Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಕಾರಾಗೃಹ ಅವ್ಯವಹಾರ ಪ್ರಕರಣ – ಮೂರು ಪ್ರತ್ಯೇಕ ತನಿಖಾ ತಂಡ ರಚನೆ
    ಇತ್ತೀಚಿನ ಸುದ್ದಿ

     ಕಾರಾಗೃಹ ಅವ್ಯವಹಾರ ಪ್ರಕರಣ – ಮೂರು ಪ್ರತ್ಯೇಕ ತನಿಖಾ ತಂಡ ರಚನೆ

    August 27, 2024
    Share

    ಬೆಂಗಳೂರು: ಹತ್ಯೆ ಪ್ರಕರಣದ ಆರೋಪಿ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿದ ಪ್ರಕರಣದ ತನಿಖೆಗೆ 3 ವಿಶೇಷ ತಂಡಗಳನ್ನ ರಚಿಸಲಾಗಿದೆ. ಕಾರಾಗೃಹದ ನಿಯಮಗಳನ್ನ ಉಲ್ಲಘಿಸಿರುವ ಆರೋಪದಡಿ ಪರಪ್ಪನ ಅಗ್ರಹಾರ ಪೊಲೀಸ್​ ಠಾಣೆಯಲ್ಲಿ 3 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2 ಪ್ರಕರಣಗಳಲ್ಲಿ ದರ್ಶನ್​ ಅವರೇ ಪ್ರಮುಖ ಆರೋಪಿಯಾಗಿದ್ದಾರೆ. ಮೂರೂ ಪ್ರಕರಣಗಳ ತನಿಖೆಗಾಗಿ ಪ್ರತ್ಯೇಕ‌ ತಂಡಗಳನ್ನ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ರಚಿಸಿದ್ದಾರೆ. ಮೊದಲನೇ ಪ್ರಕರಣದ ತನಿಖೆಯನ್ನ ಬೇಗೂರು ಪೊಲೀಸ್​ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್ ನಡೆಸಲಿದ್ದಾರೆ. ದರ್ಶನ್ ಅವರು ಜೈಲಿನ ಲಾನ್​ನಲ್ಲಿ ರೌಡಿಶೀಟರ್ಸ್ ಜೊತೆ ಕುಳಿತು ಕಾಫಿ ಕುಡಿಯುತ್ತ ಸಿಗರೇಟ್ ಸೇದುತ್ತಿದ್ದುದರ ಕುರಿತು ತನಿಖೆ ನಡೆಯಲಿದ್ದು, ಲಾನ್​ನಲ್ಲಿ ಎಲ್ಲರೂ ಒಟ್ಟಿಗೆ ಕೂರಲು ಕುರ್ಚಿಗಳ ವ್ಯವಸ್ಥೆ ಮಾಡಿದವರು ಯಾರು? ಕಾಫಿ ಮಗ್ ಕೊಟ್ಟವರು ಯಾರು? ಸಿಗರೇಟ್, ಮದ್ಯ, ಮಾದಕವಸ್ತುಗಳು ಜೈಲಿನಲ್ಲಿ ನಿಷೇಧವಿದ್ದರೂ ಸಿಕ್ಕಿದ್ದು ಹೇಗೆ ಎಂದು ತನಿಖೆ ನಡೆಯಲಿದೆ. ಎರಡನೇ ಪ್ರಕರಣದ ತನಿಖೆಯ ಜವಾಬ್ದಾರಿಯನ್ನ ಹುಳಿಮಾವು ಪೊಲೀಸ್​ ಠಾಣೆ ಇನ್ಸ್‌ಪೆಕ್ಟರ್ ಕುಮಾರಸ್ವಾಮಿಯವರಿಗೆ ವಹಿಸಲಾಗಿದೆ. ಮೊಬೈಲ್ ಫೋನ್​ನಲ್ಲಿ ಫೋಟೋ ಹಾಗೂ ವಿಡಿಯೋ ಚಿತ್ರೀಕರಣದ ಬಗ್ಗೆ ತನಿಖೆ ನಡೆಯಲಿದ್ದು, ಫೋಟೋ ತೆಗೆದಿದ್ದು ಯಾರು? ಆರೋಪಿಗಳು ವಿಡಿಯೋ ಕರೆ ಮಾಡಿದ್ದು ಯಾರಿಗೆ? ಜೈಲಿನಲ್ಲಿ ಮೊಬೈಲ್ ಬಳಕೆ ನಿಷೇಧವಿದ್ದರೂ ಸಹ ಮೊಬೈಲ್ ಸಿಕ್ಕಿದ್ದು ಹೇಗೆ.? ಒದಗಿಸಿದವರು ಯಾರು? ಜಾಮರ್ ವ್ಯವಸ್ಥೆ ಇದ್ದರೂ ಸಹ ಸಂಪರ್ಕ ಸಾಧ್ಯವಾಗಿದ್ದು ಹೇಗೆ ಎಂಬುದರ ಕುರಿತು ತನಿಖೆ ನಡಯಲಿದೆ. ಮೂರನೇ ಪ್ರಕರಣದ ತನಿಖೆಯನ್ನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್​ ಠಾಣೆಯ ಎಸಿಪಿ ಮಂಜುನಾಥ್ ನೇತೃತ್ಚದ ತಂಡ ನಡೆಸಲಿದೆ. ಜೈಲು ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ದಾಖಲಾಗಿರುವ ಪ್ರಕರಣದ ಕುರಿತು ತನಿಖೆ ನಡೆಯಲಿದೆ. ಆರೋಪಿಗಳಿಗೆ ಅನುಕೂಲಕರ ವಾತಾವರಣ ಕಲ್ಪಿಸಿದರು ಯಾರು? ಜೈಲಧಿಕಾರಿಗಳ ಗಮನಕ್ಕೆ ಬಾರದೆ ಇಷ್ಟೆಲ್ಲವೂ ಸಾಧ್ಯವಾಯಿತಾ ಎಂಬುದರ ಕುರಿತು ಸಮಗ್ರ ತನಿಖೆ ನಡೆಯಲಿದೆ.

    Post Views: 202

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.