Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ : ಮರಳು ಧಂದೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಆರೋಪ- ವ್ಯಕ್ತಿಯ ಮೇಲೆ ಹಲ್ಲೆ..!
    ಇತ್ತೀಚಿನ ಸುದ್ದಿ

    ಉಳ್ಳಾಲ : ಮರಳು ಧಂದೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಆರೋಪ- ವ್ಯಕ್ತಿಯ ಮೇಲೆ ಹಲ್ಲೆ..!

    November 5, 2024
    Share

    ಉಳ್ಳಾಲ : ಮರಳು ಧಂದೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂಬ ಆರೋಪಕ್ಕೆ ವ್ಯಕ್ತಿ ಮೇಲೆ ಹಲ್ಲೆ ನಡೆದ ಘಟನೆ ಮಂಗಳುರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ.

    ಸೋಮೇಶ್ವರ ಉಚ್ಚಿಲದ ಫಿಶರೀಸ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕಿಶೋರ್ ಎಂ. ಉಚ್ಚಿಲ(53) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ.  ಸುನೀಲ್ ಎಂಬಾತ  ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಕಿಶೋರ್ ಅವರು ಸೋಮವಾರ ಬೆಳಗ್ಗೆ ತನ್ನ ಮಿತ್ರ ಪುಷ್ಪರಾಜ್ ಎಂಬವರ ಜತೆಯಲ್ಲಿ ಸೋಮೇಶ್ವರದ ಹೊಟೇಲಲ್ಲಿ ಚಹಾ ಕುಡಿದು ಸ್ಕೂಟರಲ್ಲಿ ಸಹ ಸವಾರನಾಗಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಸೋಮೇಶ್ವರ ಪುರಸಭಾ ಕಚೇರಿ ಸಮೀಪದಲ್ಲಿ ಆರೋಪಿ ಸುನಿಲ್  ಅವರು  ಮರಳುಗಾರಿಕೆಯ ಬಗ್ಗೆ ಭಾರೀ ಪೊಲೀಸರಿಗೆ ಮಾಹಿತಿ ನೀಡುತ್ತೀಯ, ಈ ಹಿಂದೆಯೇ ನಿನಗೆ ಗತಿ ಕಾಣಿಸಲು ಪ್ರಯತ್ನಿಸಿದ್ದೆ, ಇನ್ನು ಮೂರು ತಿಂಗಳೊಳಗೆ ನೀನೊಬ್ಬನೆ ಸಿಕ್ಕಿದರೆ ಕೊಂದು ಬಿಡುತ್ತೇನೆಂದು ಭುಜ ಮತ್ತು ಸೊಂಟಕ್ಕೆ ಹಲ್ಲೆ ನಡೆಸಿದ್ದು, ಬಳಿಕ ಸೊಂಟದಿಂದ ಚಾಕು ಹೊರ ತೆಗೆದು ಇರಿಯಲು ಮುಂದಾಗಿದ್ದಾನೆ ಎನ್ನಲಾಗಿದೆ. ಈ ವೇಳೆ ಸ್ನೇಹಿತ ಪುಷ್ಪರಾಜ್ ಅವರು ಸ್ಕೂಟರನ್ನ ವೇಗವಾಗಿ ಚಲಾಯಿಸಿದರ ಪರಿಣಾಮ ನಾನು ಪ್ರಾಣಾಪಾಯದಿಂದ ಪಾರಾಗಿದ್ದೇನೆಂದು ಹಲ್ಲೆಗೊಳಗಾದ ಕಿಶೋರ್ ಅವರು ಆರೋಪಿಸಿದ್ದಾರೆ. ಹಲ್ಲೆಗೊಳಗಾದ ಕಿಶೋರ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಉಳ್ಳಾಲ ಠಾಣೆಯಲ್ಲಿ ಆರೋಪಿ ಸುನಿಲ್ ವಿರುದ್ದ ಪ್ರಕರಣ ದಾಖಲಾಗಿದೆ.

    Post Views: 161

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.