Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇನ್ಮುಂದೆ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧ!
    ಇತ್ತೀಚಿನ ಸುದ್ದಿ

    ಇನ್ಮುಂದೆ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧ!

    September 20, 2023
    Share

    ಬೆಂಗಳೂರು: ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ (ಸಿಎಸ್​) ಅವರು ಸುತ್ತೋಲೆ ಹೊರಡಿಸಿದ್ದಾರೆ.

    ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿನ (Single use packaged water bottles) ನೀರಿನ ಬಳಕೆ/ಸರಬರಾಜು ಮಾಡುವುದನ್ನು ನಿಷೇಧಿಸಿ ಕೆಲ ವರ್ಷಗಳ ಹಿಂದೆಯೇ ಆದೇಶಿಸಲಾಗಿತ್ತು. 

    ಇಂತಹ ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭ ಅನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್ (ಪ್ಲಾಸ್ಟಿಕ್ ಅಲ್ಲದ) ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸುವಂತೆ ಸೂಚಿಸಿಲಾಗಿತ್ತು.‌ ಸೂಕ್ತ ಸಾಮೂಹಿಕ ಕುಡಿಯುವ ನೀರು ವಿತರಣಾ ವ್ಯವಸ್ಥೆಯನ್ನು (Common drinking water dispensing system) ಏರ್ಪಡಿಸುವಂತೆ ಸೂಚಿಸಲಾಗಿತ್ತು.

    ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರದ ವತಿಯಿಂದ ಅಥವಾ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಮೇಲಿನ ಉಲ್ಲೇಖಿತ ಸರ್ಕಾರದ ಆದೇಶದ ಸೂಚನೆಯನ್ನು ಪಾಲಿಸುತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ. ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಪ್ಲಾಸ್ಟಿಕ್ ಬಾಟಲಿಗಳಲ್ಲಿ ವಿತರಿಸುತ್ತಿರುವುದು ಸಮರ್ಥನೀಯವಲ್ಲ ಎಂದು ಮುಖ್ಯ ಕಾರ್ಯದರ್ಶಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಈ ಹಿನ್ನೆಲೆ ಇನ್ನುಮುಂದೆ ಎಲ್ಲ ಸಭೆ-ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್‌ನಲ್ಲಿ ನೀರಿನ ಬಳಕೆ/ಸರಬರಾಜು ಮಾಡುವುದನ್ನು ನಿಲ್ಲಿಸುವಂತೆ ಹಾಗೂ ನಿಗದಿಪಡಿಸಿದಂತೆ ಕುಡಿಯುವ ನೀರಿನ ವಿತರಣಾ ವ್ಯವಸ್ಥೆಯನ್ನು ಕಲ್ಪಿಸಿಕೊಳ್ಳುವಂತೆ ಸಿಎಸ್ ಸೂಚಿಸಿದ್ದಾರೆ.

    Post Views: 202

    Related Posts

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.