Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಂತರ್ ರಾಜ್ಯ ವಾಹನ, ಸರಗಳ್ಳರ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಅಂತರ್ ರಾಜ್ಯ ವಾಹನ, ಸರಗಳ್ಳರ ಬಂಧನ

    December 17, 2025
    Share

    ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಪ್ರಕರಣಗಳ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ

    . ತೋಟ ಪೈಸಲ್ ಮತ್ತು ಮೈಸೂರಿನ ವಿನಾಯಕ ನಗರದ ನಿತೀನ್ ಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳಿಂದ ಸುಮಾರು 1,20,000 ರೂ. ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಿಸಿದ 45 ಸಾವಿರ ರೂ. ಮೌಲ್ಯದ ಬೈಕ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಡಿ.12ರಂದು ಮಂಗಳೂರಿನ ಯೆಯ್ಯಾಡಿಯ ಶ್ರೀ ಹರಿ ಕಾಂಪ್ಲೆಕ್ಸ್ ನ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ ಬೈಕ್ ಕಳವು ಆಗಿರುವ ಬಗ್ಗೆ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ಕದ್ರಿ ಅಫರಾಧ ವಿಭಾಗದ ಸಿಬ್ಬಂದಿಗೆ ದೊರೆತ ಖಚಿತ ಮಾಹಿತಿಯಂತೆ ಡಿ.16ರಂದು ಪ್ರಕರಣದ ಪ್ರಮುಖ ಆರೋಪಿ ಪೈಸಲ್ ಅಲಿಯಾಸ್ ತೋಟ ಪೈಸಲ್ ಮತ್ತು ನಿತೀನ್ ಕುಮಾರ್ ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆರೋಪಿಗಳು ಡಿ.13ರಂದು ಭಟ್ಕಳ ಗ್ರಾಮಿಣ ಪೊಲೀಸ್ ಠಾಣಾ ಸರಹದ್ದಿನ ಗರ್ಡಿ ಹಿತ್ಲು ಬೆಳಕೆ ಎಂಬಲ್ಲಿ ವಯೋವೃದ್ಧೆ ಹೊನ್ನಮ್ಮ ಮಹಾದೇವ ನಾಯ್ಕ್ ಎಂಬವರ ಕುತ್ತಿಗೆಯಿಂದ ಚಿನ್ನದ ಚೈನ್‌ನ್ನು ಕಸಿದುಕೊಂಡು ಪರಾರಿಯಾದ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಬಾಯಿ ಬಿಟ್ಟಿದ್ದಾರೆ.

    ಆರೋಪಿಗಳಿಂದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ಬೈಕನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಪೈಸಲ್ ಅಲಿಯಾಸ್ ತೋಟ ಪೈಸಲ್‌ನ ವಿರುದ್ದ ಉಡುಪಿ, ಕಾರ್ಕಳ, ಮಣಿಪಾಲ, ಮಂಗಳೂರು,ಬೆಳ್ತಂಗಡಿ, ವಿಟ್ಲ, ಕಂಕನಾಡಿ ನಗರ ಪೊಲೀಸ್ ಠಾಣೆ, ಪುತ್ತೂರು, ಶಿರ್ವ ಸುರತ್ಕಲ್, ಕಡಬ, ಕೊಣಾಜೆ, ಮಡಿಕೇರಿಯ ಕುಶಾಲ ನಗರ, ಹಾಗೂ ಕೇರಳ ರಾಜ್ಯಗಳಲ್ಲಿ , ದರೋಡೆ, ಕಳ್ಳತನದ ಮತ್ತು ಕೊಲೆ ಪ್ರಕರಣ ಸೇರಿದಂತೆ ಸುಮಾರು 42 ಪ್ರಕರಣಗಳು ದಾಖಲಾಗಿದೆ.

    ಈತನ ವಿರುದ್ದ ವಿವಿಧ ನ್ಯಾಯಾಲಯಗಳಲ್ಲಿ 10ಕ್ಕಿಂತಲೂ ಹೆಚ್ಚು ಜಾಮೀನು ರಹಿತ ವಾರೆಂಟ್ ಇದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಲೆ ತಪ್ಪಿಸಿಕೊಂಡಿದ್ದ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಅನಂತ ಪದ್ಮನಾಭ, ಪಿಎಸ್‌ಐ ಮನೋಹರ್ ಪ್ರಸಾದ್, ಎ.ಎಸ್‌ಐಗಳಾದ ಚಂದ್ರಶೇಖರ್, ಸುಧಾಕರ್ ರಾವ್, ರಾಜಶೇಖರ್, ಎಚ್‌ಸಿಗಳಾದ ಲೋಕೇಶ್ , ಸಂತೋಷ್ ಡಿ.ಕೆ. ಸುರೇಶ್, ದಿಲೀಪ್, ಮೋಹನ್, ಮಲ್ಲಪ್ಪ ಬಿ,  ಸುನೀಲ್, ಮಣಿಕಂಠ, ಮೌಲಾ ಅಹಮ್ಮದ್ ಮತ್ತು ಮಂಜುನಾಥ ವಡ್ಡರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

    Post Views: 198

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.