಟಪಟ್ಟು ಓದಿಸಿ ಸರ್ಕಾರಿ ಕೆಲಸಕ್ಕೆ ದಾರಿಯಾದ ಪತಿಯನ್ನೇ ಜೈಲಿಗೆ ಕಳುಹಿಸಿದ ಪತ್ನಿ

    June 26, 2023
    Share

    ತನ್ನ ಜೀವನಕ್ಕೆ ದಾರಿದೀಪವಾದ ಗಂಡನನ್ನೇ ಹೆಂಡತಿ ಜೈಲಿಗೆ ಕಳಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

    ಹೌದು, ಅಲೋಕ್ ಮೌರ್ಯ ಎಂಬಾತ ತನ್ನ ಎಸ್‌ಡಿಎಂ (ಉಪವಿಭಾಗೀಯ ಮ್ಯಾಜಿಸ್ಟ್ರೇಟ್) ಪತ್ನಿ ಜ್ಯೋತಿ ಮೌರ್ಯ ವಿರುದ್ಧ ಈ ಆರೋಪ ಮಾಡಿದ್ದಾರೆ.

    ಅಲೋಕ್ ಹೇಳುವಂತೆ , ಮದುವೆ (Marriage) ಬಳಿಕ ಇಬ್ಬರು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದರು. ಆದ್ರೆ ಅಲೋಕ್‌ ಬಿಡುವಿಲ್ಲದೆ, ತುಂಬಾ ಶ್ರಮವಹಿಸಿ ದುಡಿದು ಪತ್ನಿಗೆ ಶಿಕ್ಷಣ (Education) ಕೊಡಿಸಿದರು. ಪ್ರಯಾಗ್​ರಾಜ್​ನಲ್ಲಿರುವ ಒಳ್ಳೆಯ ಕೋಚಿಂಗ್​ ಕೇಂದ್ರಕ್ಕೆ ದಾಖಲಿಸಿದರು. ಅವರ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವದಿಂದಾಗಿ ಪತ್ನಿ ಜ್ಯೋತಿ 2016ರಲ್ಲಿ ಸಬ್​ ಡಿವಿಷನಲ್​ ಮ್ಯಾಜಿಸ್ಟ್ರೇಟ್​ (ಎಸ್​ಡಿಎಂ) ಆಗಿ ಸರ್ಕಾರಿ ಕೆಲಸ ಗಿಟ್ಟಿಸಿಕೊಂಡರು.

    ಇದಾದ ಬಳಿಕ ಜ್ಯೋತಿ ಸಂಪೂರ್ಣವಾಗಿ ಬದಲಾದರು. ಯಶಸ್ಸು ಆಕೆಯ ತಲೆಗೆ ಹತ್ತಿತ್ತು. ಮತ್ತೊಬ್ಬ ಅಧಿಕಾರಿಯೊಂದಿಗೆ ಸೇರಿ ನನಗೆ ಮೋಸ ಮಾಡಿದಳು ಎಂದು ಅಲೋಕ್ ಆರೋಪಿಸಿದ್ದಾರೆ.

    ಜ್ಯೋತಿ ಕಚೇರಿಯಲ್ಲಿ ಕೆಲಸ ಮಾಡುವ ಅಧಿಕಾರಿಯೊಂದಿಗೆ ಅಕ್ರಮ ಸಂಬಂಧ (Extra marital affair) ಹೊಂದಿದ್ದಳು ಎನ್ನಲಾಗಿದೆ. ಆಕೆಯ ಸಂಬಂಧದ ಬಗ್ಗೆ ತಿಳಿದ ನಂತರವೂ, ಅಲೋಕ್ ಅವರ ಮದುವೆಯನ್ನು ಉಳಿಸಿಕೊಳ್ಳಲು ತೀವ್ರವಾಗಿ ಪ್ರಯತ್ನಿಸಿದರು. ಆದರೂ ಆಕೆ ಅಲೋಕ್‌ಗೆ ಎಲ್ಲಾ ರೀತಿಯಲ್ಲಿ ತೊಂದರೆ ನೀಡಿದರು.

    ಜ್ಯೋತಿ ತನ್ನ ವಿರುದ್ಧ ಸುಳ್ಳು ವರದಕ್ಷಿಣೆ (Dowry) ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಅಲೋಕ್ ಆರೋಪಿಸಿದ್ದಾರೆ, ಇದರಿಂದ ನನ್ನ ಬಂಧನವಾಯಿತು.
    ಆದ್ರೆ ಅಲೋಕ್ ಈಗ ಜಾಮೀನಿನ ಮೇಲೆ ಹೊರಗಿದ್ದಾರೆ ಆದರೆ ಕೆಲಸ (Job) ಕಳೆದುಕೊಂಡಿದ್ದಾರೆ.

    ಅಲೋಕ್ ತನ್ನ ಹೆಂಡತಿಯ ಶಿಕ್ಷಣಕ್ಕಾಗಿ ವರ್ಷಗಳ ಕಾಲ ದುಡಿದು ಹಣ ವ್ಯಯಿಸಿ, ಅಂತಿಮವಾಗಿ ಪತ್ನಿಯನ್ನು ಎಸ್‌ಡಿಎಂ ಮಾಡಿದರೂ ಇದೀಗ ತಾನು ನಿರುದ್ಯೋಗಿಯಾಗಿ ಮತ್ತು ಏಕಾಂಗಿಯಾಗಿ ಸಂಪೂರ್ಣ ಅಸಹಾಯಕನಾಗಿದ್ದಾನೆ. ಅಲ್ಲದೆ, ಇದೇ ವೇಳೆ ಪತ್ನಿಗೆ ಸೌಹಾರ್ದಯುತವಾಗಿ ವಿಚ್ಛೇದನ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಅಲೋಕ್ ಆರೋಪಿಸಿದ್ದಾರೆ.

    Post Views: 457

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.