ಬೆಳ್ತಂಗಡಿ: ಅಂಬ್ಯುಲೆನ್ಸ್ನಲ್ಲೇ ಡ್ರಗ್ಸ್ ಪೂರೈಕೆ ಮಾಡಿದ ಪ್ರಕರಣದಲ್ಲಿ ಸಿಲುಕಿಕೊಂಡು ಎಸ್ಕೇಪ್ ಆಗಿರುವ ಜಲೀಲ್ ಬಾಬಾನಿಗೆ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಈತ ವಿದೇಶಕ್ಕೆ ಪರಾರಿಯಾಗಿರುವ ಶಂಕೆ ಕೂಡಾ ವ್ಯಕ್ತವಾಗಿದೆ.
ಜೂನ್ 25ರಂದು ಮಂಗಳೂರಿನಲ್ಲಿ ಅಣ್ಣಪ್ಪ ಸ್ವಾಮಿ ಆಲಿಯಾಸ್ ಮನು ಎಂಬಾತನನ್ನು ಎಂಡಿಎಂಎ ಸಹಿತ ಬಂಧಿಸಲಾಗಿತ್ತು. ಈ ವೇಳೆ ಪೊಲೀಸರಿಗೆ ಬಾಗಲಕೋಟೆಯ ಡ್ರಗ್ ಲಿಂಕ್ ಬಗ್ಗೆ ಮಾಹಿತಿ ದೊರೆತಿತ್ತು. ಹೀಗಾಗಿ ಜುಲೈ 15ರಂದು ಬಾಗಲಕೋಟೆಯ ಲಾಡ್ಜ್ ಮೇಲೆ ದಾಳಿ ನಡೆಸಿದ್ದ ಮಂಗಳೂರು ಸಿಸಿಬಿ ಪೊಲೀಸರು, ಅಲ್ಲಿ ಮೂವರನ್ನು ಬಂಧಿಸಿ ಐದು ಕೋಟಿ ಮೌಲ್ಯದ ಐದು ಕೆಜಿ ಡ್ರಗ್ಸ್ ವಶ ಪಡಿಸಿಕೊಂಡಿದ್ದರು.
ಈ ವೇಳೆ ಬೆಳ್ತಂಗಡಿಯ ಮಹಮ್ಮದ್ ಅಲ್ಫಾಜ್, ಮಹಮ್ಮದ್ ಮುಸ್ತಾಫಾ ಅರೆಸ್ಟ್ ಆಗಿದ್ದರು. ಬಂಧಿತ ಮೂವರು ಲೋಕಲ್ ಪೆಡ್ಲರ್ ಜಲೀಲ್ ಬಾಬಾಗೆ ಡ್ರಗ್ಸ್ ಒದಗಿಸುತ್ತಿದ್ದ ಬಗ್ಗೆ ಸ್ಪೋಟಕ ಮಾಹಿತಿ ತಖೆ ವೇಳೆ ಲಭ್ಯವಾಗಿದೆ. ಈತನ ಹುಡುಕಾಟದಲ್ಲಿ ಪೊಲೀಸರು ನಿರತರಾಗಿದ್ದಾರೆ.




