Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಗಂಡನನ್ನೇ ಕೊಲೆಗೈದ ಪತ್ನಿ..!
    ಇತ್ತೀಚಿನ ಸುದ್ದಿ

    ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಗಂಡನನ್ನೇ ಕೊಲೆಗೈದ ಪತ್ನಿ..!

    February 6, 2024
    Share

    ಪತ್ನಿ ತನ್ನ ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯ ಎಪಿಎಂಸಿ-ಮಾರಡಗಿ ರೋಡ್‌ನಲ್ಲಿ ನಡೆದಿದೆ. ಕೊಲೆಮಾಡಿದ ಮಹಿಳೆ ಮಂಜುಳಾ ಹಾಗೂ ರಿಯಾಜ್ ಅಹ್ಮದ್, ಕೊಲೆಯಾದ ವ್ಯಕ್ತಿ (ಪತಿ) ಬಂಜಾರ ಕಾಲೋನಿ ನಿವಾಸಿ ಚಂದ್ರಶೇಖರ ಲಮಾಣಿ (40) ಕಳೆದ ಜನವರಿ 10 ರಂದು ಎಪಿಎಂಸಿ ಮಾರಡಗಿ ರೋಡ್‌ನಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ನವನಗರ ಪೊಲೀಸರು ಮೃತನಾದ ವ್ಯಕ್ತಿಯ ಗುರುತು ಪತ್ತೆ ಹಚ್ಚಿದ್ದರು. ಅತ್ತ ಪತ್ನಿ ಮಂಜುಳಾ ಗಂಡನ ಸಾವಿನ ಬಗ್ಗೆ ಸಂಶಯ ಇದೆ ಎಂದು ನವನಗರ ಪೊಲೀಸ್ ಠಾಣೆಗೆ ತೆರಳಿ ದೂರು‌ ನೀಡಿದ್ದಳು‌. ಪೊಲೀಸರು ಎಲ್ಲಾ ಆ್ಯಂಗಲ್‌ನಲ್ಲಿ ತನಿಖೆ ಮಾಡಿದ್ದಾರೆ. ಬಳಿಕ ಈ ಕೊಲೆಗೆ ಕಾರಣ ಯಾರು ಎಂಬುದನ್ನ ಪತ್ತೆಹಚ್ಚಿದ್ದಾರೆ. ಪತಿ ಚಂದ್ರಶೇಖರ ಲಮಾಣಿಯನ್ನು ಪತ್ನಿ ಮಂಜುಳ ಮತ್ತು ಪ್ರಿಯಕರ ರಿಯಾಜ್ ಅಹ್ಮದ್ ಕೊಲೆ ಮಾಡಿದ್ದಾರೆ. ಅನೈತಿಕ ಸಂಬಂಧಕ್ಕೆ ವಿರೋಧ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದಾಗಿ ಸತ್ಯ ಕಕ್ಕಿದ್ದಾರೆ. ನಮ್ಮಿಬ್ಬರ ಅನೈತಿಕ ಸಂಬಂಧ ಇತ್ತು. ಈ ವಿಷಯ ಗಂಡನಿಗೆ ಗೊತ್ತಾದ ನಂತರ ನನಗೆ ಕಿರುಕುಳ ನೀಡುತ್ತಿದ್ದ. ಅಲ್ಲದೇ ನಮ್ಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರ ಕೊಲೆ ಮಾಡಿದ್ದಾಗಿ ಮಂಜುಳ ಪೊಲೀಸರ ಮುಂದೆ ಸತ್ಯ ಒಪ್ಪಿಕೊಂಡಿದ್ದಾಳೆ. ಅತ್ತ ನಾನೇ ಚಂದ್ರಶೇಖರನನ್ನ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದೇನೆ. ಕಳೆದ ಐದು ವರ್ಷಗಳಿಂದ ನಮ್ಮಿಬ್ಬರ ನಡುವೆ ಅನೈತಿಕ ಸಂಬಂಧ ಇತ್ತು. ಅದಕ್ಕೆ ಚಂದ್ರಶೇಖರ ವಿರೋಧ ಮಾಡ್ತಾ ಇದ್ದ. ಆದ್ದರಿಂದ ಕೊಲೆ ಮಾಡದ್ದೇನೆ ಎಂದು ರಿಯಾಜ್ ಅಹ್ಮದ್ ನಿಜಾಂಶ ಹೇಳಿದ್ದಾನೆ. ಸದ್ಯ ಪತ್ನಿಯ ಅನೈತಿಕ ಸಂಬಂಧದಿಂದ ಗಂಡ ಕೊಲೆಯಾದ್ರೆ, ಮಾಡಬಾರದ ತಪ್ಪು ಮಾಡಿ ಪತ್ನಿ ಹಾಗೂ ಪ್ರಿಯಲ ಜೈಲು ಪಾಲಾಗಿದ್ದಾರೆ. ಇವರ ಈ ಕೃತ್ಯಕ್ಕೆ ಮೂರು ಮಕ್ಕಳು ಅನಾಥವಾಗಿವೆ.

    Post Views: 249

    Related Posts

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.