Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS: ‘ರಾಜ್ಯ ಸರ್ಕಾರ’ದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’11 ಐಎಎಸ್ ಅಧಿಕಾರಿ’ಗಳ ವರ್ಗಾವಣೆ 
    ಇತ್ತೀಚಿನ ಸುದ್ದಿ

    BREAKING NEWS: ‘ರಾಜ್ಯ ಸರ್ಕಾರ’ದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’11 ಐಎಎಸ್ ಅಧಿಕಾರಿ’ಗಳ ವರ್ಗಾವಣೆ 

    June 6, 2023
    Share

    ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ಇಂದು 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

    ಈ ಕುರಿತಂತೆ ಇಂದು ಅಧಿಸೂಚನೆಯನ್ನು ಹೊರಡಿಸಿದ್ದು, 1990ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಕಪಿಲ್ ಮೋಹನ್ ಅವರನ್ನು ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿದೆ.

    ಐಎಎಸ್ ಧಿಕಾರಿ ಉಮಾಶಂಕರ್ ಎಸ್ ಆರ್ ಅವರನ್ನು ಸಹಕಾರ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹುದ್ದೆಯಿಂದ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ನೇಮಿಸಿ ಆದೇಶಿಸಿದೆ.

    ಹುದ್ದೆಯ ನಿರೀಕ್ಷೆಯಲ್ಲಿದ್ದಂತ ಮಂಜುನಾಥ್ ಪ್ರಸಾದ್ ಅವರನ್ನು ಸಹಕಾರ ಇಲಾಖೆಯ ಪ್ರಿನ್ಸಿಪಲ್ ಸೆಕ್ರೇಟರಿಯಾಗಿ ನೇಮಿಸಿದೆ. ವಿ ಅನ್ಬುಕುಮಾರ್ ಅವರನ್ನು ಕೆ ಎಸ್ ಆರ್ ಟಿಸಿ ಎಂ.ಡಿ ಹುದ್ದೆಯಿಂದ ವರ್ಗಾವಣೆ ಮಾಡಿ, ಕೃಷಿಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ.

    ಐಎಎಸ್ ಅಧಿಕಾರಿ ಮೋಹನ್ ರಾಜ್ ಕೆ.ಪಿ ಅವರನ್ನು ಆರ್ಟಿಕಲ್ಚರ್ ಮತ್ತು ಸಿರಿಕಲ್ಚರ್ ಇಲಾಖೆಯ ಸೆಕ್ರೇಟರಿಯಾಗಿ, ಡಾ.ರಿಚರ್ಡ್ ವಿನ್ಸನ್ ಡಿಸೋಜಾ ಅವರನ್ನು ಎಂಎಸ್‌ಎಂಇ ಮತ್ತು ಮೈನ್ ಇಲಾಖೆಯ ಕಾರ್ಯದರ್ಶಿಯಾಗಿ ನಿಯೋಜಿಸಿದೆ.

    ಕೆಐಎಡಿಬಿಯ ಸಿಇಓ ಆಗಿದ್ದಂತ ಐಎಎಸ್ ಅಧಿಕಾರಿ ಗಿರೀಶ್ ಆರ್ ಅವರನ್ನು ಮೈನಿಂಗ್ ಮತ್ತು ಜಿಯೋಲಜಿ ಇಲಾಖೆಯ ನಿರ್ದೇಶಕರನ್ನಾಗಿ ನೇಮಿಸಿದೆ.

    ಹುದ್ದೆಯ ನಿರೀಕ್ಷೆಯಲ್ಲಿದ್ದಂತ ಐಎಎಸ್ ಅಧಿಕಾರಿ ಕರೆ ಗೌಡ ಅವರನ್ನು ಬೆಂಗಳೂರಿನ ಅಟಲ್ ಸ್ನೇಹಿ ಕೇಂದ್ರದ ನಿರ್ದೇಶಕರಾಗಿ, ಪಾಟಿಲ್ ಯಲಗೌಡ ಶಿವನಗೌಡ ಅವರನ್ನು ತುಮಕೂರು ಡಿಸಿ ಹುದ್ದೆಯಿಂದ ವರ್ಗಾವಣೆ ಮಾಡಿ ಬೆಂಗಳೂರಿನ ಅಗ್ರಿಕಲ್ಚರ್ ಇಲಾಖೆಯ ಕಮೀಷನರ್ ಆಗಿ ನೇಮಕ ಮಾಡಲಾಗಿದೆ.

    2012ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಜಗದೀಶ್ ಜಿ ಅವರನ್ನು ಕೆ ಎಸ್ ಟಿ ಡಿ ಸಿಯ ಎಂ.ಡಿಯಾಗಿ ನೇಮಿಸಿದೆ. ಡಾ.ಮಹೇಶ್ ಎಂ ಅವರನ್ನು ಕರ್ನಾಟಕ ಸೋಪ್ ಮತ್ತು ಮರ್ಜಕ ಲಿಮಿಟೆಡ್ ಎಂ.ಡಿ ಹುದ್ದೆಯಿಂದ ವರ್ಗಾವಣೆ ಮಾಡಿ ಕೆಐಎಡಿಬಿ ಸಿಇಓ ಆಗಿ ನೇಮಕ ಮಾಡಿದೆ.

    Post Views: 178

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.