Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ 1 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ
    ಇತ್ತೀಚಿನ ಸುದ್ದಿ

    ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ 1 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ

    May 9, 2026
    Share

    ಯಾದಗಿರಿ: ಜಿಲ್ಲೆಯಲ್ಲಿ ಇನ್ಸ್‌ಪೆಕ್ಟರ್ ಒಬ್ಬರು​ ಬರೋಬ್ಬರಿ ಒಂದು ಲಕ್ಷ ರೂ. ಲಂಚ ಪಡೆಯುವಾಗ ರೆಡ್​ ಹ್ಯಾಂಡೆಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಕ್ರಿಮಿನಲ್ ಪ್ರಕರಣವೊಂದರ ಆರೋಪಿಗಳನ್ನು ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆಯಿಟ್ಟಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ.

    ನಡೆದಿದ್ದೇನು?

    ಗುರುಮಠಕಲ್ ತಾಲೂಕಿನ ಗೋಪಾಳಪುರ ಗ್ರಾಮದ ಆನಂದ್ ಎಂಬುವವರ ವಿರುದ್ಧ ಜಾತಿ ನಿಂದನೆ ಪ್ರಕರಣವೊಂದು ದಾಖಲಾಗಿತ್ತು. ಈ ಕೇಸ್​ನಲ್ಲಿ ಅವರನ್ನು ಬಂಧಿಸದೆ ಇರಲು ಮತ್ತು ಇನ್ನೊಂದು ಕೇಸ್‌ನಲ್ಲಿ ಅವರ ಹೆಸರನ್ನು ಕೈಬಿಡಲು ಪಿಐ ವೀರಣ್ಣ ದೊಡ್ಡಮನಿ ಅವರು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆನಂದ್ ದೂರು ನೀಡಿದ್ದಾರೆ. ಈ ಎರಡು ಪ್ರಕರಣಗಳ ಇತ್ಯರ್ಥಕ್ಕಾಗಿ ಒಟ್ಟು ಒಂದು ಲಕ್ಷ ರೂಪಾಯಿ ಹಣವನ್ನು ಪಡೆಯುವ ಒಪ್ಪಂದವಾಗಿತ್ತು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ

    ಗುರುಮಠಕಲ್‌ನ ಪೊಲೀಸ್ ವಸತಿ ಗೃಹದಲ್ಲಿ ಆನಂದ್ ಅವರಿಂದ ಒಂದು ಲಕ್ಷ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಹಠಾತ್ ದಾಳಿ ನಡೆಸಿದ್ದಾರೆ. ಲಂಚದ ಹಣದೊಂದಿಗೆ ಇನ್ಸ್‌ಪೆಕ್ಟರ್ ವೀರಣ್ಣ ಬಲೆಗೆ ಬೀಳಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿ ಜಾಕೀರ್ ಇನಾಂದಾರ್ ಅವರ ನೇತೃತ್ವದ ತಂಡ ಈ ದಾಳಿಯನ್ನು ನಡೆಸಿದೆ. ಸದ್ಯ ಆರೋಪಿ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿಯನ್ನು ವಶಕ್ಕೆ ಪಡೆಯಲಾಗಿದ್ದು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

    Post Views: 141

    karnataka PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.