Facebook Twitter Instagram
    Saturday, May 31
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಟಾಲಿಯನ್​ ಮತ್ತು ಸ್ಪ್ಯಾನಿಶ್​​ ಭಾಷೆಗಳಿಗೆ ಕಾಂತಾರ ಡಬ್..!
    ಇತ್ತೀಚಿನ ಸುದ್ದಿ

    ಇಟಾಲಿಯನ್​ ಮತ್ತು ಸ್ಪ್ಯಾನಿಶ್​​ ಭಾಷೆಗಳಿಗೆ ಕಾಂತಾರ ಡಬ್..!

    March 19, 2023
    Share

    ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ಮಾತ್ರ ರಿಲೀಸ್ ಮಾಡಲಾಗಿತ್ತು. ಕನ್ನಡ ಪ್ರೇಕ್ಷಕರು ಚಿತ್ರವನ್ನು ಅಪ್ಪಿಕೊಂಡು, ಹಾಡಿಹೊಗಳಿದ ಬಳಿಕ ಬೇರೆ ಬೇರೆ ಭಾಷೆಯ ಪ್ರೇಕ್ಷರಿಂದ ಬೇಡಿಕೆ ಹೆಚ್ಚಾಯಿತು. ಬಳಿಕ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್​ ಮಾಡಿ ರಿಲೀಸ್​ ಮಾಡಲಾಯಿತು. ಎಲ್ಲಾ ಭಾಷೆಗಳಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದಲ್ಲದೆ ಭರ್ಜರಿ ಕಲೆಕ್ಷನ್ ಕೂಡ​ ಆಯಿತು. ಒಟಿಟಿ ಪ್ರೇಕ್ಷಕರಿಗಾಗಿ ಇಂಗ್ಲಿಷ್​ ವರ್ಷನ್​ ಕೂಡ ರಿಲೀಸ್​ ಆಯಿತು. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಇಟಾಲಿಯನ್​ ಮತ್ತು ಸ್ಪ್ಯಾನಿಶ್​​ ಭಾಷೆಗಳಿಗೆ ಡಬ್​ ಆಗುತ್ತಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬಹಿರಂಗ ಪಡಿಸಿದೆ. ‘ಈ ವಿಷಯ ತಿಳಿಸಲು ನಮಗೆ ತುಂಬಾ ಖುಷಿಯಾಗಿದೆ. ಅಂತಾರಾಷ್ಟ್ರೀಯ ಪ್ರೇಕ್ಷಕರಿಂದ ಬೇಡಿಕೆ ಬಂದಿರುವುದಕ್ಕೆ ಧನ್ಯವಾದಗಳು. ಇಟಾಲಿಯನ್​ ಮತ್ತು ಸ್ಪ್ಯಾನಿಶ್​​ ಭಾಷೆಯಲ್ಲಿ ಕಾಂತಾರ ಚಿತ್ರವನ್ನು ಎಡಿಟ್​ ಮಾಡಲಾಗುತ್ತಿದೆ’ ಎಂದು ಇಟಾಲಿಯನ್​ ಭಾಷೆಯಲ್ಲಿ ಹೊಂಬಾಳೆ ಫಿಲ್ಮ್ಸ್​ ಟ್ವೀಟ್​ ಮಾಡಿದೆ. ಹೊಂಬಾಳೆ ಫಿಲ್ಮ್ಸ್ ಈ ಬಗ್ಗೆ ಬಹಿರಂಗ ಪಡಿಸುತ್ತಿದ್ದಂತೆ ಜಪಾನಿ ಭಾಷೆಯಲ್ಲೂ ರಿಲೀಸ್​ ಮಾಡಿ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ. ‘ಕಾಂತಾರ’ ಸಿನಿಮಾದ ಬಳಿಕ ರಿಷಬ್​ ಶೆಟ್ಟಿ ​ಖ್ಯಾತಿ ವಿಶ್ವಮಟ್ಟದಲ್ಲಿ ಹಬ್ಬಿದೆ. ಇತ್ತೀಚೆಗಷ್ಟೆ ರಿಷಬ್ ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡುವ ಮೂಲಕ ಗಮನ ಸೆಳೆದರು. ಜೆನಿವಾದಲ್ಲೂ ಕಾಂತಾರ ಸಿನಿಮಾ ವಿಶೇಷ ಪ್ರದರ್ಶನ ಮತ್ತು ಸಂವಾದ ಏರ್ಪಡಿಸಲಾಗಿತ್ತು. ಈ ಮೂಲಕ ರಿಷಬ್ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ಮೂಡಿ ಬಂದಿರುವ ಕಾಂತಾರ ಸಿನಿಮಾದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇನ್ನು ಉಳಿದಂತೆ ಕಿಶೋರ್, ಅಚ್ಯುತ್ ಕುಮಾರ್ ಸೇರಿದಂತೆ ಅನೇಕ ರಂಗಭೂಮಿ ಕಲಾವಿದರು ನಟಿಸಿದ್ದರು.

    Post Views: 287

    Related Posts

    ಮಂಗಳೂರು: ಲೋಕಾಯುಕ್ತ ಇನ್‌ಸ್ಪೆಕ್ಟರ್‌ಗೆ ಲಂಚ ನೀಡಲು ಬಂದ ಅಧಿಕಾರಿ ಅರೆಸ್ಟ್

    May 31, 2025

    ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ

    May 31, 2025

    ಕೋಮು ದ್ವೇಷ ಪ್ರಚೋದನೆ ನಿಗ್ರಹಿಸಲು ದಿಟ್ಟಕ್ರಮ : `ವಿಶೇಷ ಕಾರ್ಯಪಡೆ’ ರಚಿಸಿ ಸರ್ಕಾರ ಆದೇಶ

    May 31, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.